Homeಅಂತರಾಷ್ಟ್ರೀಯCOP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ 'ಪಳೆಯುಳಿಕೆ ಇಂಧನ ಲಾಬಿದಾರ'

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ವಿಶ್ವ ಹವಾಮಾನ ಶೃಂಗಸಭೆ (COP30)ಯಲ್ಲಿ ಭಾಗವಹಿಸಿರುವ ಪ್ರತಿ 25 ಜನರಲ್ಲಿ ಒಬ್ಬರು ಪಳೆಯುಳಿಕೆ ಇಂಧನ ಲಾಬಿದಾರ ಇದ್ದಾರೆ. ಶೃಂಗಸಭೆ ನಡೆಯುತ್ತಿರುವ ಆವರಣದಲ್ಲಿ ಒಟ್ಟು 1,602 ಲಾಬಿದಾರರು ಪತ್ತೆಯಾಗಿದ್ದಾರೆ ಎಂದು ಕಿಕ್ ಬಿಗ್ ಪೊಲ್ಯೂಟರ್ಸ್ ಔಟ್ (ಕೆಬಿಪಿಒ) ಬಿಡುಗಡೆ ಮಾಡಿದ ವರದಿ ತಿಳಿಸಿದೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕೆಬಿಪಿಒ ಎಂಬುದು 450ಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವಾಗಿದ್ದು, ಜಾಗತಿಕ ತಾಪಮಾನ ಹೆಚ್ಚಳಕ್ಕೆ ಹೆಚ್ಚು ಕಾರಣರಾದವರೇ ಹವಾಮಾನ ಸಂಬಂಧಿತ ನಿಯಮ ರೂಪಿಸುವುದನ್ನು ಈ ಒಕ್ಕೂಟ ವಿರೋಧಿಸುತ್ತದೆ. ಪ್ರತಿ ವರ್ಷ, ಒಕ್ಕೂಟವು ವಾರ್ಷಿಕ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪಳೆಯುಳಿಕೆ ಇಂಧನ ಲಾಬಿ ಮಾಡುವವರ ಸಂಖ್ಯೆಯನ್ನು ವಿಶ್ಲೇಷಿಸುತ್ತದೆ. ಈ ವರ್ಷವೂ, ಒಕ್ಕೂಟ ಸಿಒಪಿ-30ರಲ್ಲಿ ಭಾಗವಹಿಸಿದ ಲಾಬಿದಾರರ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೆಬಿಪಿಒ ವಿಶ್ಲೇಷಣೆಯ ಪ್ರಕಾರ, 1,602 ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ರಲ್ಲಿ ಭಾಗವಹಿಸಿದ್ದಾರೆ. ಯಾವುದೇ ದೇಶದ ಪ್ರತಿನಿಧಿ ನಿಯೋಗದಲ್ಲಿಯೂ ಇಷ್ಟು ಜನರಿಲ್ಲ. ಬ್ರೆಝಿಲ್ ಮಾತ್ರ ಹೆಚ್ಚು, ಅಂದರೆ 3,805 ಪ್ರತಿನಿಧಿಗಳನ್ನು ಸಮ್ಮೇಳನಕ್ಕೆ ಕಳುಹಿಸಿದೆ.

ಕಳೆದ ವರ್ಷ ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆದ ಸಿಒಪಿ-29ರಲ್ಲಿ ಭಾಗವಹಿಸಿದ್ದಕ್ಕಿಂತ ಈ ಬಾರಿ ಶೇಕಡ 12ರಷ್ಟು ಹೆಚ್ಚು ಲಾಬಿದಾರರು ಸಮ್ಮೇಳನಕ್ಕೆ ಹಾಜರಾಗಿದ್ದಾರೆ. ನಾವು ಲಾಬಿದಾರರ ಬಗ್ಗೆ ವಿಶ್ಲೇಷಣೆ ಮಾಡಲು ಪ್ರಾರಂಭಿಸಿದ ಬಳಿಕ ಈ ಬಾರಿ ಅತಿ ಹೆಚ್ಚು ಲಾಬಿದಾರರು ಕಂಡು ಬಂದಿದ್ದಾರೆ ಎಂದು ಕೆಬಿಪಿಒ ಹೇಳಿದೆ.

