Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...