Homeಕರ್ನಾಟಕಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

ಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

- Advertisement -
- Advertisement -

‘ಈ ದೇಶದಲ್ಲಿ ಆ್ಯಂಬುಲೆನ್ಸ್‌ಗೂ ಜಾಗವಿಲ್ಲ’ ಎಂಬ ಮಾತು ಎಂತಹ ಗಟ್ಟಿ ಮನಸ್ಸಿನವರನ್ನೂ ಒಮ್ಮೆ ಕಾಡಿಸದೆ ಬಿಡದು. ಇದು ಕವಲುದಾರಿ ಸಿನಿಮಾದ ಒಂದು ದೃಶ್ಯ. ಅನಂತನಾಗ್‌ಗೆ ಗುಂಡೇಟು ಬಿದ್ದು, ಅವರನ್ನು ಉಳಿಸಬೇಕೆಂದು ಟ್ರಾಫಿಕ್ ಪೊಲೀಸ್‌ ಆದ ಹೀರೋ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಾನೆ. ಆದರೆ ರಸ್ತೆಯುದ್ದಕ್ಕೂ ಟ್ರಾಫಿಕ್. ಸೈರನ್ ಹಾಕಿದ್ದರೂ ಜಾಗಬಿಡುವವರಿಲ್ಲ. ಅನಂತ್‌ನಾಗ್ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆಯುತ್ತಾರೆ.
ಈ ದೃಶ್ಯವನ್ನು ನೋಡಿದ ಮೇಲೆ ಎಲ್ಲೇ ಆ್ಯಬುಂಲೆನ್ಸ್ ಶಬ್ದ ಕೇಳಿದರೂ ತಕ್ಷಣವೇ ಗಮನ ರಸ್ತೆಯೆಡೆಗೆ ಕೇಂದ್ರೀಕರಿಸುವಂತಾಗಿದೆ. ಇಂದು ಬೆಳಗ್ಗೆ ನಾನು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಆ್ಯಂಬುಲೆನ್ಸ್ ಶಬ್ದ ಬಂತು. ತಕ್ಷವೇ ತಿರುಗಿ ನೋಡಿದೆ. ನಾಕುಳಿತಿದ್ದ ಬಸ್ಸಿನಿಂದ ಸ್ವಲ್ಪವೇ ದೂರದಲ್ಲಿತ್ತು. ಅದರ ಮುಂದೆ ಒಂದೆರಡು ಕಾರುಗಳು ಬೈಕುಗಳು ಬರುತ್ತಿದ್ದವು. ಅವರಾರೂ ಆ್ಯಂಬುಲೆನ್ಸ್‌ಗೆ ಸೈಡ್ ಕೊಡಲಿಲ್ಲ. ಬದಲಾಗಿ ಮತ್ತೊಂದೆರಡು ಬೈಕುಗಳು ಆ್ಯಬುಲೆನ್ಸ್‌ಗೆ ಸೈಡ್‌ ಹೊಡೆದು ಮುಂದೆಬರುತ್ತಿದ್ದವು. ದುರದೃಷ್ಟವೆಂದರೆ ನಾನು ಕುಳಿತಿದ್ದ ಬಸ್ಸು ಕೂಡ ಜಾಗಬಿಡಲಿಲ್ಲ, ಹಾಗೇ ಮುಂದೆ ಬಂತು. ಅಲ್ಲಿದ್ದ ಟ್ರಾಫಿಕ್ ಪೋಲಿಸ್ ಕೂಡ ಒಂದು ಹೆಜ್ಜೆ ಅಲುಗಾಡದೆ ನಿಂತಲ್ಲೇ ನಿಂತು, ಅಲ್ಲಿಯ ಸನ್ನಿವೇಶವನ್ನು ನೋಡುತ್ತಿದ್ದರು ಬಿಟ್ಟರೆ, ಆ್ಯಂಬುಲೆನ್ಸ್‌ಗೆ ಜಾಗ ಬಿಡಿಸುವ ಕೆಲಸ ಮಾಡಲೇ ಇಲ್ಲ.

