Homeಕರ್ನಾಟಕಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

ಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

- Advertisement -
- Advertisement -

‘ಈ ದೇಶದಲ್ಲಿ ಆ್ಯಂಬುಲೆನ್ಸ್‌ಗೂ ಜಾಗವಿಲ್ಲ’ ಎಂಬ ಮಾತು ಎಂತಹ ಗಟ್ಟಿ ಮನಸ್ಸಿನವರನ್ನೂ ಒಮ್ಮೆ ಕಾಡಿಸದೆ ಬಿಡದು. ಇದು ಕವಲುದಾರಿ ಸಿನಿಮಾದ ಒಂದು ದೃಶ್ಯ. ಅನಂತನಾಗ್‌ಗೆ ಗುಂಡೇಟು ಬಿದ್ದು, ಅವರನ್ನು ಉಳಿಸಬೇಕೆಂದು ಟ್ರಾಫಿಕ್ ಪೊಲೀಸ್‌ ಆದ ಹೀರೋ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಾನೆ. ಆದರೆ ರಸ್ತೆಯುದ್ದಕ್ಕೂ ಟ್ರಾಫಿಕ್. ಸೈರನ್ ಹಾಕಿದ್ದರೂ ಜಾಗಬಿಡುವವರಿಲ್ಲ. ಅನಂತ್‌ನಾಗ್ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆಯುತ್ತಾರೆ.
ಈ ದೃಶ್ಯವನ್ನು ನೋಡಿದ ಮೇಲೆ ಎಲ್ಲೇ ಆ್ಯಬುಂಲೆನ್ಸ್ ಶಬ್ದ ಕೇಳಿದರೂ ತಕ್ಷಣವೇ ಗಮನ ರಸ್ತೆಯೆಡೆಗೆ ಕೇಂದ್ರೀಕರಿಸುವಂತಾಗಿದೆ. ಇಂದು ಬೆಳಗ್ಗೆ ನಾನು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಆ್ಯಂಬುಲೆನ್ಸ್ ಶಬ್ದ ಬಂತು. ತಕ್ಷವೇ ತಿರುಗಿ ನೋಡಿದೆ. ನಾಕುಳಿತಿದ್ದ ಬಸ್ಸಿನಿಂದ ಸ್ವಲ್ಪವೇ ದೂರದಲ್ಲಿತ್ತು. ಅದರ ಮುಂದೆ ಒಂದೆರಡು ಕಾರುಗಳು ಬೈಕುಗಳು ಬರುತ್ತಿದ್ದವು. ಅವರಾರೂ ಆ್ಯಂಬುಲೆನ್ಸ್‌ಗೆ ಸೈಡ್ ಕೊಡಲಿಲ್ಲ. ಬದಲಾಗಿ ಮತ್ತೊಂದೆರಡು ಬೈಕುಗಳು ಆ್ಯಬುಲೆನ್ಸ್‌ಗೆ ಸೈಡ್‌ ಹೊಡೆದು ಮುಂದೆಬರುತ್ತಿದ್ದವು. ದುರದೃಷ್ಟವೆಂದರೆ ನಾನು ಕುಳಿತಿದ್ದ ಬಸ್ಸು ಕೂಡ ಜಾಗಬಿಡಲಿಲ್ಲ, ಹಾಗೇ ಮುಂದೆ ಬಂತು. ಅಲ್ಲಿದ್ದ ಟ್ರಾಫಿಕ್ ಪೋಲಿಸ್ ಕೂಡ ಒಂದು ಹೆಜ್ಜೆ ಅಲುಗಾಡದೆ ನಿಂತಲ್ಲೇ ನಿಂತು, ಅಲ್ಲಿಯ ಸನ್ನಿವೇಶವನ್ನು ನೋಡುತ್ತಿದ್ದರು ಬಿಟ್ಟರೆ, ಆ್ಯಂಬುಲೆನ್ಸ್‌ಗೆ ಜಾಗ ಬಿಡಿಸುವ ಕೆಲಸ ಮಾಡಲೇ ಇಲ್ಲ.

