Homeಕರ್ನಾಟಕಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

ಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

- Advertisement -
- Advertisement -

‘ಈ ದೇಶದಲ್ಲಿ ಆ್ಯಂಬುಲೆನ್ಸ್‌ಗೂ ಜಾಗವಿಲ್ಲ’ ಎಂಬ ಮಾತು ಎಂತಹ ಗಟ್ಟಿ ಮನಸ್ಸಿನವರನ್ನೂ ಒಮ್ಮೆ ಕಾಡಿಸದೆ ಬಿಡದು. ಇದು ಕವಲುದಾರಿ ಸಿನಿಮಾದ ಒಂದು ದೃಶ್ಯ. ಅನಂತನಾಗ್‌ಗೆ ಗುಂಡೇಟು ಬಿದ್ದು, ಅವರನ್ನು ಉಳಿಸಬೇಕೆಂದು ಟ್ರಾಫಿಕ್ ಪೊಲೀಸ್‌ ಆದ ಹೀರೋ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಾನೆ. ಆದರೆ ರಸ್ತೆಯುದ್ದಕ್ಕೂ ಟ್ರಾಫಿಕ್. ಸೈರನ್ ಹಾಕಿದ್ದರೂ ಜಾಗಬಿಡುವವರಿಲ್ಲ. ಅನಂತ್‌ನಾಗ್ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆಯುತ್ತಾರೆ.
ಈ ದೃಶ್ಯವನ್ನು ನೋಡಿದ ಮೇಲೆ ಎಲ್ಲೇ ಆ್ಯಬುಂಲೆನ್ಸ್ ಶಬ್ದ ಕೇಳಿದರೂ ತಕ್ಷಣವೇ ಗಮನ ರಸ್ತೆಯೆಡೆಗೆ ಕೇಂದ್ರೀಕರಿಸುವಂತಾಗಿದೆ. ಇಂದು ಬೆಳಗ್ಗೆ ನಾನು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಆ್ಯಂಬುಲೆನ್ಸ್ ಶಬ್ದ ಬಂತು. ತಕ್ಷವೇ ತಿರುಗಿ ನೋಡಿದೆ. ನಾಕುಳಿತಿದ್ದ ಬಸ್ಸಿನಿಂದ ಸ್ವಲ್ಪವೇ ದೂರದಲ್ಲಿತ್ತು. ಅದರ ಮುಂದೆ ಒಂದೆರಡು ಕಾರುಗಳು ಬೈಕುಗಳು ಬರುತ್ತಿದ್ದವು. ಅವರಾರೂ ಆ್ಯಂಬುಲೆನ್ಸ್‌ಗೆ ಸೈಡ್ ಕೊಡಲಿಲ್ಲ. ಬದಲಾಗಿ ಮತ್ತೊಂದೆರಡು ಬೈಕುಗಳು ಆ್ಯಬುಲೆನ್ಸ್‌ಗೆ ಸೈಡ್‌ ಹೊಡೆದು ಮುಂದೆಬರುತ್ತಿದ್ದವು. ದುರದೃಷ್ಟವೆಂದರೆ ನಾನು ಕುಳಿತಿದ್ದ ಬಸ್ಸು ಕೂಡ ಜಾಗಬಿಡಲಿಲ್ಲ, ಹಾಗೇ ಮುಂದೆ ಬಂತು. ಅಲ್ಲಿದ್ದ ಟ್ರಾಫಿಕ್ ಪೋಲಿಸ್ ಕೂಡ ಒಂದು ಹೆಜ್ಜೆ ಅಲುಗಾಡದೆ ನಿಂತಲ್ಲೇ ನಿಂತು, ಅಲ್ಲಿಯ ಸನ್ನಿವೇಶವನ್ನು ನೋಡುತ್ತಿದ್ದರು ಬಿಟ್ಟರೆ, ಆ್ಯಂಬುಲೆನ್ಸ್‌ಗೆ ಜಾಗ ಬಿಡಿಸುವ ಕೆಲಸ ಮಾಡಲೇ ಇಲ್ಲ.

