Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...