Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...