Homeಅಂತರಾಷ್ಟ್ರೀಯCOP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ 'ಪಳೆಯುಳಿಕೆ ಇಂಧನ ಲಾಬಿದಾರ'

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ವಿಶ್ವ ಹವಾಮಾನ ಶೃಂಗಸಭೆ (COP30)ಯಲ್ಲಿ ಭಾಗವಹಿಸಿರುವ ಪ್ರತಿ 25 ಜನರಲ್ಲಿ ಒಬ್ಬರು ಪಳೆಯುಳಿಕೆ ಇಂಧನ ಲಾಬಿದಾರ ಇದ್ದಾರೆ. ಶೃಂಗಸಭೆ ನಡೆಯುತ್ತಿರುವ ಆವರಣದಲ್ಲಿ ಒಟ್ಟು 1,602 ಲಾಬಿದಾರರು ಪತ್ತೆಯಾಗಿದ್ದಾರೆ ಎಂದು ಕಿಕ್ ಬಿಗ್ ಪೊಲ್ಯೂಟರ್ಸ್ ಔಟ್ (ಕೆಬಿಪಿಒ) ಬಿಡುಗಡೆ ಮಾಡಿದ ವರದಿ ತಿಳಿಸಿದೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕೆಬಿಪಿಒ ಎಂಬುದು 450ಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವಾಗಿದ್ದು, ಜಾಗತಿಕ ತಾಪಮಾನ ಹೆಚ್ಚಳಕ್ಕೆ ಹೆಚ್ಚು ಕಾರಣರಾದವರೇ ಹವಾಮಾನ ಸಂಬಂಧಿತ ನಿಯಮ ರೂಪಿಸುವುದನ್ನು ಈ ಒಕ್ಕೂಟ ವಿರೋಧಿಸುತ್ತದೆ. ಪ್ರತಿ ವರ್ಷ, ಒಕ್ಕೂಟವು ವಾರ್ಷಿಕ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪಳೆಯುಳಿಕೆ ಇಂಧನ ಲಾಬಿ ಮಾಡುವವರ ಸಂಖ್ಯೆಯನ್ನು ವಿಶ್ಲೇಷಿಸುತ್ತದೆ. ಈ ವರ್ಷವೂ, ಒಕ್ಕೂಟ ಸಿಒಪಿ-30ರಲ್ಲಿ ಭಾಗವಹಿಸಿದ ಲಾಬಿದಾರರ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೆಬಿಪಿಒ ವಿಶ್ಲೇಷಣೆಯ ಪ್ರಕಾರ, 1,602 ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ರಲ್ಲಿ ಭಾಗವಹಿಸಿದ್ದಾರೆ. ಯಾವುದೇ ದೇಶದ ಪ್ರತಿನಿಧಿ ನಿಯೋಗದಲ್ಲಿಯೂ ಇಷ್ಟು ಜನರಿಲ್ಲ. ಬ್ರೆಝಿಲ್ ಮಾತ್ರ ಹೆಚ್ಚು, ಅಂದರೆ 3,805 ಪ್ರತಿನಿಧಿಗಳನ್ನು ಸಮ್ಮೇಳನಕ್ಕೆ ಕಳುಹಿಸಿದೆ.

ಕಳೆದ ವರ್ಷ ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆದ ಸಿಒಪಿ-29ರಲ್ಲಿ ಭಾಗವಹಿಸಿದ್ದಕ್ಕಿಂತ ಈ ಬಾರಿ ಶೇಕಡ 12ರಷ್ಟು ಹೆಚ್ಚು ಲಾಬಿದಾರರು ಸಮ್ಮೇಳನಕ್ಕೆ ಹಾಜರಾಗಿದ್ದಾರೆ. ನಾವು ಲಾಬಿದಾರರ ಬಗ್ಗೆ ವಿಶ್ಲೇಷಣೆ ಮಾಡಲು ಪ್ರಾರಂಭಿಸಿದ ಬಳಿಕ ಈ ಬಾರಿ ಅತಿ ಹೆಚ್ಚು ಲಾಬಿದಾರರು ಕಂಡು ಬಂದಿದ್ದಾರೆ ಎಂದು ಕೆಬಿಪಿಒ ಹೇಳಿದೆ.

