Homeಅಂತರಾಷ್ಟ್ರೀಯCOP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ 'ಪಳೆಯುಳಿಕೆ ಇಂಧನ ಲಾಬಿದಾರ'

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ವಿಶ್ವ ಹವಾಮಾನ ಶೃಂಗಸಭೆ (COP30)ಯಲ್ಲಿ ಭಾಗವಹಿಸಿರುವ ಪ್ರತಿ 25 ಜನರಲ್ಲಿ ಒಬ್ಬರು ಪಳೆಯುಳಿಕೆ ಇಂಧನ ಲಾಬಿದಾರ ಇದ್ದಾರೆ. ಶೃಂಗಸಭೆ ನಡೆಯುತ್ತಿರುವ ಆವರಣದಲ್ಲಿ ಒಟ್ಟು 1,602 ಲಾಬಿದಾರರು ಪತ್ತೆಯಾಗಿದ್ದಾರೆ ಎಂದು ಕಿಕ್ ಬಿಗ್ ಪೊಲ್ಯೂಟರ್ಸ್ ಔಟ್ (ಕೆಬಿಪಿಒ) ಬಿಡುಗಡೆ ಮಾಡಿದ ವರದಿ ತಿಳಿಸಿದೆ.

ಕಲ್ಲಿದ್ದಲು, ಕಲ್ಲಿದ್ದಲು ಉತ್ಪನ್ನಗಳು, ನೈಸರ್ಗಿಕ ಅನಿಲ, ಉತ್ಪಾದಿಸಿದ ಅನಿಲ, ಕಚ್ಛಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ನವೀಕರಿಸಲಾಗದ ತ್ಯಾಜ್ಯಗಳಂತಹ ಇಂಧನ ಮೂಲಗಳನ್ನು ಪಳೆಯುಳಿಕೆ ಇಂಧನ ಎಂದು ಕರೆಯಲಾಗುತ್ತದೆ.

ಕೆಬಿಪಿಒ ಎಂಬುದು 450ಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವಾಗಿದ್ದು, ಜಾಗತಿಕ ತಾಪಮಾನ ಹೆಚ್ಚಳಕ್ಕೆ ಹೆಚ್ಚು ಕಾರಣರಾದವರೇ ಹವಾಮಾನ ಸಂಬಂಧಿತ ನಿಯಮ ರೂಪಿಸುವುದನ್ನು ಈ ಒಕ್ಕೂಟ ವಿರೋಧಿಸುತ್ತದೆ. ಪ್ರತಿ ವರ್ಷ, ಒಕ್ಕೂಟವು ವಾರ್ಷಿಕ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪಳೆಯುಳಿಕೆ ಇಂಧನ ಲಾಬಿ ಮಾಡುವವರ ಸಂಖ್ಯೆಯನ್ನು ವಿಶ್ಲೇಷಿಸುತ್ತದೆ. ಈ ವರ್ಷವೂ, ಒಕ್ಕೂಟ ಸಿಒಪಿ-30ರಲ್ಲಿ ಭಾಗವಹಿಸಿದ ಲಾಬಿದಾರರ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೆಬಿಪಿಒ ವಿಶ್ಲೇಷಣೆಯ ಪ್ರಕಾರ, 1,602 ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ರಲ್ಲಿ ಭಾಗವಹಿಸಿದ್ದಾರೆ. ಯಾವುದೇ ದೇಶದ ಪ್ರತಿನಿಧಿ ನಿಯೋಗದಲ್ಲಿಯೂ ಇಷ್ಟು ಜನರಿಲ್ಲ. ಬ್ರೆಝಿಲ್ ಮಾತ್ರ ಹೆಚ್ಚು, ಅಂದರೆ 3,805 ಪ್ರತಿನಿಧಿಗಳನ್ನು ಸಮ್ಮೇಳನಕ್ಕೆ ಕಳುಹಿಸಿದೆ.

ಕಳೆದ ವರ್ಷ ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆದ ಸಿಒಪಿ-29ರಲ್ಲಿ ಭಾಗವಹಿಸಿದ್ದಕ್ಕಿಂತ ಈ ಬಾರಿ ಶೇಕಡ 12ರಷ್ಟು ಹೆಚ್ಚು ಲಾಬಿದಾರರು ಸಮ್ಮೇಳನಕ್ಕೆ ಹಾಜರಾಗಿದ್ದಾರೆ. ನಾವು ಲಾಬಿದಾರರ ಬಗ್ಗೆ ವಿಶ್ಲೇಷಣೆ ಮಾಡಲು ಪ್ರಾರಂಭಿಸಿದ ಬಳಿಕ ಈ ಬಾರಿ ಅತಿ ಹೆಚ್ಚು ಲಾಬಿದಾರರು ಕಂಡು ಬಂದಿದ್ದಾರೆ ಎಂದು ಕೆಬಿಪಿಒ ಹೇಳಿದೆ.

