Homeಕರ್ನಾಟಕಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

ಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

- Advertisement -
- Advertisement -

‘ಈ ದೇಶದಲ್ಲಿ ಆ್ಯಂಬುಲೆನ್ಸ್‌ಗೂ ಜಾಗವಿಲ್ಲ’ ಎಂಬ ಮಾತು ಎಂತಹ ಗಟ್ಟಿ ಮನಸ್ಸಿನವರನ್ನೂ ಒಮ್ಮೆ ಕಾಡಿಸದೆ ಬಿಡದು. ಇದು ಕವಲುದಾರಿ ಸಿನಿಮಾದ ಒಂದು ದೃಶ್ಯ. ಅನಂತನಾಗ್‌ಗೆ ಗುಂಡೇಟು ಬಿದ್ದು, ಅವರನ್ನು ಉಳಿಸಬೇಕೆಂದು ಟ್ರಾಫಿಕ್ ಪೊಲೀಸ್‌ ಆದ ಹೀರೋ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಾನೆ. ಆದರೆ ರಸ್ತೆಯುದ್ದಕ್ಕೂ ಟ್ರಾಫಿಕ್. ಸೈರನ್ ಹಾಕಿದ್ದರೂ ಜಾಗಬಿಡುವವರಿಲ್ಲ. ಅನಂತ್‌ನಾಗ್ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆಯುತ್ತಾರೆ.
ಈ ದೃಶ್ಯವನ್ನು ನೋಡಿದ ಮೇಲೆ ಎಲ್ಲೇ ಆ್ಯಬುಂಲೆನ್ಸ್ ಶಬ್ದ ಕೇಳಿದರೂ ತಕ್ಷಣವೇ ಗಮನ ರಸ್ತೆಯೆಡೆಗೆ ಕೇಂದ್ರೀಕರಿಸುವಂತಾಗಿದೆ. ಇಂದು ಬೆಳಗ್ಗೆ ನಾನು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಆ್ಯಂಬುಲೆನ್ಸ್ ಶಬ್ದ ಬಂತು. ತಕ್ಷವೇ ತಿರುಗಿ ನೋಡಿದೆ. ನಾಕುಳಿತಿದ್ದ ಬಸ್ಸಿನಿಂದ ಸ್ವಲ್ಪವೇ ದೂರದಲ್ಲಿತ್ತು. ಅದರ ಮುಂದೆ ಒಂದೆರಡು ಕಾರುಗಳು ಬೈಕುಗಳು ಬರುತ್ತಿದ್ದವು. ಅವರಾರೂ ಆ್ಯಂಬುಲೆನ್ಸ್‌ಗೆ ಸೈಡ್ ಕೊಡಲಿಲ್ಲ. ಬದಲಾಗಿ ಮತ್ತೊಂದೆರಡು ಬೈಕುಗಳು ಆ್ಯಬುಲೆನ್ಸ್‌ಗೆ ಸೈಡ್‌ ಹೊಡೆದು ಮುಂದೆಬರುತ್ತಿದ್ದವು. ದುರದೃಷ್ಟವೆಂದರೆ ನಾನು ಕುಳಿತಿದ್ದ ಬಸ್ಸು ಕೂಡ ಜಾಗಬಿಡಲಿಲ್ಲ, ಹಾಗೇ ಮುಂದೆ ಬಂತು. ಅಲ್ಲಿದ್ದ ಟ್ರಾಫಿಕ್ ಪೋಲಿಸ್ ಕೂಡ ಒಂದು ಹೆಜ್ಜೆ ಅಲುಗಾಡದೆ ನಿಂತಲ್ಲೇ ನಿಂತು, ಅಲ್ಲಿಯ ಸನ್ನಿವೇಶವನ್ನು ನೋಡುತ್ತಿದ್ದರು ಬಿಟ್ಟರೆ, ಆ್ಯಂಬುಲೆನ್ಸ್‌ಗೆ ಜಾಗ ಬಿಡಿಸುವ ಕೆಲಸ ಮಾಡಲೇ ಇಲ್ಲ.

