Homeಅಂತರಾಷ್ಟ್ರೀಯCOP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ 'ಪಳೆಯುಳಿಕೆ ಇಂಧನ ಲಾಬಿದಾರ'

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ವಿಶ್ವ ಹವಾಮಾನ ಶೃಂಗಸಭೆ (COP30)ಯಲ್ಲಿ ಭಾಗವಹಿಸಿರುವ ಪ್ರತಿ 25 ಜನರಲ್ಲಿ ಒಬ್ಬರು ಪಳೆಯುಳಿಕೆ ಇಂಧನ ಲಾಬಿದಾರ ಇದ್ದಾರೆ. ಶೃಂಗಸಭೆ ನಡೆಯುತ್ತಿರುವ ಆವರಣದಲ್ಲಿ ಒಟ್ಟು 1,602 ಲಾಬಿದಾರರು ಪತ್ತೆಯಾಗಿದ್ದಾರೆ ಎಂದು ಕಿಕ್ ಬಿಗ್ ಪೊಲ್ಯೂಟರ್ಸ್ ಔಟ್ (ಕೆಬಿಪಿಒ) ಬಿಡುಗಡೆ ಮಾಡಿದ ವರದಿ ತಿಳಿಸಿದೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕೆಬಿಪಿಒ ಎಂಬುದು 450ಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವಾಗಿದ್ದು, ಜಾಗತಿಕ ತಾಪಮಾನ ಹೆಚ್ಚಳಕ್ಕೆ ಹೆಚ್ಚು ಕಾರಣರಾದವರೇ ಹವಾಮಾನ ಸಂಬಂಧಿತ ನಿಯಮ ರೂಪಿಸುವುದನ್ನು ಈ ಒಕ್ಕೂಟ ವಿರೋಧಿಸುತ್ತದೆ. ಪ್ರತಿ ವರ್ಷ, ಒಕ್ಕೂಟವು ವಾರ್ಷಿಕ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪಳೆಯುಳಿಕೆ ಇಂಧನ ಲಾಬಿ ಮಾಡುವವರ ಸಂಖ್ಯೆಯನ್ನು ವಿಶ್ಲೇಷಿಸುತ್ತದೆ. ಈ ವರ್ಷವೂ, ಒಕ್ಕೂಟ ಸಿಒಪಿ-30ರಲ್ಲಿ ಭಾಗವಹಿಸಿದ ಲಾಬಿದಾರರ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೆಬಿಪಿಒ ವಿಶ್ಲೇಷಣೆಯ ಪ್ರಕಾರ, 1,602 ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ರಲ್ಲಿ ಭಾಗವಹಿಸಿದ್ದಾರೆ. ಯಾವುದೇ ದೇಶದ ಪ್ರತಿನಿಧಿ ನಿಯೋಗದಲ್ಲಿಯೂ ಇಷ್ಟು ಜನರಿಲ್ಲ. ಬ್ರೆಝಿಲ್ ಮಾತ್ರ ಹೆಚ್ಚು, ಅಂದರೆ 3,805 ಪ್ರತಿನಿಧಿಗಳನ್ನು ಸಮ್ಮೇಳನಕ್ಕೆ ಕಳುಹಿಸಿದೆ.

ಕಳೆದ ವರ್ಷ ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆದ ಸಿಒಪಿ-29ರಲ್ಲಿ ಭಾಗವಹಿಸಿದ್ದಕ್ಕಿಂತ ಈ ಬಾರಿ ಶೇಕಡ 12ರಷ್ಟು ಹೆಚ್ಚು ಲಾಬಿದಾರರು ಸಮ್ಮೇಳನಕ್ಕೆ ಹಾಜರಾಗಿದ್ದಾರೆ. ನಾವು ಲಾಬಿದಾರರ ಬಗ್ಗೆ ವಿಶ್ಲೇಷಣೆ ಮಾಡಲು ಪ್ರಾರಂಭಿಸಿದ ಬಳಿಕ ಈ ಬಾರಿ ಅತಿ ಹೆಚ್ಚು ಲಾಬಿದಾರರು ಕಂಡು ಬಂದಿದ್ದಾರೆ ಎಂದು ಕೆಬಿಪಿಒ ಹೇಳಿದೆ.