ಹತ್ತು ಅತ್ಯಂತ ಹವಾಮಾನ ದುರ್ಬಲ ರಾಷ್ಟ್ರಗಳ ಎಲ್ಲಾ ಪ್ರತಿನಿಧಿಗಳಿಗಿಂತ (1,061) ಪಳೆಯುಳಿಕೆ ಇಂಧನ ಲಾಬಿದಾರರು ಸಿಒಪಿ-30ಕ್ಕೆ ಮೂರನೇ ಎರಡರಷ್ಟು ಹೆಚ್ಚು ಪಾಸ್‌ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಹೊರಸೂಸುವಿಕೆ ವ್ಯಾಪಾರ ಸಂಘವು ತೈಲ ಮತ್ತು ಅನಿಲ ದೈತ್ಯ ಕಂಪನಿಗಳಾದ ಎಕ್ಸಾನ್‌ಮೊಬಿಲ್, ಬಿಪಿ ಮತ್ತು ಟೋಟಲ್ ಎನರ್ಜೀಸ್‌ನ ಪ್ರತಿನಿಧಿಗಳು ಸೇರಿದಂತೆ 60 ಪ್ರತಿನಿಧಿಗಳನ್ನು ಸಿಒಪಿ-30ಕ್ಕೆ ಕರೆತಂದಿದೆ ಎಂದು ಕೆಬಿಪಿಒ ತಿಳಿಸಿದೆ.

ಕೆಬಿಪಿಒ ಪ್ರಕಾರ, ಜಾಗತಿಕ ಉತ್ತರದ ಕೆಲವು ದೇಶಗಳು ತಮ್ಮ ಅಧಿಕೃತ ನಿಯೋಗಗಳಲ್ಲಿ ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕೂಡ ಒಳಗೊಳಿಸಿವೆ. ಉದಾಹರಣೆಗೆ, ಫ್ರಾನ್ಸ್ 22 ಪಳೆಯುಳಿಕೆ ಇಂಧನ ಪ್ರತಿನಿಧಿಗಳನ್ನು ಕರೆತಂದಿದೆ. ಇದರಲ್ಲಿ ಸಿಇಒ ಪ್ಯಾಟ್ರಿಕ್ ಪೌಯಾನ್ನೆ ಸೇರಿದಂತೆ ಟೋಟಲ್ ಎನರ್ಜಿಸ್‌ನಿಂದ ಐದು ಮಂದಿ ಇದ್ದಾರೆ.

“ಸಮಸ್ಯೆ ಉಂಟುಮಾಡಿದವರಿಗೆ ಅಧಿಕಾರ ನೀಡುವ ಮೂಲಕ ನೀವು ಅದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬುದು ಸಾಮಾನ್ಯ ಜ್ಞಾನ” ಎಂದು ಕೆಬಿಪಿಒ ಸದಸ್ಯ ಜಾಕ್ಸ್ ಬಾನ್ಬನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮೂರು ದಶಕಗಳು ಮತ್ತು 30 ಸಿಒಪಿಗಳ ನಂತರವೂ, 1,500ಕ್ಕೂ ಹೆಚ್ಚು ಪಳೆಯುಳಿಕೆ ಇಂಧನ ಲಾಬಿಗಾರರು ಹವಾಮಾನ ಮಾತುಕತೆಗಳಲ್ಲಿ ತಾವು ಇಲ್ಲಿಗೆ ಸೇರಿದವರಂತೆ ಅಲೆದಾಡುತ್ತಿದ್ದಾರೆ. ಸಿಒಪಿ 30 ‘ಅನುಷ್ಠಾನ ಸಿಒಪಿ’ ಎಂದು ಭರವಸೆ ನೀಡುತ್ತದೆ. ಆದರೆ, ಇದುವರೆಗೆ ಅವರು ಸೃಷ್ಟಿಸಿದ ಬಿಕ್ಕಟ್ಟನ್ನು ಪರಿಹರಿಸಲು ಉದ್ದೇಶಿಸಲಾದ ಸಮ್ಮೇಳನದಿಂದ ದೊಡ್ಡ ಮಾಲಿನ್ಯಕಾರಕಗಳನ್ನು ಹೊರಹಾಕುವ ಮೂಲಭೂತ ಮತ್ತು ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯನ್ನು ಸಹ ಕಾರ್ಯಗತಗೊಳಿಸಲು ಇದು ವಿಫಲವಾಗಿದೆ” ಎಂದು ಹೇಳಿದ್ದಾರೆ.

ನವೆಂಬರ್ 6 ರಿಂದ 21 (ನವೆಂಬರ್ 6 ರಿಂದ 9 ರಿಂದ ಪೂರ್ವಸಿದ್ಧತಾ ಕಾರ್ಯಕ್ರಮಗಳು, ನವೆಂಬರ್ 10 ರಿಂದ 21 ರಿಂದ ಮುಖ್ಯ ಸಮ್ಮೇಳನ) ರವರೆಗೆ ಬ್ರೆಝಿಲ್‌ನ ಬೆಲೆಮ್‌ನಲ್ಲಿ ಈ ಬಾರಿಯ ವಿಶ್ವ ಹವಾಮಾನ ಶೃಂಗಸಭೆ ನಡೆಯುತ್ತಿದೆ.

ಭೂತಾನ್‌ನ ಇಂಧನ ಯೋಜನೆಗಳಿಗೆ 4 ಸಾವಿರ ಕೋಟಿ ಸಾಲ ಘೋಷಿಸಿದ ಮೋದಿ : ಅದಾನಿ, ಅಂಬಾನಿ ಕಂಪನಿಗಳಿಂದ ಒಪ್ಪಂದಕ್ಕೆ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...