Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...