ಇದು ಒಂದು ಉದಾಹರಣೆಯಷ್ಟೇ ಇಂತಹವು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಟ್ರಾಫಿಕ್ ಇಲ್ಲದ ರಸ್ತೆಗಳಲ್ಲೂ ಆ್ಯಬುಲೆನ್ಸ್‌ಗೆ ಸೈಡ್ ಕೊಡದೆ ಮಧ್ಯ ರಸ್ತೆಯಲ್ಲಿ ಹೋಗುವವರೂ ಇದ್ದಾರೆ. ಆ್ಯಬುಲೆನ್ಸ್ ಜೊತೆಗೆ ರೇಸ್‌ಗೆ ಬಿದ್ದವರಂತೆ ಅದರ ಜೊತೆಗೇ ರೇಸ್ ಹೋಗುವವರೂ ಇದ್ದಾರೆ. ಇವರೆಲ್ಲರ ನಡುವೆ ಟ್ರಾಫಿಕ್ ನಿಯಂತ್ರಿಸಿ ಆ್ಯಬುಲೆನ್ಸ್‌ಗೆ ಜಾಗಮಾಡಿಕೊಡುವ ಸಹನೆಯನ್ನೂ ನಮ್ಮ ಟ್ರಾಫಿಕ್ ಪೊಲೀಸರು ಕಳೆದುಕೊಂಡಿದ್ದಾರೆ. ಎಂತಹ ವಿಪರ್ಯಾಸವೆಂದರೆ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯದ್ವಾರದ ಮುಂದೆಯೇ ಬಿಎಂಟಿಸಿ ಬಸ್ಸುಗಳ ಮತ್ತು ಆಟೋ ನಿಲ್ದಾಣಗಳಿದ್ದು ಆ್ಯಬುಲೆನ್ಸ್ ಅಲ್ಲಿ ನಿಲ್ಲುವ ಬಸ್ಸುಗಳನ್ನು ದಾಟಿ ಆಸ್ಪತ್ರೆಯೊಳಗೆ ಹೋಗಬೇಕಾದರೆ ಅದೇ ಒಂದು ದೊಡ್ಡ ಸಾಹಸವಾಗಿರುತ್ತದೆ.

ಇಂತಹ ಎಷ್ಟೋ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇರುತ್ತವೆ. ವಾಹನ ಸವಾರರು ಆ್ಯಂಬುಲೆನ್ಸ್‌ಗೆ ಜಾಗ ಕೊಡದೆ ತಡವಾಗುವುದರಿಂದ ಬದುಕುಳಿಯಬಹುದಾದ ಎಷ್ಟೋ ಜೀವಗಳು ದಾರಿ ಮಧ್ಯದಲ್ಲೇ ಅಸುನೀಗುತ್ತವೆ. ಆದರೂ ನಮ್ಮ ಅಂತಃಕರಣ ಕಲಕುವುದೇ ಇಲ್ಲ, ನಾವೆಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಪ್ರತಿಯೊಬ್ಬನೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇವು ಕವಲುದಾರಿ ಸಿನಿಮಾದ ಆ ಮಾತನ್ನು ಮತ್ತೆ ಮತ್ತೆ ನನಪಿಸುತ್ತವೆ.

ಅಲ್ಲದೆ ರಸ್ತೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದವರನ್ನು ರಕ್ಷಿಸದೆ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಾ ನಿಲ್ಲುವ, ಬಟ್ಟೆ ನೋಡಿ ಕಳ್ಳನೆಂದು ಹೊಡೆದು ಕೊಲ್ಲುವ, ಒಂಬತ್ತು ತಿಂಗಳ ಕಂದಮ್ಮಳನ್ನು ಅತ್ಯಾಚಾರಕ್ಕೆ ಯತ್ನಸುವ ಕ್ರೂರ ಮನಸ್ಸುಗಳ ಮಧ್ಯೆ ಆ್ಯಂಬುಲೆನ್ಸ್‌ ಒಳಗೆ ಸಾವು-ಬದುಕಿನಲ್ಲಿ ಹೋರಾಟ ಮಾಡುವವರ ನೋವು ಹೇಗೆ ತಾನೇ ಅರ್ಥವಾದೀತು ಎಂದು ನಮಗೆ ನಾವೇ ಕೇಳಿಕೊಳ್ಳಬೇಕು, ನಮ್ಮಿಂದಾಗುವ ಮಾನವೀಯ ಕೆಲಸಗಳನ್ನು ಮಾಡಬೇಕು.

ಅಂದರೆ ಎಲ್ಲರೂ ಹೀಗೆ ಇದ್ದಾರೆ ಎಂದರ್ಥವಲ್ಲ. ಆದರೂ ಒಳ್ಳೆಯ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆಯೇ ಎಂಬ ಭಯಕ್ಕೆ ಈ ಪತ್ರ ಬರೆದೆ. ಇದೆಲ್ಲದರ ನಡುವೆ ಮೊನ್ನೆ ಒಬ್ಬ ಟ್ರಾಫಿಕ್ ಪೋಲಿಸ್ ಬಟ್ಟೆರಹಿತನಾಗಿ ಬಿದ್ದಿದ್ದ ಬುದ್ದಮಾಂದ್ಯನಿಗೆ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದರು ಇಂತಹವರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ.

ಸೋಮಶೇಖರ್ ಚಲ್ಯ, ಮಂಡ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...