Homeಕರ್ನಾಟಕಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

ಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

- Advertisement -
- Advertisement -

‘ಈ ದೇಶದಲ್ಲಿ ಆ್ಯಂಬುಲೆನ್ಸ್‌ಗೂ ಜಾಗವಿಲ್ಲ’ ಎಂಬ ಮಾತು ಎಂತಹ ಗಟ್ಟಿ ಮನಸ್ಸಿನವರನ್ನೂ ಒಮ್ಮೆ ಕಾಡಿಸದೆ ಬಿಡದು. ಇದು ಕವಲುದಾರಿ ಸಿನಿಮಾದ ಒಂದು ದೃಶ್ಯ. ಅನಂತನಾಗ್‌ಗೆ ಗುಂಡೇಟು ಬಿದ್ದು, ಅವರನ್ನು ಉಳಿಸಬೇಕೆಂದು ಟ್ರಾಫಿಕ್ ಪೊಲೀಸ್‌ ಆದ ಹೀರೋ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಾನೆ. ಆದರೆ ರಸ್ತೆಯುದ್ದಕ್ಕೂ ಟ್ರಾಫಿಕ್. ಸೈರನ್ ಹಾಕಿದ್ದರೂ ಜಾಗಬಿಡುವವರಿಲ್ಲ. ಅನಂತ್‌ನಾಗ್ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆಯುತ್ತಾರೆ.
ಈ ದೃಶ್ಯವನ್ನು ನೋಡಿದ ಮೇಲೆ ಎಲ್ಲೇ ಆ್ಯಬುಂಲೆನ್ಸ್ ಶಬ್ದ ಕೇಳಿದರೂ ತಕ್ಷಣವೇ ಗಮನ ರಸ್ತೆಯೆಡೆಗೆ ಕೇಂದ್ರೀಕರಿಸುವಂತಾಗಿದೆ. ಇಂದು ಬೆಳಗ್ಗೆ ನಾನು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಆ್ಯಂಬುಲೆನ್ಸ್ ಶಬ್ದ ಬಂತು. ತಕ್ಷವೇ ತಿರುಗಿ ನೋಡಿದೆ. ನಾಕುಳಿತಿದ್ದ ಬಸ್ಸಿನಿಂದ ಸ್ವಲ್ಪವೇ ದೂರದಲ್ಲಿತ್ತು. ಅದರ ಮುಂದೆ ಒಂದೆರಡು ಕಾರುಗಳು ಬೈಕುಗಳು ಬರುತ್ತಿದ್ದವು. ಅವರಾರೂ ಆ್ಯಂಬುಲೆನ್ಸ್‌ಗೆ ಸೈಡ್ ಕೊಡಲಿಲ್ಲ. ಬದಲಾಗಿ ಮತ್ತೊಂದೆರಡು ಬೈಕುಗಳು ಆ್ಯಬುಲೆನ್ಸ್‌ಗೆ ಸೈಡ್‌ ಹೊಡೆದು ಮುಂದೆಬರುತ್ತಿದ್ದವು. ದುರದೃಷ್ಟವೆಂದರೆ ನಾನು ಕುಳಿತಿದ್ದ ಬಸ್ಸು ಕೂಡ ಜಾಗಬಿಡಲಿಲ್ಲ, ಹಾಗೇ ಮುಂದೆ ಬಂತು. ಅಲ್ಲಿದ್ದ ಟ್ರಾಫಿಕ್ ಪೋಲಿಸ್ ಕೂಡ ಒಂದು ಹೆಜ್ಜೆ ಅಲುಗಾಡದೆ ನಿಂತಲ್ಲೇ ನಿಂತು, ಅಲ್ಲಿಯ ಸನ್ನಿವೇಶವನ್ನು ನೋಡುತ್ತಿದ್ದರು ಬಿಟ್ಟರೆ, ಆ್ಯಂಬುಲೆನ್ಸ್‌ಗೆ ಜಾಗ ಬಿಡಿಸುವ ಕೆಲಸ ಮಾಡಲೇ ಇಲ್ಲ.

