Homeಕರ್ನಾಟಕ'ಒಂದು ದೇಶ ಒಂದು ಚುನಾವಣೆ' | ಒಕ್ಕೂಟ ವ್ಯವಸ್ಥೆಗೆ ವಿರುದ್ಧ ಮತ್ತು ಅನುಷ್ಠಾನ ಅಸಾಧ್ಯ -...

‘ಒಂದು ದೇಶ ಒಂದು ಚುನಾವಣೆ’ | ಒಕ್ಕೂಟ ವ್ಯವಸ್ಥೆಗೆ ವಿರುದ್ಧ ಮತ್ತು ಅನುಷ್ಠಾನ ಅಸಾಧ್ಯ – ಸಿದ್ದರಾಮಯ್ಯ

ತರಾತುರಿಯ ಅನುಷ್ಠಾನಕ್ಕೆ ಹೊರಟಿದ್ದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶದ ಅನಾವರಣ ಎಂದು ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂಓದಿ: ದಲಿತರ ಮನೆಗಳಿಗೆ ಬೆಂಕಿ: ಬಿಹಾರದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಎಸ್‌ಪಿ ವಾಗ್ದಾಳಿ

“ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ.

ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘ಒಂದು ದೇಶ ಒಂದು ಚುನಾವಣೆ’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

“ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘ಒಂದು ದೇಶ ಒಂದು ಚುನಾವಣೆ’ ಯ ವ್ಯವಸ್ಥೆಗೆ ವಿರುದ್ಧವಾಗಿದೆ.” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪನೆ | ಪ್ರಧಾನಿ ಭರವಸೆ

“ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ.
ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎ ಗೆ ಕೂಡಾ ಕಷ್ಟ ಸಾಧ್ಯ. ಇವೆಲ್ಲವೂ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...