Homeಕರ್ನಾಟಕನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

ನಿವೇಶನವಿಲ್ಲದೇ 30 ವರ್ಷದಿಂದ ಗುಹೆಯಲ್ಲಿಯೇ ವಾಸಿಸುತ್ತಿರುವ ಕುಟುಂಬ: ಮಧುಗಿರಿಯಲ್ಲೊಂದು ಅಮಾನವೀಯ ಪ್ರಕರಣ ಬೆಳಕಿಗೆ

- Advertisement -
- Advertisement -

ತುಮಕೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಮಧುಗಿರಿಯಲ್ಲಿ ಒಂದು ಕುಟುಂಬ ವಸತಿ ವಂಚಿತರಾಗಿ ಮೂವತ್ತೊಂದು ವರ್ಷಗಳಿಂದ ಗುಹೆಯಲ್ಲಿ ವಾಸ ಮಾಡುತ್ತಿರುವಂತಹ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಸರ್ಕಾರಗಳು, ಅಧಿಕಾರಿಗಳು ಬಡವರನ್ನು ಯಾವ ರೀತಿ ನಿರ್ಲಕ್ಷ್ಯ ಮಾಡುತ್ತಿವೆ ಎನ್ನುವುದಕ್ಕೆ ಈ ಕುಟುಂಬದ ಪಾಡು ಸಾಕ್ಷಿಯಾಗಿದೆ.

ಮಧುಗಿರಿ ತಾಲ್ಲೂಕು ಬಿಜವರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಂಬತ್ತನಹಳ್ಳಿ ಗ್ರಾಮದಿಂದ ಒಂದು ಕಿ.ಮೀ ದೂರದಲ್ಲಿ ತಿಮ್ಮಣ್ಣ ಮತ್ತು ನಾಗಮ್ಮ ಎಂಬ ದಂಪತಿಗಳು ಅಂಬೆಸೆಯುವ ಗುಡ್ಡದಲ್ಲಿ ಹಲವು ವರ್ಷಗಳಿಂದ ಭಯ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚಿನ ಕರಡಿದಾಳಿಗಳು ನಡೆದಿದ್ದು ಅನೇಕ ಜನರ ಜೀವಹಾನಿಯಾಗಿದೆ. ಇಂತಹ ಪ್ರದೇಶದಲ್ಲಿ ಒಂದು ಕುಟುಂಬ ಒಂಟಿಯಾಗಿ ಗುಹೆಯಲ್ಲಿ ವಾಸ ಮಾಡುತ್ತಿರುವ ಘಟನೆ ಇಡೀ ನಾಗರಿಕ ಸಮಾಜಕ್ಕೆ ತಕ್ಕುದ್ದಲ್ಲ.

ವಿಡಿಯೋ ನೋಡಿ:

ಮೂಲತಃ ಇದೇ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯದವರಾದ ಈ ದಂಪತಿಗಳು ಮದುವೆಯಾದ ಹೊಸತರಲ್ಲೇ ನೆಲೆಯಿಲ್ಲದೆ ಊರು ಊರು ಸುತ್ತುತ್ತಾ ಕಂಬತ್ತನಹಳ್ಳಿಗೆ ಬಂದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ. ಆದರೆ ಕೆಲವು ಸ್ಥಳೀಯರ ಕಿರಿ-ಕಿರಿಯಿಂದ ಬೇಸತ್ತು ಈ ಗುಡದ್ದ ಕಡೆ ಮುಖ ಮಾಡಿದ್ದು ಈ ಗುಹೆಯಲ್ಲಿ ಮೊದಲಿದ್ದ ಸಾಧು ಶಂಕರಪ್ಪನವರ ಹತ್ತಿರ ಆಶ್ರಯ ಪಡೆದು ಜೀವನ ಸಾಗಿಸಿದ್ದಾರೆ. ಶಂಕರಪ್ಪ ತೀರಿಕೊಂಡ ಬಳಿಕ ಇಲ್ಲೆ ಗುಹೆ ಒಳಗೆ ತಮ್ಮ ಜೀವನವನ್ನು ಸಾಗಿಸುತ್ತಾ ಬಂದಿದ್ದಾರೆ.

ಈ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಐದು ಜನ ಗಂಡುಮಕ್ಕಳಿದ್ದಾರೆ. ಈ ಹಿಂದೆಯೇ ಹೇಗೋ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆಯಾಗಿದೆ. ಆದರೆ ಐದು ಜನ ಗಂಡು ಮಕ್ಕಳಿಗೆ ಮದುವೆ ಮಾಡಲು ಯಾರು ಹೆಣ್ಣು ಕೊಡುತ್ತಿಲ್ಲ. “ಊರಿನಿಂದ ದೂರ ಇದ್ದೀರಿ ಮತ್ತು ಗುಹೆಯಲ್ಲಿ ವಾಸಿಸುತ್ತಿದ್ದೀರಿ, ನಿಮ್ಮ ಮಕ್ಕಳಿಗೆ ನಾವು ಹೇಗೆ ಹೆಣ್ಣು ಕೊಡುವುದು ಎಂದು ಎಲ್ಲರೂ ಕೇಳುತ್ತಾರೆ. ನಿಮ್ಮ ಮಕ್ಕಳಿಗೆ ಮದುವೆಯೇ ಆಗುವುದಿಲ್ಲವೆಂದು ಹೀಯಾಳಿಸುತ್ತಿದ್ಧಾರೆ” ಎಂದು ದಂಪತಿಗಳು ತಮ್ಮ ಗೋಳು ತೋಡಿಕೊಂಡಿದ್ದಾರೆ.

