Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...