Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...