Homeಮುಖಪುಟವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ಬಿ ನಾಗೇಂದ್ರ ರಾಜೀನಾಮೆ ಸಾಧ್ಯತೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ಬಿ ನಾಗೇಂದ್ರ ರಾಜೀನಾಮೆ ಸಾಧ್ಯತೆ

- Advertisement -
- Advertisement -

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣಕ್ಕೆ ಸಂಬಂಧಿಸಿ ಸಚಿವ ಬಿ ನಾಗೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಜೀನಾಮೆ ನೀಡುವಂತೆ ಸೂಚಿಸಿದ್ದು, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಶರಣಾಗಿ 5 ಪುಟಗಳ ಡೆತ್ ನೋಟ್ ಬರೆದ ನಂತರ ಬೆಳಕಿಗೆ ಬಂದ ಬಹುಕೋಟಿ ಹಗರಣದಲ್ಲಿ ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಡೆತ್‌ನೋಟ್‌ನಲ್ಲಿ ಚಂದ್ರಶೇಖರನ್ ತಮ್ಮ ಮೇಲಧಿಕಾರಿಗಳು ಮತ್ತು ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿರಿಸಲಾಗಿದ್ದ 187 ಕೋಟಿ ರೂ.ಗಳಲ್ಲಿ 90 ಕೋಟಿ ರೂ.ಗಳ ಹಣವನ್ನು ಬಹು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಆಧಾರದ ಮೇಲೆ ಸಿಬಿಐ ಎಫ್‌ಐಆರ್ ದಾಖಲಿಸಿದ ಸುದ್ದಿ ಹೊರಬಿದ್ದ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತು ಸಭೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಗೇಂದ್ರ ಅವರನ್ನು ಕರೆಸಿ ರಾಜೀನಾಮೆ ಕೇಳಲು ಕಾರಣವಾದ ಸಂದರ್ಭಗಳನ್ನು ವಿವರಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಸಿಕ್ಕರೆ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸುವುದಾಗಿ ಉಭಯ ನಾಯಕರು ಭರವಸೆ ನೀಡಿದ ನಂತರವೇ ನಾಗೇಂದ್ರ ರಾಜೀನಾಮೆ ನೀಡಲು ಒಪ್ಪಿಕೊಂಡರು ಎಂದು  ವರದಿಯಾಗಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 94.73 ಕೋಟಿ ಮೊತ್ತವನ್ನು ಯೂನಿಯನ್ ಬ್ಯಾಂಕ್‌ನ ವಸಂತನಗರ ಶಾಖೆಯಿಂದ ಎಂ.ಜಿ. ರಸ್ತೆಯ ಶಾಖೆಗೆ ವರ್ಗಾಯಿಸಲಾಗಿತ್ತು. ಅಲ್ಲಿಂದ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್‌ ಸೊಸೈಟಿಯ 18 ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ಸೊಸೈಟಿಯ ಖಾತೆಗಳಿಂದ ಹೈದರಾಬಾದ್‌ನ ರತ್ನಾಕರ ಬ್ಯಾಂಕ್ ಲಿಮಿಟೆಡ್‌ಗೆ (ಆರ್‌ಬಿಎಲ್‌) ವರ್ಗಾಯಿಸಿ, ಅಲ್ಲಿಂದ ಹಣವನ್ನು ಡ್ರಾ ಮಾಡಿಕೊಳ್ಳಲಾಗಿತ್ತು ಎಂಬ ಆರೋಪ ಇದೆ.

ಈ ಅಕ್ರಮದ ತನಿಖೆಗೆ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ಸರಕಾರ ಎಸ್ಐಟಿ ತನಿಖೆಗೆ ಆದೇಶಿಸಿದೆ. ತನಿಖಾಧಿಕಾರಿಗಳು ಇದೀಗ ನಿಗಮದ ಅಧಿಕಾರಿಗಳನ್ನು ಹಾಗೂ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಅವರನ್ನು ಈಗಾಗಲೇ ಬಂಧಿಸಿದೆ.

ಸಚಿವ ನಾಗೇಂದ್ರ ರಾಜೀನಾಮೆ ಜೂ.6ರವರೆಗೆ ಗಡುವು ನೀಡಿರುವ ಬಿಜೆಪಿಗರು, ಇಂದು ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಪ್ರತಿಪಕ್ಷಗಳು ಈ ವಿಚಾರನ್ನು ದೊಡ್ಡದಾಗಿ ಮಾಡಿ ರಾಜಕೀಯ ಮಾಡುವ ಮೊದಲೇ ಸಿಎಂ ಮಹತ್ವದ ನಿರ್ಧಾರ ತೆಗೆದುಕೊಂಡು ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಹೆಸರಿಸಿದ್ದ ಇಬ್ಬರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...