ಹತ್ತು ಅತ್ಯಂತ ಹವಾಮಾನ ದುರ್ಬಲ ರಾಷ್ಟ್ರಗಳ ಎಲ್ಲಾ ಪ್ರತಿನಿಧಿಗಳಿಗಿಂತ (1,061) ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ಕ್ಕೆ ಮೂರನೇ ಎರಡರಷ್ಟು ಹೆಚ್ಚು ಪಾಸ್‌ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಹೊರಸೂಸುವಿಕೆ ವ್ಯಾಪಾರ ಸಂಘವು ತೈಲ ಮತ್ತು ಅನಿಲ ದೈತ್ಯ ಕಂಪನಿಗಳಾದ ಎಕ್ಸಾನ್‌ಮೊಬಿಲ್, ಬಿಪಿ ಮತ್ತು ಟೋಟಲ್ ಎನರ್ಜೀಸ್‌ನ ಪ್ರತಿನಿಧಿಗಳು ಸೇರಿದಂತೆ 60 ಪ್ರತಿನಿಧಿಗಳನ್ನು ಸಿಒಪಿ-30ಕ್ಕೆ ಕರೆತಂದಿದೆ ಎಂದು ಕೆಬಿಪಿಒ ತಿಳಿಸಿದೆ.

ಕೆಬಿಪಿಒ ಪ್ರಕಾರ, ಜಾಗತಿಕ ಉತ್ತರದ ಕೆಲವು ದೇಶಗಳು ತಮ್ಮ ಅಧಿಕೃತ ನಿಯೋಗಗಳಲ್ಲಿ ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕೂಡ ಒಳಗೊಳಿಸಿವೆ. ಉದಾಹರಣೆಗೆ, ಫ್ರಾನ್ಸ್ 22 ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕರೆತಂದಿದೆ. ಇದರಲ್ಲಿ ಸಿಇಒ ಪ್ಯಾಟ್ರಿಕ್ ಪೌಯಾನ್ನೆ ಸೇರಿದಂತೆ ಟೋಟಲ್ ಎನರ್ಜಿಸ್‌ನಿಂದ ಐದು ಮಂದಿ ಇದ್ದಾರೆ.

“ಸಮಸ್ಯೆ ಉಂಟುಮಾಡಿದವರಿಗೆ ಅಧಿಕಾರ ನೀಡುವ ಮೂಲಕ ನೀವು ಅದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬುದು ಸಾಮಾನ್ಯ ಜ್ಞಾನ” ಎಂದು ಕೆಬಿಪಿಒ ಸದಸ್ಯ ಜಾಕ್ಸ್ ಬಾನ್ಬನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮೂರು ದಶಕಗಳು ಮತ್ತು 30 ಸಿಒಪಿಗಳ ನಂತರವೂ, 1,500ಕ್ಕೂ ಹೆಚ್ಚು ಪಳೆಯುಳಿಕೆ ಇಂಧನ ಲಾಬಿಗಾರರು ಹವಾಮಾನ ಮಾತುಕತೆಗಳಲ್ಲಿ ತಾವು ಇಲ್ಲಿಗೆ ಸೇರಿದವರಂತೆ ಅಲೆದಾಡುತ್ತಿದ್ದಾರೆ. ಸಿಒಪಿ 30 ‘ಅನುಷ್ಠಾನ ಸಿಒಪಿ’ ಎಂದು ಭರವಸೆ ನೀಡುತ್ತದೆ. ಆದರೆ, ಇದುವರೆಗೆ ಅವರು ಸೃಷ್ಟಿಸಿದ ಬಿಕ್ಕಟ್ಟನ್ನು ಪರಿಹರಿಸಲು ಉದ್ದೇಶಿಸಲಾದ ಸಮ್ಮೇಳನದಿಂದ ದೊಡ್ಡ ಮಾಲಿನ್ಯಕಾರಕಗಳನ್ನು ಹೊರಹಾಕುವ ಮೂಲಭೂತ ಮತ್ತು ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯನ್ನು ಸಹ ಕಾರ್ಯಗತಗೊಳಿಸಲು ಇದು ವಿಫಲವಾಗಿದೆ” ಎಂದು ಹೇಳಿದ್ದಾರೆ.

ನವೆಂಬರ್ 6 ರಿಂದ 21 (ನವೆಂಬರ್ 6 ರಿಂದ 9 ರಿಂದ ಪೂರ್ವಸಿದ್ಧತಾ ಕಾರ್ಯಕ್ರಮಗಳು, ನವೆಂಬರ್ 10 ರಿಂದ 21 ರಿಂದ ಮುಖ್ಯ ಸಮ್ಮೇಳನ) ರವರೆಗೆ ಬ್ರೆಝಿಲ್‌ನ ಬೆಲೆಮ್‌ನಲ್ಲಿ ಈ ಬಾರಿಯ ವಿಶ್ವ ಹವಾಮಾನ ಶೃಂಗಸಭೆ ನಡೆಯುತ್ತಿದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...