Homeಅಂತರಾಷ್ಟ್ರೀಯCOP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ 'ಪಳೆಯುಳಿಕೆ ಇಂಧನ ಲಾಬಿದಾರ'

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ವಿಶ್ವ ಹವಾಮಾನ ಶೃಂಗಸಭೆ (COP30)ಯಲ್ಲಿ ಭಾಗವಹಿಸಿರುವ ಪ್ರತಿ 25 ಜನರಲ್ಲಿ ಒಬ್ಬರು ಪಳೆಯುಳಿಕೆ ಇಂಧನ ಲಾಬಿದಾರ ಇದ್ದಾರೆ. ಶೃಂಗಸಭೆ ನಡೆಯುತ್ತಿರುವ ಆವರಣದಲ್ಲಿ ಒಟ್ಟು 1,602 ಲಾಬಿದಾರರು ಪತ್ತೆಯಾಗಿದ್ದಾರೆ ಎಂದು ಕಿಕ್ ಬಿಗ್ ಪೊಲ್ಯೂಟರ್ಸ್ ಔಟ್ (ಕೆಬಿಪಿಒ) ಬಿಡುಗಡೆ ಮಾಡಿದ ವರದಿ ತಿಳಿಸಿದೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕೆಬಿಪಿಒ ಎಂಬುದು 450ಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವಾಗಿದ್ದು, ಜಾಗತಿಕ ತಾಪಮಾನ ಹೆಚ್ಚಳಕ್ಕೆ ಹೆಚ್ಚು ಕಾರಣರಾದವರೇ ಹವಾಮಾನ ಸಂಬಂಧಿತ ನಿಯಮ ರೂಪಿಸುವುದನ್ನು ಈ ಒಕ್ಕೂಟ ವಿರೋಧಿಸುತ್ತದೆ. ಪ್ರತಿ ವರ್ಷ, ಒಕ್ಕೂಟವು ವಾರ್ಷಿಕ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪಳೆಯುಳಿಕೆ ಇಂಧನ ಲಾಬಿ ಮಾಡುವವರ ಸಂಖ್ಯೆಯನ್ನು ವಿಶ್ಲೇಷಿಸುತ್ತದೆ. ಈ ವರ್ಷವೂ, ಒಕ್ಕೂಟ ಸಿಒಪಿ-30ರಲ್ಲಿ ಭಾಗವಹಿಸಿದ ಲಾಬಿದಾರರ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೆಬಿಪಿಒ ವಿಶ್ಲೇಷಣೆಯ ಪ್ರಕಾರ, 1,602 ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ರಲ್ಲಿ ಭಾಗವಹಿಸಿದ್ದಾರೆ. ಯಾವುದೇ ದೇಶದ ಪ್ರತಿನಿಧಿ ನಿಯೋಗದಲ್ಲಿಯೂ ಇಷ್ಟು ಜನರಿಲ್ಲ. ಬ್ರೆಝಿಲ್ ಮಾತ್ರ ಹೆಚ್ಚು, ಅಂದರೆ 3,805 ಪ್ರತಿನಿಧಿಗಳನ್ನು ಸಮ್ಮೇಳನಕ್ಕೆ ಕಳುಹಿಸಿದೆ.

ಕಳೆದ ವರ್ಷ ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆದ ಸಿಒಪಿ-29ರಲ್ಲಿ ಭಾಗವಹಿಸಿದ್ದಕ್ಕಿಂತ ಈ ಬಾರಿ ಶೇಕಡ 12ರಷ್ಟು ಹೆಚ್ಚು ಲಾಬಿದಾರರು ಸಮ್ಮೇಳನಕ್ಕೆ ಹಾಜರಾಗಿದ್ದಾರೆ. ನಾವು ಲಾಬಿದಾರರ ಬಗ್ಗೆ ವಿಶ್ಲೇಷಣೆ ಮಾಡಲು ಪ್ರಾರಂಭಿಸಿದ ಬಳಿಕ ಈ ಬಾರಿ ಅತಿ ಹೆಚ್ಚು ಲಾಬಿದಾರರು ಕಂಡು ಬಂದಿದ್ದಾರೆ ಎಂದು ಕೆಬಿಪಿಒ ಹೇಳಿದೆ.

