ಸಿಎಎ, ಎನ್ಆರ್ಸಿ ಮತ್ತು ಎನ್ಪಿಆರ್ ವಿರೋಧಿಸಿ ದೆಹಲಿಯ ಶಾಹೀನ್ ಬಾಗ್ನಲ್ಲಿ ತಿಂಗಳುಗಟ್ಟಲೇ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ 1 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿ ಕಾನೂನು ನೋಟಿಸ್ ಕಳುಹಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಟ್ವಿಟ್ಟರ್ನಲ್ಲಿ ನೀವು ಪೋಸ್ಟ್ ಮಾಡಿದ ಮತ್ತು ಅನುಮೋದಿಸಿದ ವೀಡಿಯೊವನ್ನು ಹಲವಾರು ಮಾಧ್ಯಮ ವೇದಿಕೆಗಳಲ್ಲಿ ಪ್ಲೇ ಮಾಡಲಾಗಿದೆ, ಪ್ರತಿಭಟನಾಕಾರರು ಪ್ರತಿಭಟನೆಯ ಭಾಗವಹಿಸಲು 500-700 ರೂಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದೀರಿ. ಇಂತಹ ಹೇಳಿಕೆಗಳು ಸುಳ್ಳು ಮಾತ್ರವಲ್ಲದೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನಾಕಾರರನ್ನು ಹೀಯಾಳಿಸುವ ಕೆಲಸ ಮಾಡಿದ್ದೀರಿ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಈ ತಪ್ಪು ಮಾಹಿತಿಯನ್ನು ಮೂಲಕ ಸಾಮೂಹಿಕವಾಗಿ ಹರಡುವ ಮೂಲಕ ಸಾರ್ವಜನಿಕರನ್ನು ಮಾಳವಿಯ ದಾರಿತಪ್ಪಿಸಿದ್ದಾರೆ. ಹಾಗಾಗಿ ಪ್ರತಿಭಟನಾಕಾರರನ್ನು ಅವಮಾನಿಸಿದ್ದಕ್ಕಾಗಿ ನೀವು 1 ಕೋಟಿ ರೂ. ಪಾವತಿಸಲು ಹೊಣೆಗಾರರಾಗಿದ್ದೀರಿ” ಎಂದು ಪ್ರತಿಭಟನಾಕಾರರ ಪರ ವಕೀಲರು ಕಳುಹಿಸಿದ ನೋಟಿಸ್ ಹೇಳಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಯನ್ನು ವಿರೋಧಿಸಲು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಜನರು ಈಗ ಶಾಹೀನ್ ಬಾಗ್ ಮತ್ತು ಹತ್ತಿರದ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸುತ್ತಿದ್ದಾರೆ.
ಆದರೆ ಈ ಪ್ರತಿಭಟನೆಯ ಯಶಸ್ಸನ್ನು ಸಹಿಸಿಕೊಳ್ಳದ ಕಿಡಿಗೇಡಿಗಳು ಇದರ ವಿರುದ್ಧ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದಾರೆ.