Homeಕರ್ನಾಟಕಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

ಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

- Advertisement -
- Advertisement -

‘ಈ ದೇಶದಲ್ಲಿ ಆ್ಯಂಬುಲೆನ್ಸ್‌ಗೂ ಜಾಗವಿಲ್ಲ’ ಎಂಬ ಮಾತು ಎಂತಹ ಗಟ್ಟಿ ಮನಸ್ಸಿನವರನ್ನೂ ಒಮ್ಮೆ ಕಾಡಿಸದೆ ಬಿಡದು. ಇದು ಕವಲುದಾರಿ ಸಿನಿಮಾದ ಒಂದು ದೃಶ್ಯ. ಅನಂತನಾಗ್‌ಗೆ ಗುಂಡೇಟು ಬಿದ್ದು, ಅವರನ್ನು ಉಳಿಸಬೇಕೆಂದು ಟ್ರಾಫಿಕ್ ಪೊಲೀಸ್‌ ಆದ ಹೀರೋ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಾನೆ. ಆದರೆ ರಸ್ತೆಯುದ್ದಕ್ಕೂ ಟ್ರಾಫಿಕ್. ಸೈರನ್ ಹಾಕಿದ್ದರೂ ಜಾಗಬಿಡುವವರಿಲ್ಲ. ಅನಂತ್‌ನಾಗ್ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆಯುತ್ತಾರೆ.
ಈ ದೃಶ್ಯವನ್ನು ನೋಡಿದ ಮೇಲೆ ಎಲ್ಲೇ ಆ್ಯಬುಂಲೆನ್ಸ್ ಶಬ್ದ ಕೇಳಿದರೂ ತಕ್ಷಣವೇ ಗಮನ ರಸ್ತೆಯೆಡೆಗೆ ಕೇಂದ್ರೀಕರಿಸುವಂತಾಗಿದೆ. ಇಂದು ಬೆಳಗ್ಗೆ ನಾನು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಆ್ಯಂಬುಲೆನ್ಸ್ ಶಬ್ದ ಬಂತು. ತಕ್ಷವೇ ತಿರುಗಿ ನೋಡಿದೆ. ನಾಕುಳಿತಿದ್ದ ಬಸ್ಸಿನಿಂದ ಸ್ವಲ್ಪವೇ ದೂರದಲ್ಲಿತ್ತು. ಅದರ ಮುಂದೆ ಒಂದೆರಡು ಕಾರುಗಳು ಬೈಕುಗಳು ಬರುತ್ತಿದ್ದವು. ಅವರಾರೂ ಆ್ಯಂಬುಲೆನ್ಸ್‌ಗೆ ಸೈಡ್ ಕೊಡಲಿಲ್ಲ. ಬದಲಾಗಿ ಮತ್ತೊಂದೆರಡು ಬೈಕುಗಳು ಆ್ಯಬುಲೆನ್ಸ್‌ಗೆ ಸೈಡ್‌ ಹೊಡೆದು ಮುಂದೆಬರುತ್ತಿದ್ದವು. ದುರದೃಷ್ಟವೆಂದರೆ ನಾನು ಕುಳಿತಿದ್ದ ಬಸ್ಸು ಕೂಡ ಜಾಗಬಿಡಲಿಲ್ಲ, ಹಾಗೇ ಮುಂದೆ ಬಂತು. ಅಲ್ಲಿದ್ದ ಟ್ರಾಫಿಕ್ ಪೋಲಿಸ್ ಕೂಡ ಒಂದು ಹೆಜ್ಜೆ ಅಲುಗಾಡದೆ ನಿಂತಲ್ಲೇ ನಿಂತು, ಅಲ್ಲಿಯ ಸನ್ನಿವೇಶವನ್ನು ನೋಡುತ್ತಿದ್ದರು ಬಿಟ್ಟರೆ, ಆ್ಯಂಬುಲೆನ್ಸ್‌ಗೆ ಜಾಗ ಬಿಡಿಸುವ ಕೆಲಸ ಮಾಡಲೇ ಇಲ್ಲ.