ಹತ್ತು ಅತ್ಯಂತ ಹವಾಮಾನ ದುರ್ಬಲ ರಾಷ್ಟ್ರಗಳ ಎಲ್ಲಾ ಪ್ರತಿನಿಧಿಗಳಿಗಿಂತ (1,061) ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ಕ್ಕೆ ಮೂರನೇ ಎರಡರಷ್ಟು ಹೆಚ್ಚು ಪಾಸ್‌ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಹೊರಸೂಸುವಿಕೆ ವ್ಯಾಪಾರ ಸಂಘವು ತೈಲ ಮತ್ತು ಅನಿಲ ದೈತ್ಯ ಕಂಪನಿಗಳಾದ ಎಕ್ಸಾನ್‌ಮೊಬಿಲ್, ಬಿಪಿ ಮತ್ತು ಟೋಟಲ್ ಎನರ್ಜೀಸ್‌ನ ಪ್ರತಿನಿಧಿಗಳು ಸೇರಿದಂತೆ 60 ಪ್ರತಿನಿಧಿಗಳನ್ನು ಸಿಒಪಿ-30ಕ್ಕೆ ಕರೆತಂದಿದೆ ಎಂದು ಕೆಬಿಪಿಒ ತಿಳಿಸಿದೆ.

ಕೆಬಿಪಿಒ ಪ್ರಕಾರ, ಜಾಗತಿಕ ಉತ್ತರದ ಕೆಲವು ದೇಶಗಳು ತಮ್ಮ ಅಧಿಕೃತ ನಿಯೋಗಗಳಲ್ಲಿ ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕೂಡ ಒಳಗೊಳಿಸಿವೆ. ಉದಾಹರಣೆಗೆ, ಫ್ರಾನ್ಸ್ 22 ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕರೆತಂದಿದೆ. ಇದರಲ್ಲಿ ಸಿಇಒ ಪ್ಯಾಟ್ರಿಕ್ ಪೌಯಾನ್ನೆ ಸೇರಿದಂತೆ ಟೋಟಲ್ ಎನರ್ಜಿಸ್‌ನಿಂದ ಐದು ಮಂದಿ ಇದ್ದಾರೆ.

“ಸಮಸ್ಯೆ ಉಂಟುಮಾಡಿದವರಿಗೆ ಅಧಿಕಾರ ನೀಡುವ ಮೂಲಕ ನೀವು ಅದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬುದು ಸಾಮಾನ್ಯ ಜ್ಞಾನ” ಎಂದು ಕೆಬಿಪಿಒ ಸದಸ್ಯ ಜಾಕ್ಸ್ ಬಾನ್ಬನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮೂರು ದಶಕಗಳು ಮತ್ತು 30 ಸಿಒಪಿಗಳ ನಂತರವೂ, 1,500ಕ್ಕೂ ಹೆಚ್ಚು ಪಳೆಯುಳಿಕೆ ಇಂಧನ ಲಾಬಿಗಾರರು ಹವಾಮಾನ ಮಾತುಕತೆಗಳಲ್ಲಿ ತಾವು ಇಲ್ಲಿಗೆ ಸೇರಿದವರಂತೆ ಅಲೆದಾಡುತ್ತಿದ್ದಾರೆ. ಸಿಒಪಿ 30 ‘ಅನುಷ್ಠಾನ ಸಿಒಪಿ’ ಎಂದು ಭರವಸೆ ನೀಡುತ್ತದೆ. ಆದರೆ, ಇದುವರೆಗೆ ಅವರು ಸೃಷ್ಟಿಸಿದ ಬಿಕ್ಕಟ್ಟನ್ನು ಪರಿಹರಿಸಲು ಉದ್ದೇಶಿಸಲಾದ ಸಮ್ಮೇಳನದಿಂದ ದೊಡ್ಡ ಮಾಲಿನ್ಯಕಾರಕಗಳನ್ನು ಹೊರಹಾಕುವ ಮೂಲಭೂತ ಮತ್ತು ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯನ್ನು ಸಹ ಕಾರ್ಯಗತಗೊಳಿಸಲು ಇದು ವಿಫಲವಾಗಿದೆ” ಎಂದು ಹೇಳಿದ್ದಾರೆ.

ನವೆಂಬರ್ 6 ರಿಂದ 21 (ನವೆಂಬರ್ 6 ರಿಂದ 9 ರಿಂದ ಪೂರ್ವಸಿದ್ಧತಾ ಕಾರ್ಯಕ್ರಮಗಳು, ನವೆಂಬರ್ 10 ರಿಂದ 21 ರಿಂದ ಮುಖ್ಯ ಸಮ್ಮೇಳನ) ರವರೆಗೆ ಬ್ರೆಝಿಲ್‌ನ ಬೆಲೆಮ್‌ನಲ್ಲಿ ಈ ಬಾರಿಯ ವಿಶ್ವ ಹವಾಮಾನ ಶೃಂಗಸಭೆ ನಡೆಯುತ್ತಿದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....