Homeಕರ್ನಾಟಕಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

ಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

- Advertisement -
- Advertisement -

‘ಈ ದೇಶದಲ್ಲಿ ಆ್ಯಂಬುಲೆನ್ಸ್‌ಗೂ ಜಾಗವಿಲ್ಲ’ ಎಂಬ ಮಾತು ಎಂತಹ ಗಟ್ಟಿ ಮನಸ್ಸಿನವರನ್ನೂ ಒಮ್ಮೆ ಕಾಡಿಸದೆ ಬಿಡದು. ಇದು ಕವಲುದಾರಿ ಸಿನಿಮಾದ ಒಂದು ದೃಶ್ಯ. ಅನಂತನಾಗ್‌ಗೆ ಗುಂಡೇಟು ಬಿದ್ದು, ಅವರನ್ನು ಉಳಿಸಬೇಕೆಂದು ಟ್ರಾಫಿಕ್ ಪೊಲೀಸ್‌ ಆದ ಹೀರೋ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಾನೆ. ಆದರೆ ರಸ್ತೆಯುದ್ದಕ್ಕೂ ಟ್ರಾಫಿಕ್. ಸೈರನ್ ಹಾಕಿದ್ದರೂ ಜಾಗಬಿಡುವವರಿಲ್ಲ. ಅನಂತ್‌ನಾಗ್ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆಯುತ್ತಾರೆ.
ಈ ದೃಶ್ಯವನ್ನು ನೋಡಿದ ಮೇಲೆ ಎಲ್ಲೇ ಆ್ಯಬುಂಲೆನ್ಸ್ ಶಬ್ದ ಕೇಳಿದರೂ ತಕ್ಷಣವೇ ಗಮನ ರಸ್ತೆಯೆಡೆಗೆ ಕೇಂದ್ರೀಕರಿಸುವಂತಾಗಿದೆ. ಇಂದು ಬೆಳಗ್ಗೆ ನಾನು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಆ್ಯಂಬುಲೆನ್ಸ್ ಶಬ್ದ ಬಂತು. ತಕ್ಷವೇ ತಿರುಗಿ ನೋಡಿದೆ. ನಾಕುಳಿತಿದ್ದ ಬಸ್ಸಿನಿಂದ ಸ್ವಲ್ಪವೇ ದೂರದಲ್ಲಿತ್ತು. ಅದರ ಮುಂದೆ ಒಂದೆರಡು ಕಾರುಗಳು ಬೈಕುಗಳು ಬರುತ್ತಿದ್ದವು. ಅವರಾರೂ ಆ್ಯಂಬುಲೆನ್ಸ್‌ಗೆ ಸೈಡ್ ಕೊಡಲಿಲ್ಲ. ಬದಲಾಗಿ ಮತ್ತೊಂದೆರಡು ಬೈಕುಗಳು ಆ್ಯಬುಲೆನ್ಸ್‌ಗೆ ಸೈಡ್‌ ಹೊಡೆದು ಮುಂದೆಬರುತ್ತಿದ್ದವು. ದುರದೃಷ್ಟವೆಂದರೆ ನಾನು ಕುಳಿತಿದ್ದ ಬಸ್ಸು ಕೂಡ ಜಾಗಬಿಡಲಿಲ್ಲ, ಹಾಗೇ ಮುಂದೆ ಬಂತು. ಅಲ್ಲಿದ್ದ ಟ್ರಾಫಿಕ್ ಪೋಲಿಸ್ ಕೂಡ ಒಂದು ಹೆಜ್ಜೆ ಅಲುಗಾಡದೆ ನಿಂತಲ್ಲೇ ನಿಂತು, ಅಲ್ಲಿಯ ಸನ್ನಿವೇಶವನ್ನು ನೋಡುತ್ತಿದ್ದರು ಬಿಟ್ಟರೆ, ಆ್ಯಂಬುಲೆನ್ಸ್‌ಗೆ ಜಾಗ ಬಿಡಿಸುವ ಕೆಲಸ ಮಾಡಲೇ ಇಲ್ಲ.

