Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...