Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...