ಹತ್ತು ಅತ್ಯಂತ ಹವಾಮಾನ ದುರ್ಬಲ ರಾಷ್ಟ್ರಗಳ ಎಲ್ಲಾ ಪ್ರತಿನಿಧಿಗಳಿಗಿಂತ (1,061) ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ಕ್ಕೆ ಮೂರನೇ ಎರಡರಷ್ಟು ಹೆಚ್ಚು ಪಾಸ್‌ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಹೊರಸೂಸುವಿಕೆ ವ್ಯಾಪಾರ ಸಂಘವು ತೈಲ ಮತ್ತು ಅನಿಲ ದೈತ್ಯ ಕಂಪನಿಗಳಾದ ಎಕ್ಸಾನ್‌ಮೊಬಿಲ್, ಬಿಪಿ ಮತ್ತು ಟೋಟಲ್ ಎನರ್ಜೀಸ್‌ನ ಪ್ರತಿನಿಧಿಗಳು ಸೇರಿದಂತೆ 60 ಪ್ರತಿನಿಧಿಗಳನ್ನು ಸಿಒಪಿ-30ಕ್ಕೆ ಕರೆತಂದಿದೆ ಎಂದು ಕೆಬಿಪಿಒ ತಿಳಿಸಿದೆ.

ಕೆಬಿಪಿಒ ಪ್ರಕಾರ, ಜಾಗತಿಕ ಉತ್ತರದ ಕೆಲವು ದೇಶಗಳು ತಮ್ಮ ಅಧಿಕೃತ ನಿಯೋಗಗಳಲ್ಲಿ ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕೂಡ ಒಳಗೊಳಿಸಿವೆ. ಉದಾಹರಣೆಗೆ, ಫ್ರಾನ್ಸ್ 22 ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕರೆತಂದಿದೆ. ಇದರಲ್ಲಿ ಸಿಇಒ ಪ್ಯಾಟ್ರಿಕ್ ಪೌಯಾನ್ನೆ ಸೇರಿದಂತೆ ಟೋಟಲ್ ಎನರ್ಜಿಸ್‌ನಿಂದ ಐದು ಮಂದಿ ಇದ್ದಾರೆ.

“ಸಮಸ್ಯೆ ಉಂಟುಮಾಡಿದವರಿಗೆ ಅಧಿಕಾರ ನೀಡುವ ಮೂಲಕ ನೀವು ಅದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬುದು ಸಾಮಾನ್ಯ ಜ್ಞಾನ” ಎಂದು ಕೆಬಿಪಿಒ ಸದಸ್ಯ ಜಾಕ್ಸ್ ಬಾನ್ಬನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮೂರು ದಶಕಗಳು ಮತ್ತು 30 ಸಿಒಪಿಗಳ ನಂತರವೂ, 1,500ಕ್ಕೂ ಹೆಚ್ಚು ಪಳೆಯುಳಿಕೆ ಇಂಧನ ಲಾಬಿಗಾರರು ಹವಾಮಾನ ಮಾತುಕತೆಗಳಲ್ಲಿ ತಾವು ಇಲ್ಲಿಗೆ ಸೇರಿದವರಂತೆ ಅಲೆದಾಡುತ್ತಿದ್ದಾರೆ. ಸಿಒಪಿ 30 ‘ಅನುಷ್ಠಾನ ಸಿಒಪಿ’ ಎಂದು ಭರವಸೆ ನೀಡುತ್ತದೆ. ಆದರೆ, ಇದುವರೆಗೆ ಅವರು ಸೃಷ್ಟಿಸಿದ ಬಿಕ್ಕಟ್ಟನ್ನು ಪರಿಹರಿಸಲು ಉದ್ದೇಶಿಸಲಾದ ಸಮ್ಮೇಳನದಿಂದ ದೊಡ್ಡ ಮಾಲಿನ್ಯಕಾರಕಗಳನ್ನು ಹೊರಹಾಕುವ ಮೂಲಭೂತ ಮತ್ತು ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯನ್ನು ಸಹ ಕಾರ್ಯಗತಗೊಳಿಸಲು ಇದು ವಿಫಲವಾಗಿದೆ” ಎಂದು ಹೇಳಿದ್ದಾರೆ.

ನವೆಂಬರ್ 6 ರಿಂದ 21 (ನವೆಂಬರ್ 6 ರಿಂದ 9 ರಿಂದ ಪೂರ್ವಸಿದ್ಧತಾ ಕಾರ್ಯಕ್ರಮಗಳು, ನವೆಂಬರ್ 10 ರಿಂದ 21 ರಿಂದ ಮುಖ್ಯ ಸಮ್ಮೇಳನ) ರವರೆಗೆ ಬ್ರೆಝಿಲ್‌ನ ಬೆಲೆಮ್‌ನಲ್ಲಿ ಈ ಬಾರಿಯ ವಿಶ್ವ ಹವಾಮಾನ ಶೃಂಗಸಭೆ ನಡೆಯುತ್ತಿದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...