ಇದು ಒಂದು ಉದಾಹರಣೆಯಷ್ಟೇ ಇಂತಹವು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಟ್ರಾಫಿಕ್ ಇಲ್ಲದ ರಸ್ತೆಗಳಲ್ಲೂ ಆ್ಯಬುಲೆನ್ಸ್‌ಗೆ ಸೈಡ್ ಕೊಡದೆ ಮಧ್ಯ ರಸ್ತೆಯಲ್ಲಿ ಹೋಗುವವರೂ ಇದ್ದಾರೆ. ಆ್ಯಬುಲೆನ್ಸ್ ಜೊತೆಗೆ ರೇಸ್‌ಗೆ ಬಿದ್ದವರಂತೆ ಅದರ ಜೊತೆಗೇ ರೇಸ್ ಹೋಗುವವರೂ ಇದ್ದಾರೆ. ಇವರೆಲ್ಲರ ನಡುವೆ ಟ್ರಾಫಿಕ್ ನಿಯಂತ್ರಿಸಿ ಆ್ಯಬುಲೆನ್ಸ್‌ಗೆ ಜಾಗಮಾಡಿಕೊಡುವ ಸಹನೆಯನ್ನೂ ನಮ್ಮ ಟ್ರಾಫಿಕ್ ಪೊಲೀಸರು ಕಳೆದುಕೊಂಡಿದ್ದಾರೆ. ಎಂತಹ ವಿಪರ್ಯಾಸವೆಂದರೆ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯದ್ವಾರದ ಮುಂದೆಯೇ ಬಿಎಂಟಿಸಿ ಬಸ್ಸುಗಳ ಮತ್ತು ಆಟೋ ನಿಲ್ದಾಣಗಳಿದ್ದು ಆ್ಯಬುಲೆನ್ಸ್ ಅಲ್ಲಿ ನಿಲ್ಲುವ ಬಸ್ಸುಗಳನ್ನು ದಾಟಿ ಆಸ್ಪತ್ರೆಯೊಳಗೆ ಹೋಗಬೇಕಾದರೆ ಅದೇ ಒಂದು ದೊಡ್ಡ ಸಾಹಸವಾಗಿರುತ್ತದೆ.

ಇಂತಹ ಎಷ್ಟೋ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇರುತ್ತವೆ. ವಾಹನ ಸವಾರರು ಆ್ಯಂಬುಲೆನ್ಸ್‌ಗೆ ಜಾಗ ಕೊಡದೆ ತಡವಾಗುವುದರಿಂದ ಬದುಕುಳಿಯಬಹುದಾದ ಎಷ್ಟೋ ಜೀವಗಳು ದಾರಿ ಮಧ್ಯದಲ್ಲೇ ಅಸುನೀಗುತ್ತವೆ. ಆದರೂ ನಮ್ಮ ಅಂತಃಕರಣ ಕಲಕುವುದೇ ಇಲ್ಲ, ನಾವೆಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಪ್ರತಿಯೊಬ್ಬನೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇವು ಕವಲುದಾರಿ ಸಿನಿಮಾದ ಆ ಮಾತನ್ನು ಮತ್ತೆ ಮತ್ತೆ ನನಪಿಸುತ್ತವೆ.

ಅಲ್ಲದೆ ರಸ್ತೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದವರನ್ನು ರಕ್ಷಿಸದೆ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಾ ನಿಲ್ಲುವ, ಬಟ್ಟೆ ನೋಡಿ ಕಳ್ಳನೆಂದು ಹೊಡೆದು ಕೊಲ್ಲುವ, ಒಂಬತ್ತು ತಿಂಗಳ ಕಂದಮ್ಮಳನ್ನು ಅತ್ಯಾಚಾರಕ್ಕೆ ಯತ್ನಸುವ ಕ್ರೂರ ಮನಸ್ಸುಗಳ ಮಧ್ಯೆ ಆ್ಯಂಬುಲೆನ್ಸ್‌ ಒಳಗೆ ಸಾವು-ಬದುಕಿನಲ್ಲಿ ಹೋರಾಟ ಮಾಡುವವರ ನೋವು ಹೇಗೆ ತಾನೇ ಅರ್ಥವಾದೀತು ಎಂದು ನಮಗೆ ನಾವೇ ಕೇಳಿಕೊಳ್ಳಬೇಕು, ನಮ್ಮಿಂದಾಗುವ ಮಾನವೀಯ ಕೆಲಸಗಳನ್ನು ಮಾಡಬೇಕು.

ಅಂದರೆ ಎಲ್ಲರೂ ಹೀಗೆ ಇದ್ದಾರೆ ಎಂದರ್ಥವಲ್ಲ. ಆದರೂ ಒಳ್ಳೆಯ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆಯೇ ಎಂಬ ಭಯಕ್ಕೆ ಈ ಪತ್ರ ಬರೆದೆ. ಇದೆಲ್ಲದರ ನಡುವೆ ಮೊನ್ನೆ ಒಬ್ಬ ಟ್ರಾಫಿಕ್ ಪೋಲಿಸ್ ಬಟ್ಟೆರಹಿತನಾಗಿ ಬಿದ್ದಿದ್ದ ಬುದ್ದಮಾಂದ್ಯನಿಗೆ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದರು ಇಂತಹವರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ.

ಸೋಮಶೇಖರ್ ಚಲ್ಯ, ಮಂಡ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...