Homeಕರ್ನಾಟಕ'ಒಂದು ದೇಶ ಒಂದು ಚುನಾವಣೆ' | ಒಕ್ಕೂಟ ವ್ಯವಸ್ಥೆಗೆ ವಿರುದ್ಧ ಮತ್ತು ಅನುಷ್ಠಾನ ಅಸಾಧ್ಯ -...

‘ಒಂದು ದೇಶ ಒಂದು ಚುನಾವಣೆ’ | ಒಕ್ಕೂಟ ವ್ಯವಸ್ಥೆಗೆ ವಿರುದ್ಧ ಮತ್ತು ಅನುಷ್ಠಾನ ಅಸಾಧ್ಯ – ಸಿದ್ದರಾಮಯ್ಯ

ತರಾತುರಿಯ ಅನುಷ್ಠಾನಕ್ಕೆ ಹೊರಟಿದ್ದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶದ ಅನಾವರಣ ಎಂದು ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂಓದಿ: ದಲಿತರ ಮನೆಗಳಿಗೆ ಬೆಂಕಿ: ಬಿಹಾರದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಎಸ್‌ಪಿ ವಾಗ್ದಾಳಿ

“ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ.

ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘ಒಂದು ದೇಶ ಒಂದು ಚುನಾವಣೆ’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

“ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘ಒಂದು ದೇಶ ಒಂದು ಚುನಾವಣೆ’ ಯ ವ್ಯವಸ್ಥೆಗೆ ವಿರುದ್ಧವಾಗಿದೆ.” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪನೆ | ಪ್ರಧಾನಿ ಭರವಸೆ

“ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ.
ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎ ಗೆ ಕೂಡಾ ಕಷ್ಟ ಸಾಧ್ಯ. ಇವೆಲ್ಲವೂ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...