ಇದು ಒಂದು ಉದಾಹರಣೆಯಷ್ಟೇ ಇಂತಹವು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಟ್ರಾಫಿಕ್ ಇಲ್ಲದ ರಸ್ತೆಗಳಲ್ಲೂ ಆ್ಯಬುಲೆನ್ಸ್‌ಗೆ ಸೈಡ್ ಕೊಡದೆ ಮಧ್ಯ ರಸ್ತೆಯಲ್ಲಿ ಹೋಗುವವರೂ ಇದ್ದಾರೆ. ಆ್ಯಬುಲೆನ್ಸ್ ಜೊತೆಗೆ ರೇಸ್‌ಗೆ ಬಿದ್ದವರಂತೆ ಅದರ ಜೊತೆಗೇ ರೇಸ್ ಹೋಗುವವರೂ ಇದ್ದಾರೆ. ಇವರೆಲ್ಲರ ನಡುವೆ ಟ್ರಾಫಿಕ್ ನಿಯಂತ್ರಿಸಿ ಆ್ಯಬುಲೆನ್ಸ್‌ಗೆ ಜಾಗಮಾಡಿಕೊಡುವ ಸಹನೆಯನ್ನೂ ನಮ್ಮ ಟ್ರಾಫಿಕ್ ಪೊಲೀಸರು ಕಳೆದುಕೊಂಡಿದ್ದಾರೆ. ಎಂತಹ ವಿಪರ್ಯಾಸವೆಂದರೆ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯದ್ವಾರದ ಮುಂದೆಯೇ ಬಿಎಂಟಿಸಿ ಬಸ್ಸುಗಳ ಮತ್ತು ಆಟೋ ನಿಲ್ದಾಣಗಳಿದ್ದು ಆ್ಯಬುಲೆನ್ಸ್ ಅಲ್ಲಿ ನಿಲ್ಲುವ ಬಸ್ಸುಗಳನ್ನು ದಾಟಿ ಆಸ್ಪತ್ರೆಯೊಳಗೆ ಹೋಗಬೇಕಾದರೆ ಅದೇ ಒಂದು ದೊಡ್ಡ ಸಾಹಸವಾಗಿರುತ್ತದೆ.

ಇಂತಹ ಎಷ್ಟೋ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇರುತ್ತವೆ. ವಾಹನ ಸವಾರರು ಆ್ಯಂಬುಲೆನ್ಸ್‌ಗೆ ಜಾಗ ಕೊಡದೆ ತಡವಾಗುವುದರಿಂದ ಬದುಕುಳಿಯಬಹುದಾದ ಎಷ್ಟೋ ಜೀವಗಳು ದಾರಿ ಮಧ್ಯದಲ್ಲೇ ಅಸುನೀಗುತ್ತವೆ. ಆದರೂ ನಮ್ಮ ಅಂತಃಕರಣ ಕಲಕುವುದೇ ಇಲ್ಲ, ನಾವೆಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಪ್ರತಿಯೊಬ್ಬನೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇವು ಕವಲುದಾರಿ ಸಿನಿಮಾದ ಆ ಮಾತನ್ನು ಮತ್ತೆ ಮತ್ತೆ ನನಪಿಸುತ್ತವೆ.

ಅಲ್ಲದೆ ರಸ್ತೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದವರನ್ನು ರಕ್ಷಿಸದೆ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಾ ನಿಲ್ಲುವ, ಬಟ್ಟೆ ನೋಡಿ ಕಳ್ಳನೆಂದು ಹೊಡೆದು ಕೊಲ್ಲುವ, ಒಂಬತ್ತು ತಿಂಗಳ ಕಂದಮ್ಮಳನ್ನು ಅತ್ಯಾಚಾರಕ್ಕೆ ಯತ್ನಸುವ ಕ್ರೂರ ಮನಸ್ಸುಗಳ ಮಧ್ಯೆ ಆ್ಯಂಬುಲೆನ್ಸ್‌ ಒಳಗೆ ಸಾವು-ಬದುಕಿನಲ್ಲಿ ಹೋರಾಟ ಮಾಡುವವರ ನೋವು ಹೇಗೆ ತಾನೇ ಅರ್ಥವಾದೀತು ಎಂದು ನಮಗೆ ನಾವೇ ಕೇಳಿಕೊಳ್ಳಬೇಕು, ನಮ್ಮಿಂದಾಗುವ ಮಾನವೀಯ ಕೆಲಸಗಳನ್ನು ಮಾಡಬೇಕು.

ಅಂದರೆ ಎಲ್ಲರೂ ಹೀಗೆ ಇದ್ದಾರೆ ಎಂದರ್ಥವಲ್ಲ. ಆದರೂ ಒಳ್ಳೆಯ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆಯೇ ಎಂಬ ಭಯಕ್ಕೆ ಈ ಪತ್ರ ಬರೆದೆ. ಇದೆಲ್ಲದರ ನಡುವೆ ಮೊನ್ನೆ ಒಬ್ಬ ಟ್ರಾಫಿಕ್ ಪೋಲಿಸ್ ಬಟ್ಟೆರಹಿತನಾಗಿ ಬಿದ್ದಿದ್ದ ಬುದ್ದಮಾಂದ್ಯನಿಗೆ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದರು ಇಂತಹವರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ.

ಸೋಮಶೇಖರ್ ಚಲ್ಯ, ಮಂಡ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...