ಹತ್ತು ಅತ್ಯಂತ ಹವಾಮಾನ ದುರ್ಬಲ ರಾಷ್ಟ್ರಗಳ ಎಲ್ಲಾ ಪ್ರತಿನಿಧಿಗಳಿಗಿಂತ (1,061) ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ಕ್ಕೆ ಮೂರನೇ ಎರಡರಷ್ಟು ಹೆಚ್ಚು ಪಾಸ್‌ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಹೊರಸೂಸುವಿಕೆ ವ್ಯಾಪಾರ ಸಂಘವು ತೈಲ ಮತ್ತು ಅನಿಲ ದೈತ್ಯ ಕಂಪನಿಗಳಾದ ಎಕ್ಸಾನ್‌ಮೊಬಿಲ್, ಬಿಪಿ ಮತ್ತು ಟೋಟಲ್ ಎನರ್ಜೀಸ್‌ನ ಪ್ರತಿನಿಧಿಗಳು ಸೇರಿದಂತೆ 60 ಪ್ರತಿನಿಧಿಗಳನ್ನು ಸಿಒಪಿ-30ಕ್ಕೆ ಕರೆತಂದಿದೆ ಎಂದು ಕೆಬಿಪಿಒ ತಿಳಿಸಿದೆ.

ಕೆಬಿಪಿಒ ಪ್ರಕಾರ, ಜಾಗತಿಕ ಉತ್ತರದ ಕೆಲವು ದೇಶಗಳು ತಮ್ಮ ಅಧಿಕೃತ ನಿಯೋಗಗಳಲ್ಲಿ ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕೂಡ ಒಳಗೊಳಿಸಿವೆ. ಉದಾಹರಣೆಗೆ, ಫ್ರಾನ್ಸ್ 22 ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕರೆತಂದಿದೆ. ಇದರಲ್ಲಿ ಸಿಇಒ ಪ್ಯಾಟ್ರಿಕ್ ಪೌಯಾನ್ನೆ ಸೇರಿದಂತೆ ಟೋಟಲ್ ಎನರ್ಜಿಸ್‌ನಿಂದ ಐದು ಮಂದಿ ಇದ್ದಾರೆ.

“ಸಮಸ್ಯೆ ಉಂಟುಮಾಡಿದವರಿಗೆ ಅಧಿಕಾರ ನೀಡುವ ಮೂಲಕ ನೀವು ಅದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬುದು ಸಾಮಾನ್ಯ ಜ್ಞಾನ” ಎಂದು ಕೆಬಿಪಿಒ ಸದಸ್ಯ ಜಾಕ್ಸ್ ಬಾನ್ಬನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮೂರು ದಶಕಗಳು ಮತ್ತು 30 ಸಿಒಪಿಗಳ ನಂತರವೂ, 1,500ಕ್ಕೂ ಹೆಚ್ಚು ಪಳೆಯುಳಿಕೆ ಇಂಧನ ಲಾಬಿಗಾರರು ಹವಾಮಾನ ಮಾತುಕತೆಗಳಲ್ಲಿ ತಾವು ಇಲ್ಲಿಗೆ ಸೇರಿದವರಂತೆ ಅಲೆದಾಡುತ್ತಿದ್ದಾರೆ. ಸಿಒಪಿ 30 ‘ಅನುಷ್ಠಾನ ಸಿಒಪಿ’ ಎಂದು ಭರವಸೆ ನೀಡುತ್ತದೆ. ಆದರೆ, ಇದುವರೆಗೆ ಅವರು ಸೃಷ್ಟಿಸಿದ ಬಿಕ್ಕಟ್ಟನ್ನು ಪರಿಹರಿಸಲು ಉದ್ದೇಶಿಸಲಾದ ಸಮ್ಮೇಳನದಿಂದ ದೊಡ್ಡ ಮಾಲಿನ್ಯಕಾರಕಗಳನ್ನು ಹೊರಹಾಕುವ ಮೂಲಭೂತ ಮತ್ತು ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯನ್ನು ಸಹ ಕಾರ್ಯಗತಗೊಳಿಸಲು ಇದು ವಿಫಲವಾಗಿದೆ” ಎಂದು ಹೇಳಿದ್ದಾರೆ.

ನವೆಂಬರ್ 6 ರಿಂದ 21 (ನವೆಂಬರ್ 6 ರಿಂದ 9 ರಿಂದ ಪೂರ್ವಸಿದ್ಧತಾ ಕಾರ್ಯಕ್ರಮಗಳು, ನವೆಂಬರ್ 10 ರಿಂದ 21 ರಿಂದ ಮುಖ್ಯ ಸಮ್ಮೇಳನ) ರವರೆಗೆ ಬ್ರೆಝಿಲ್‌ನ ಬೆಲೆಮ್‌ನಲ್ಲಿ ಈ ಬಾರಿಯ ವಿಶ್ವ ಹವಾಮಾನ ಶೃಂಗಸಭೆ ನಡೆಯುತ್ತಿದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...