ಇದು ಒಂದು ಉದಾಹರಣೆಯಷ್ಟೇ ಇಂತಹವು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಟ್ರಾಫಿಕ್ ಇಲ್ಲದ ರಸ್ತೆಗಳಲ್ಲೂ ಆ್ಯಬುಲೆನ್ಸ್‌ಗೆ ಸೈಡ್ ಕೊಡದೆ ಮಧ್ಯ ರಸ್ತೆಯಲ್ಲಿ ಹೋಗುವವರೂ ಇದ್ದಾರೆ. ಆ್ಯಬುಲೆನ್ಸ್ ಜೊತೆಗೆ ರೇಸ್‌ಗೆ ಬಿದ್ದವರಂತೆ ಅದರ ಜೊತೆಗೇ ರೇಸ್ ಹೋಗುವವರೂ ಇದ್ದಾರೆ. ಇವರೆಲ್ಲರ ನಡುವೆ ಟ್ರಾಫಿಕ್ ನಿಯಂತ್ರಿಸಿ ಆ್ಯಬುಲೆನ್ಸ್‌ಗೆ ಜಾಗಮಾಡಿಕೊಡುವ ಸಹನೆಯನ್ನೂ ನಮ್ಮ ಟ್ರಾಫಿಕ್ ಪೊಲೀಸರು ಕಳೆದುಕೊಂಡಿದ್ದಾರೆ. ಎಂತಹ ವಿಪರ್ಯಾಸವೆಂದರೆ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯದ್ವಾರದ ಮುಂದೆಯೇ ಬಿಎಂಟಿಸಿ ಬಸ್ಸುಗಳ ಮತ್ತು ಆಟೋ ನಿಲ್ದಾಣಗಳಿದ್ದು ಆ್ಯಬುಲೆನ್ಸ್ ಅಲ್ಲಿ ನಿಲ್ಲುವ ಬಸ್ಸುಗಳನ್ನು ದಾಟಿ ಆಸ್ಪತ್ರೆಯೊಳಗೆ ಹೋಗಬೇಕಾದರೆ ಅದೇ ಒಂದು ದೊಡ್ಡ ಸಾಹಸವಾಗಿರುತ್ತದೆ.

ಇಂತಹ ಎಷ್ಟೋ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇರುತ್ತವೆ. ವಾಹನ ಸವಾರರು ಆ್ಯಂಬುಲೆನ್ಸ್‌ಗೆ ಜಾಗ ಕೊಡದೆ ತಡವಾಗುವುದರಿಂದ ಬದುಕುಳಿಯಬಹುದಾದ ಎಷ್ಟೋ ಜೀವಗಳು ದಾರಿ ಮಧ್ಯದಲ್ಲೇ ಅಸುನೀಗುತ್ತವೆ. ಆದರೂ ನಮ್ಮ ಅಂತಃಕರಣ ಕಲಕುವುದೇ ಇಲ್ಲ, ನಾವೆಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಪ್ರತಿಯೊಬ್ಬನೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇವು ಕವಲುದಾರಿ ಸಿನಿಮಾದ ಆ ಮಾತನ್ನು ಮತ್ತೆ ಮತ್ತೆ ನನಪಿಸುತ್ತವೆ.

ಅಲ್ಲದೆ ರಸ್ತೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದವರನ್ನು ರಕ್ಷಿಸದೆ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಾ ನಿಲ್ಲುವ, ಬಟ್ಟೆ ನೋಡಿ ಕಳ್ಳನೆಂದು ಹೊಡೆದು ಕೊಲ್ಲುವ, ಒಂಬತ್ತು ತಿಂಗಳ ಕಂದಮ್ಮಳನ್ನು ಅತ್ಯಾಚಾರಕ್ಕೆ ಯತ್ನಸುವ ಕ್ರೂರ ಮನಸ್ಸುಗಳ ಮಧ್ಯೆ ಆ್ಯಂಬುಲೆನ್ಸ್‌ ಒಳಗೆ ಸಾವು-ಬದುಕಿನಲ್ಲಿ ಹೋರಾಟ ಮಾಡುವವರ ನೋವು ಹೇಗೆ ತಾನೇ ಅರ್ಥವಾದೀತು ಎಂದು ನಮಗೆ ನಾವೇ ಕೇಳಿಕೊಳ್ಳಬೇಕು, ನಮ್ಮಿಂದಾಗುವ ಮಾನವೀಯ ಕೆಲಸಗಳನ್ನು ಮಾಡಬೇಕು.

ಅಂದರೆ ಎಲ್ಲರೂ ಹೀಗೆ ಇದ್ದಾರೆ ಎಂದರ್ಥವಲ್ಲ. ಆದರೂ ಒಳ್ಳೆಯ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆಯೇ ಎಂಬ ಭಯಕ್ಕೆ ಈ ಪತ್ರ ಬರೆದೆ. ಇದೆಲ್ಲದರ ನಡುವೆ ಮೊನ್ನೆ ಒಬ್ಬ ಟ್ರಾಫಿಕ್ ಪೋಲಿಸ್ ಬಟ್ಟೆರಹಿತನಾಗಿ ಬಿದ್ದಿದ್ದ ಬುದ್ದಮಾಂದ್ಯನಿಗೆ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದರು ಇಂತಹವರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ.

ಸೋಮಶೇಖರ್ ಚಲ್ಯ, ಮಂಡ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...