ಇವರು ನಿವೇಶನ ಮತ್ತು ಮನೆಯನ್ನು ಪಡೆಯಲು ಕಂಡ ಕಂಡವರ ಬಳಿ ಬಹಳ ವರ್ಷಗಳಿಂದ ತಿರುಗಿದರೂ ಸಹ ಪ್ರಯೋಜನವಾಗಿಲ್ಲ. ಇಪ್ಪತ್ತು ವರ್ಷಗಳ ಹಿಂದೆ ಆಶ್ರಯ ಮನೆ ಯೋಜನೆಯಡಿಯಲ್ಲಿ ಮನೆ ಮಂಜೂರಾಗಿತ್ತು ಆದರೆ ಮನೆ ಕಟ್ಟಲು ನಿವೇಶನವೇ ಇಲ್ಲ! ಸರ್ಕಾರಕ್ಕೆ ಎಷ್ಟು ಬೇಡಿಕೊಂಡರು ಸಹ ಇವರಿಗೆ ಒಂದು ನಿವೇಶನ ಕೊಡುವಷ್ಟು ಗತಿ ಇಲ್ಲ ಸರ್ಕಾರಕ್ಕೆ.

ಇವರ ಇಬ್ಬರು ಮಕ್ಕಳು ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಹೋಗಿದ್ದು, ಉಳಿದ ಮೂರು ಜನ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಹೇಗೋ ಕಷ್ಟಪಟ್ಟು ಆಧಾರ್, ರೇಷನ್ ಕಾರ್ಡ್, ಗುರುತಿನ ಚೀಟಿ ಮಾಡಿಸಿಕೊಂಡಿದ್ದಾರೆ. ಆದರೆ ಈ ಗುಹೆಯ ಕಡೆ ಮೂಲಭೂತ ಸೌಕರ್ಯಗಳೆಂಬುದು ಕನಸಿನ ಮಾತಾಗಿದೆ.

ಇಷ್ಟು ದಿನ ಗಾಢ ನಿದ್ದೆಯಲ್ಲಿದ್ದ ತಾಲ್ಲೂಕು ಅಧಿಕಾರಿಗಳು ಇಂದು ದಿನಪತ್ರಿಕೆಗಳಲ್ಲಿ ಈ ವಿಷಯ ದೊಡ್ಡ ಸುದ್ದಿಯಾದ ನಂತರವಷ್ಟೇ ತಹಶೀಲ್ದಾರ್‌ ಇಂದು ಆ ಗುಹೆ ಕಡೆ ಮುಖ ಮಾಡಿದ್ದಾರೆ. ಜನಪ್ರತಿನಿಧಿಗಳು ಪತ್ತೆಯೇ ಇಲ್ಲ.

ಮಧುಗಿರಿಯ ಜನಪ್ರತಿನಿಧಿಗಳು ಪುಡಾರಿ ರಾಜಕಾರಣ ಮಾಡುವುದು ಮತ್ತು ಕಾಂಟ್ರಾಕ್ಟರ್‌ಗಳ ಹತ್ತಿರ ಕಮೀಶನ್ ಹೊಡೆಯುವುದೆ ತಮ್ಮ ಜೀವಮಾನದ ಸಾಧನೆ ಎಂಬುವುದನ್ನು ಬಿಟ್ಟು ಪಕ್ಷಾತೀತವಾಗಿ ಜನರ ಸಮಸ್ಯೆಗಳ ಕಡೆ ಗಮನ ಹರಿಸಬೇಕಿದೆ. ಈ ಪರಿಸ್ಥಿತಿ ಮಧುಗಿರಿ ತಾಲ್ಲೂಕಿನ ಮಾತ್ರವಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ದಯನೀಯ ಸ್ಥಿತಿಯಲ್ಲಿ ಲಕ್ಷಾಂತರ ಕುಟುಂಬಗಳು ದಿನದೂಡುತ್ತಿದ್ದಾರೆ.

ಅದಕ್ಕಾಗಿಯೇ ಹಿರಿಯ ಸ್ವತಂತ್ರ್ಯ ಹೋರಾಟಗಾರರಾದ ಹೆಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯೂ ಮೂರು ವರ್ಷಗಳಿಂದ ಜನರಿಗೆ ತುಂಡುಭೂಮಿ ಸಿಗಬೇಕೆಂದು ಹೋರಾಟ ನಡೆಸಿದ್ದಾರೆ. ನೂರಾರು ಹೋರಾಟಗಳನ್ನು ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈಗಲಾದರೂ ಎಚ್ಚೆತ್ತು ಈ ಕುಟುಂಬಕ್ಕೆ ನೀವೇಶನ ನೀಡಿ ಮನೆಯನ್ನು ಕಟ್ಟಿಸಿಕೊಡಬೇಕು. ಅದೇ ರೀತಿ ರಾಜ್ಯದಲ್ಲಿರುವ ಇತರೆ ಬಡವರಿಗೆ ಗೌರವಯುತವಾಗಿ ಬದುಕುವಂತಹ ವಾತಾವರಣ ನಿರ್ಮಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...