ಇದು ಒಂದು ಉದಾಹರಣೆಯಷ್ಟೇ ಇಂತಹವು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಟ್ರಾಫಿಕ್ ಇಲ್ಲದ ರಸ್ತೆಗಳಲ್ಲೂ ಆ್ಯಬುಲೆನ್ಸ್‌ಗೆ ಸೈಡ್ ಕೊಡದೆ ಮಧ್ಯ ರಸ್ತೆಯಲ್ಲಿ ಹೋಗುವವರೂ ಇದ್ದಾರೆ. ಆ್ಯಬುಲೆನ್ಸ್ ಜೊತೆಗೆ ರೇಸ್‌ಗೆ ಬಿದ್ದವರಂತೆ ಅದರ ಜೊತೆಗೇ ರೇಸ್ ಹೋಗುವವರೂ ಇದ್ದಾರೆ. ಇವರೆಲ್ಲರ ನಡುವೆ ಟ್ರಾಫಿಕ್ ನಿಯಂತ್ರಿಸಿ ಆ್ಯಬುಲೆನ್ಸ್‌ಗೆ ಜಾಗಮಾಡಿಕೊಡುವ ಸಹನೆಯನ್ನೂ ನಮ್ಮ ಟ್ರಾಫಿಕ್ ಪೊಲೀಸರು ಕಳೆದುಕೊಂಡಿದ್ದಾರೆ. ಎಂತಹ ವಿಪರ್ಯಾಸವೆಂದರೆ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯದ್ವಾರದ ಮುಂದೆಯೇ ಬಿಎಂಟಿಸಿ ಬಸ್ಸುಗಳ ಮತ್ತು ಆಟೋ ನಿಲ್ದಾಣಗಳಿದ್ದು ಆ್ಯಬುಲೆನ್ಸ್ ಅಲ್ಲಿ ನಿಲ್ಲುವ ಬಸ್ಸುಗಳನ್ನು ದಾಟಿ ಆಸ್ಪತ್ರೆಯೊಳಗೆ ಹೋಗಬೇಕಾದರೆ ಅದೇ ಒಂದು ದೊಡ್ಡ ಸಾಹಸವಾಗಿರುತ್ತದೆ.

ಇಂತಹ ಎಷ್ಟೋ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇರುತ್ತವೆ. ವಾಹನ ಸವಾರರು ಆ್ಯಂಬುಲೆನ್ಸ್‌ಗೆ ಜಾಗ ಕೊಡದೆ ತಡವಾಗುವುದರಿಂದ ಬದುಕುಳಿಯಬಹುದಾದ ಎಷ್ಟೋ ಜೀವಗಳು ದಾರಿ ಮಧ್ಯದಲ್ಲೇ ಅಸುನೀಗುತ್ತವೆ. ಆದರೂ ನಮ್ಮ ಅಂತಃಕರಣ ಕಲಕುವುದೇ ಇಲ್ಲ, ನಾವೆಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಪ್ರತಿಯೊಬ್ಬನೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇವು ಕವಲುದಾರಿ ಸಿನಿಮಾದ ಆ ಮಾತನ್ನು ಮತ್ತೆ ಮತ್ತೆ ನನಪಿಸುತ್ತವೆ.

ಅಲ್ಲದೆ ರಸ್ತೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದವರನ್ನು ರಕ್ಷಿಸದೆ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಾ ನಿಲ್ಲುವ, ಬಟ್ಟೆ ನೋಡಿ ಕಳ್ಳನೆಂದು ಹೊಡೆದು ಕೊಲ್ಲುವ, ಒಂಬತ್ತು ತಿಂಗಳ ಕಂದಮ್ಮಳನ್ನು ಅತ್ಯಾಚಾರಕ್ಕೆ ಯತ್ನಸುವ ಕ್ರೂರ ಮನಸ್ಸುಗಳ ಮಧ್ಯೆ ಆ್ಯಂಬುಲೆನ್ಸ್‌ ಒಳಗೆ ಸಾವು-ಬದುಕಿನಲ್ಲಿ ಹೋರಾಟ ಮಾಡುವವರ ನೋವು ಹೇಗೆ ತಾನೇ ಅರ್ಥವಾದೀತು ಎಂದು ನಮಗೆ ನಾವೇ ಕೇಳಿಕೊಳ್ಳಬೇಕು, ನಮ್ಮಿಂದಾಗುವ ಮಾನವೀಯ ಕೆಲಸಗಳನ್ನು ಮಾಡಬೇಕು.

ಅಂದರೆ ಎಲ್ಲರೂ ಹೀಗೆ ಇದ್ದಾರೆ ಎಂದರ್ಥವಲ್ಲ. ಆದರೂ ಒಳ್ಳೆಯ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆಯೇ ಎಂಬ ಭಯಕ್ಕೆ ಈ ಪತ್ರ ಬರೆದೆ. ಇದೆಲ್ಲದರ ನಡುವೆ ಮೊನ್ನೆ ಒಬ್ಬ ಟ್ರಾಫಿಕ್ ಪೋಲಿಸ್ ಬಟ್ಟೆರಹಿತನಾಗಿ ಬಿದ್ದಿದ್ದ ಬುದ್ದಮಾಂದ್ಯನಿಗೆ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದರು ಇಂತಹವರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ.

ಸೋಮಶೇಖರ್ ಚಲ್ಯ, ಮಂಡ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...