Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...