Homeಮುಖಪುಟಪಂಜಾಬ್: ರೈತರ ಪ್ರತಿಭಟನೆ ವೇಳೆ ಘರ್ಷಣೆ: ಓರ್ವ ರೈತ ಸಾವು

ಪಂಜಾಬ್: ರೈತರ ಪ್ರತಿಭಟನೆ ವೇಳೆ ಘರ್ಷಣೆ: ಓರ್ವ ರೈತ ಸಾವು

- Advertisement -
- Advertisement -

ಪಂಜಾಬ್‌ನ ಲಾಂಗೋವಾಲ್‌ನಲ್ಲಿ ರೈತರ ಪ್ರತಿಭಟನೆ ವೇಳೆ ಪೊಲೀಸರ ಜೊತೆ ಘರ್ಷಣೆ ನಡೆದಿದ್ದು, ಈ ವೇಳೆ ಟ್ರಾ ಕ್ಟರ್ ಟ್ರಾಲಿಯ ನಡುವೆ ಸಿಲುಕಿ ಓರ್ವ ರೈತ ಮೃತಪಟ್ಟು ಐವರು ಪೊಲೀಸರು ಗಾಯಗೊಂಡಿದ್ದಾರೆ.

ಸಂಗ್ರೂರ್‌ನ ಮಂದರ್ ಕಲಾನ್ ಗ್ರಾಮದ ಪ್ರೀತಮ್ ಸಿಂಗ್ (55) ಮೃತ ರೈತ. ಅವರು ಲಾಂಗೋವಾಲ್ ಪ್ರದೇಶದಲ್ಲಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.

ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ, ಭಾರತಿ ಕಿಸಾನ್ ಯೂನಿಯನ್, ಬಿಕೆಯು, ಆಜಾದ್ ಕಿಸಾನ್ ಸಮಿತಿ, ಬಿಕೆಯು ಸೇರಿದಂತೆ 16 ರೈತ ಸಂಘಗಳ ನೇತೃತ್ವದಲ್ಲಿ ಇಂದು  ಚಂಡೀಗಢದಲ್ಲಿ ಪ್ರತಿಭಟನೆ ನಡೆಯಲಿದೆ.

ಪ್ರವಾಹದಿಂದ ಉಂಟಾದ ನಷ್ಟಕ್ಕೆ ಪರಿಹಾರವನ್ನು ಕೋರಿ ಚಂಡೀಗಢದಲ್ಲಿ ನಡೆದ ಪ್ರತಿಭಟನೆಗೆ ಮುನ್ನ ಹರಿಯಾಣ ಮತ್ತು ಪಂಜಾಬ್‌ನ ಹಲವಾರು ರೈತ ಮುಖಂಡರನ್ನು ಆಯಾ ರಾಜ್ಯದ ಪೊಲೀಸರು ಬಂಧಿಸಿದ್ದಾರೆ.

ಚಂಡೀಗಢದಲ್ಲಿ ಆಗಸ್ಟ್ 22 ರಂದು ನಡೆಯಲಿರುವ ಪ್ರತಿಭಟನೆಗೆ ಮುನ್ನ ಹರ್ಯಾಣದ ಕನಿಷ್ಠ 20 ಮತ್ತು ಪಂಜಾಬ್‌ನ 50 ಜನರನ್ನು ವಿವಿಧ ಜಿಲ್ಲೆಗಳಿಂದ ಬಂಧಿಸಲಾಗಿದೆ ಎಂದು ಮೂಲಗಳು ದಿ ವೈರ್‌ಗೆ ತಿಳಿಸಿವೆ.

ಜುಲೈನಲ್ಲಿ ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರವಾಹ ಉಂಟಾಗಿತ್ತು. ಇದು ರೈತರಿಗೆ ಭೀಕರ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಅಂದಿನಿಂದ ರೈತ ಸಂಘಟನೆಗಳು ಪ್ರವಾಹ ಸಂತ್ರಸ್ತರಿಗೆ ಪರಿಹಾರಕ್ಕಾಗಿ ಒತ್ತಾಯಿಸುತ್ತಿವೆ. ಬೆಳೆ ನಷ್ಟಕ್ಕೆ ಎಕರೆಗೆ 50 ಸಾವಿರ, ಹಾನಿಗೀಡಾದ ಮನೆಗೆ 5 ಲಕ್ಷ, ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಪಂಜಾಬ್ ಮತ್ತು ಹರ್ಯಾಣ ರಾಜ್ಯ ಸರ್ಕಾರಗಳು ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದಿರುವ ಬಗ್ಗೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.ರೈತ ಮುಖಂಡರ ಬಂಧನ, ಹರ್ಯಾಣದ ಬಿಜೆಪಿ ಸರ್ಕಾರ ಮತ್ತು ಪಂಜಾಬ್‌ನ ಎಎಪಿ ಸರ್ಕಾರದ ಜಂಟಿ ಕಾರ್ಯಾಚರಣೆಯಾಗಿದೆ ಎಂದು ರೈತ ಮುಖಂಡರೋರ್ವರು ಆರೋಪಿಸಿದ್ದಾರೆ.

ಅವರು ಎಂದಿಗೂ ಮಾದಕ ದ್ರವ್ಯಗಳ ವಿಚಾರದಲ್ಲಿ ಜಂಟಿ ಕಾರ್ಯಾಚರಣೆಯನ್ನು ನಡೆಸಲಿಲ್ಲ. ಕೋಮು ಹಿಂಸಾಚಾರವನ್ನು ನಿಲ್ಲಿಸಲು ಅವರು ಒಂದಾಗಿ ಕಾರ್ಯಾಚರಣೆ ನಡೆಸಿಲ್ಲ. ಆದರೆ ರೈತರ ಪ್ರತಿಭಟನೆಯನ್ನು ನಿಲ್ಲಿಸಲು ಎರಡೂ ರಾಜ್ಯಗಳು ಒಗ್ಗೂಡಿದವು ಎಂದು ಭಾರತೀಯ ಕಿಸಾನ್ ಯೂನಿಯನ್ ನ ವಕ್ತಾರರು ಹೇಳಿದ್ದಾರೆ.

ಇದನ್ನು ಓದಿ: ಪಾಕಿಸ್ತಾನದ ಮೇಲೆ ಮತ್ತೆ ಸರ್ಜಿಕಲ್ ಸ್ಟ್ರೈಕ್; ಸುಳ್ಳು ಸುದ್ದಿ ಎಂದ ರಕ್ಷಣಾ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...