ಇದು ಒಂದು ಉದಾಹರಣೆಯಷ್ಟೇ ಇಂತಹವು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಟ್ರಾಫಿಕ್ ಇಲ್ಲದ ರಸ್ತೆಗಳಲ್ಲೂ ಆ್ಯಬುಲೆನ್ಸ್‌ಗೆ ಸೈಡ್ ಕೊಡದೆ ಮಧ್ಯ ರಸ್ತೆಯಲ್ಲಿ ಹೋಗುವವರೂ ಇದ್ದಾರೆ. ಆ್ಯಬುಲೆನ್ಸ್ ಜೊತೆಗೆ ರೇಸ್‌ಗೆ ಬಿದ್ದವರಂತೆ ಅದರ ಜೊತೆಗೇ ರೇಸ್ ಹೋಗುವವರೂ ಇದ್ದಾರೆ. ಇವರೆಲ್ಲರ ನಡುವೆ ಟ್ರಾಫಿಕ್ ನಿಯಂತ್ರಿಸಿ ಆ್ಯಬುಲೆನ್ಸ್‌ಗೆ ಜಾಗಮಾಡಿಕೊಡುವ ಸಹನೆಯನ್ನೂ ನಮ್ಮ ಟ್ರಾಫಿಕ್ ಪೊಲೀಸರು ಕಳೆದುಕೊಂಡಿದ್ದಾರೆ. ಎಂತಹ ವಿಪರ್ಯಾಸವೆಂದರೆ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯದ್ವಾರದ ಮುಂದೆಯೇ ಬಿಎಂಟಿಸಿ ಬಸ್ಸುಗಳ ಮತ್ತು ಆಟೋ ನಿಲ್ದಾಣಗಳಿದ್ದು ಆ್ಯಬುಲೆನ್ಸ್ ಅಲ್ಲಿ ನಿಲ್ಲುವ ಬಸ್ಸುಗಳನ್ನು ದಾಟಿ ಆಸ್ಪತ್ರೆಯೊಳಗೆ ಹೋಗಬೇಕಾದರೆ ಅದೇ ಒಂದು ದೊಡ್ಡ ಸಾಹಸವಾಗಿರುತ್ತದೆ.

ಇಂತಹ ಎಷ್ಟೋ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇರುತ್ತವೆ. ವಾಹನ ಸವಾರರು ಆ್ಯಂಬುಲೆನ್ಸ್‌ಗೆ ಜಾಗ ಕೊಡದೆ ತಡವಾಗುವುದರಿಂದ ಬದುಕುಳಿಯಬಹುದಾದ ಎಷ್ಟೋ ಜೀವಗಳು ದಾರಿ ಮಧ್ಯದಲ್ಲೇ ಅಸುನೀಗುತ್ತವೆ. ಆದರೂ ನಮ್ಮ ಅಂತಃಕರಣ ಕಲಕುವುದೇ ಇಲ್ಲ, ನಾವೆಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಪ್ರತಿಯೊಬ್ಬನೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇವು ಕವಲುದಾರಿ ಸಿನಿಮಾದ ಆ ಮಾತನ್ನು ಮತ್ತೆ ಮತ್ತೆ ನನಪಿಸುತ್ತವೆ.

ಅಲ್ಲದೆ ರಸ್ತೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದವರನ್ನು ರಕ್ಷಿಸದೆ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಾ ನಿಲ್ಲುವ, ಬಟ್ಟೆ ನೋಡಿ ಕಳ್ಳನೆಂದು ಹೊಡೆದು ಕೊಲ್ಲುವ, ಒಂಬತ್ತು ತಿಂಗಳ ಕಂದಮ್ಮಳನ್ನು ಅತ್ಯಾಚಾರಕ್ಕೆ ಯತ್ನಸುವ ಕ್ರೂರ ಮನಸ್ಸುಗಳ ಮಧ್ಯೆ ಆ್ಯಂಬುಲೆನ್ಸ್‌ ಒಳಗೆ ಸಾವು-ಬದುಕಿನಲ್ಲಿ ಹೋರಾಟ ಮಾಡುವವರ ನೋವು ಹೇಗೆ ತಾನೇ ಅರ್ಥವಾದೀತು ಎಂದು ನಮಗೆ ನಾವೇ ಕೇಳಿಕೊಳ್ಳಬೇಕು, ನಮ್ಮಿಂದಾಗುವ ಮಾನವೀಯ ಕೆಲಸಗಳನ್ನು ಮಾಡಬೇಕು.

ಅಂದರೆ ಎಲ್ಲರೂ ಹೀಗೆ ಇದ್ದಾರೆ ಎಂದರ್ಥವಲ್ಲ. ಆದರೂ ಒಳ್ಳೆಯ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆಯೇ ಎಂಬ ಭಯಕ್ಕೆ ಈ ಪತ್ರ ಬರೆದೆ. ಇದೆಲ್ಲದರ ನಡುವೆ ಮೊನ್ನೆ ಒಬ್ಬ ಟ್ರಾಫಿಕ್ ಪೋಲಿಸ್ ಬಟ್ಟೆರಹಿತನಾಗಿ ಬಿದ್ದಿದ್ದ ಬುದ್ದಮಾಂದ್ಯನಿಗೆ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದರು ಇಂತಹವರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ.

ಸೋಮಶೇಖರ್ ಚಲ್ಯ, ಮಂಡ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...