Homeಮುಖಪುಟ'ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ' : ಪ್ರಿಯಾಂಕಾ ಗಾಂಧಿ

‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

- Advertisement -
- Advertisement -

ಲೋಕಸಭೆಯಲ್ಲಿ ಇಂದು(ಡಿ.13)ಚೊಚ್ಚಲ ಭಾಷಣ ಮಾಡಿದ ವಯನಾಡ್ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅದಾನಿ ವಿಷಯವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ದ ಗುಡುಗಿದರು.

ಕೇಂದ್ರದ ಬಿಜೆಪಿ ಸರ್ಕಾರವು ಭಾರತೀಯ ಜನತೆಯ ವೆಚ್ಚದಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಕಡೆಗೆ ಅನಗತ್ಯ ಒಲವು ತೋರುತ್ತಿದೆ ಎಂದು ಆರೋಪಿಸಿದರು. 142 ಕೋಟಿ ನಾಗರಿಕರ ಕಲ್ಯಾಣಕ್ಕಿಂತ ಒಬ್ಬ ವ್ಯಕ್ತಿಯ ಹಿತಾಸಕ್ತಿಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.

“ದೇಶದ ಸಂಪತ್ತು, ವಿಮಾನ ನಿಲ್ದಾಣಗಳು ಮತ್ತು ಭೂಮಿಯನ್ನು ಒಬ್ಬ ವ್ಯಕ್ತಿಗೆ ಅನುಕೂಲವಾಗುವಂತೆ ಹಸ್ತಾಂತರಿಸಲಾಗುತ್ತಿದೆ. ಬಡ ಭಾರತೀಯರು ಸಂಕಷ್ಟದಲ್ಲಿದ್ದಾರೆ. ಸಾರ್ವಜನಿಕ ಸಂಪನ್ಮೂಲಗಳ ಈ ಘೋರ ದುರುಪಯೋಗ ಒಪ್ಪುವಂತದಲ್ಲ ಎಂದು ಪ್ರಿಯಾಂಕಾ ಹೇಳಿದರು.

ಎನ್‌ಡಿಎ ಸರ್ಕಾರವು ಭಿನ್ನಾಭಿಪ್ರಾಯವನ್ನು ಮೌನಗೊಳಿಸಲು ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಇದೇ ವೇಳೆ ಪ್ರಿಯಾಂಕಾ ಗಾಂಧಿ ಆರೋಪಿಸಿದರು. ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಹತ್ತಿಕ್ಕಲು ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ, ಈ ಅಧಿಕಾರ ದುರ್ಬಳಕೆ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ” ಎಂದರು.

ಎನ್‌ಡಿಎ ಸರ್ಕಾರ ತನ್ನ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕರ ಆರೋಪವನ್ನು ಪ್ರಿಯಾಂಕಾ ಪುನರುಚ್ಚರಿಸಿದರು.

ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಪ್ರಿಯಾಂಕಾ ಅವರು, ಸತ್ಯ ಮತ್ತು ಅಹಿಂಸೆಯ ತತ್ವಗಳಲ್ಲಿ ಬೇರೂರಿರುವ ಭಾರತದ ಸ್ವಾತಂತ್ರ್ಯ ಚಳವಳಿಯ ವಿಶಿಷ್ಟ ಸ್ವರೂಪವನ್ನು ಒತ್ತಿ ಹೇಳಿದರು.

ಭಾರದ ಸಂವಿಧಾನವನ್ನು ‘ಪರಿವರ್ತಕ ಶಕ್ತಿ’ ಎಂದು ಶ್ಲಾಘಿಸಿದ ಪ್ರಿಯಾಂಕಾ, ಸಂವಿಧಾನ ನಾಗರಿಕರಿಗೆ ತಮ್ಮ ಹಕ್ಕು ಮತ್ತು ನ್ಯಾಯವನ್ನು ಪಡೆಯಲು ಅವಕಾಶ ನೀಡಿದೆ ಎಂದರು.

“ಸಂವಿಧಾನವು ಜನರಿಗೆ ತಮ್ಮ ಹಕ್ಕು ಮತ್ತು ನ್ಯಾಯವನ್ನು ಕೇಳಿ ಪಡೆಯುವ ಅವಕಾಶ ನೀಡಿದೆ. ಅಗತ್ಯವಿದ್ದಾಗ ಸರ್ಕಾರದ ವಿರುದ್ಧ ಧ್ವನಿ ಎತ್ತುವ ಸಾಮರ್ಥ್ಯವನ್ನು ಕೊಟ್ಟಿದೆ ಎಂದು ಕೊಂಡಾಡಿದರು.ಪ್ರಜಾಪ್ರಭುತ್ವ ಮತ್ತು ಹೊಣೆಗಾರಿಕೆಯನ್ನು ಎತ್ತಿಹಿಡಿಯುವಲ್ಲಿ ಅದರ ಪಾತ್ರವನ್ನು ಒತ್ತಿ ಹೇಳಿದರು.

ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ, ಅದು ಖಂಡಿತವಾಗಿಯೂ ಸಂವಿಧಾನದ ಅಂಶಗಳನ್ನು ಬದಲಾಯಿಸುತ್ತದೆ. ಬಡ ಜನರು ಮತ್ತು ಬುಡಕಟ್ಟು ಜನಾಂಗದವರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದರು.

ರೈತರ ಸಂಕಷ್ಟದ ಬಗ್ಗೆ ಸರ್ಕಾರ ನಿರಾಸಕ್ತಿ ತೋರುತ್ತಿದೆ ಎಂದ ಪ್ರಿಯಾಂಕಾ, “ದೇಶದ ರೈತರು ಅಳುತ್ತಿದ್ದಾರೆ, ಆದರೆ ಸರ್ಕಾರ ಅವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಸವಾಲುಗಳನ್ನು ಎದುರಿಸುವ ಬದಲು ಬಿಜೆಪಿ ಹಳೆಯ ವಿಷಯಗಳನ್ನು ಕೆದಕುತ್ತಿದೆ ಎಂದು ವಯನಾಡ್ ಸಂಸದೆ ಟೀಕಿಸಿದರು.ಬಿಜೆಪಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುವ ಕೆಲಸ ಮಾಡುತ್ತಿದೆ. ಈಗ ದೇಶಕ್ಕೆ ಅಗತ್ಯವಿರುವ ಬದಲಾವಣೆಗಳನ್ನು ಜಾರಿಗೆ ತರಲು ಅದು ಏನನ್ನೂ ಮಾಡಿಲ್ಲ” ಎಂದು ಪ್ರಿಯಾಂಕಾ ಕಿಡಿಕಾರಿದರು.

ಇದನ್ನೂ ಓದಿ : ದೆಹಲಿ ಚುನಾವಣೆ | ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...