ಇದು ಒಂದು ಉದಾಹರಣೆಯಷ್ಟೇ ಇಂತಹವು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಟ್ರಾಫಿಕ್ ಇಲ್ಲದ ರಸ್ತೆಗಳಲ್ಲೂ ಆ್ಯಬುಲೆನ್ಸ್‌ಗೆ ಸೈಡ್ ಕೊಡದೆ ಮಧ್ಯ ರಸ್ತೆಯಲ್ಲಿ ಹೋಗುವವರೂ ಇದ್ದಾರೆ. ಆ್ಯಬುಲೆನ್ಸ್ ಜೊತೆಗೆ ರೇಸ್‌ಗೆ ಬಿದ್ದವರಂತೆ ಅದರ ಜೊತೆಗೇ ರೇಸ್ ಹೋಗುವವರೂ ಇದ್ದಾರೆ. ಇವರೆಲ್ಲರ ನಡುವೆ ಟ್ರಾಫಿಕ್ ನಿಯಂತ್ರಿಸಿ ಆ್ಯಬುಲೆನ್ಸ್‌ಗೆ ಜಾಗಮಾಡಿಕೊಡುವ ಸಹನೆಯನ್ನೂ ನಮ್ಮ ಟ್ರಾಫಿಕ್ ಪೊಲೀಸರು ಕಳೆದುಕೊಂಡಿದ್ದಾರೆ. ಎಂತಹ ವಿಪರ್ಯಾಸವೆಂದರೆ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯದ್ವಾರದ ಮುಂದೆಯೇ ಬಿಎಂಟಿಸಿ ಬಸ್ಸುಗಳ ಮತ್ತು ಆಟೋ ನಿಲ್ದಾಣಗಳಿದ್ದು ಆ್ಯಬುಲೆನ್ಸ್ ಅಲ್ಲಿ ನಿಲ್ಲುವ ಬಸ್ಸುಗಳನ್ನು ದಾಟಿ ಆಸ್ಪತ್ರೆಯೊಳಗೆ ಹೋಗಬೇಕಾದರೆ ಅದೇ ಒಂದು ದೊಡ್ಡ ಸಾಹಸವಾಗಿರುತ್ತದೆ.

ಇಂತಹ ಎಷ್ಟೋ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇರುತ್ತವೆ. ವಾಹನ ಸವಾರರು ಆ್ಯಂಬುಲೆನ್ಸ್‌ಗೆ ಜಾಗ ಕೊಡದೆ ತಡವಾಗುವುದರಿಂದ ಬದುಕುಳಿಯಬಹುದಾದ ಎಷ್ಟೋ ಜೀವಗಳು ದಾರಿ ಮಧ್ಯದಲ್ಲೇ ಅಸುನೀಗುತ್ತವೆ. ಆದರೂ ನಮ್ಮ ಅಂತಃಕರಣ ಕಲಕುವುದೇ ಇಲ್ಲ, ನಾವೆಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಪ್ರತಿಯೊಬ್ಬನೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇವು ಕವಲುದಾರಿ ಸಿನಿಮಾದ ಆ ಮಾತನ್ನು ಮತ್ತೆ ಮತ್ತೆ ನನಪಿಸುತ್ತವೆ.

ಅಲ್ಲದೆ ರಸ್ತೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದವರನ್ನು ರಕ್ಷಿಸದೆ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಾ ನಿಲ್ಲುವ, ಬಟ್ಟೆ ನೋಡಿ ಕಳ್ಳನೆಂದು ಹೊಡೆದು ಕೊಲ್ಲುವ, ಒಂಬತ್ತು ತಿಂಗಳ ಕಂದಮ್ಮಳನ್ನು ಅತ್ಯಾಚಾರಕ್ಕೆ ಯತ್ನಸುವ ಕ್ರೂರ ಮನಸ್ಸುಗಳ ಮಧ್ಯೆ ಆ್ಯಂಬುಲೆನ್ಸ್‌ ಒಳಗೆ ಸಾವು-ಬದುಕಿನಲ್ಲಿ ಹೋರಾಟ ಮಾಡುವವರ ನೋವು ಹೇಗೆ ತಾನೇ ಅರ್ಥವಾದೀತು ಎಂದು ನಮಗೆ ನಾವೇ ಕೇಳಿಕೊಳ್ಳಬೇಕು, ನಮ್ಮಿಂದಾಗುವ ಮಾನವೀಯ ಕೆಲಸಗಳನ್ನು ಮಾಡಬೇಕು.

ಅಂದರೆ ಎಲ್ಲರೂ ಹೀಗೆ ಇದ್ದಾರೆ ಎಂದರ್ಥವಲ್ಲ. ಆದರೂ ಒಳ್ಳೆಯ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆಯೇ ಎಂಬ ಭಯಕ್ಕೆ ಈ ಪತ್ರ ಬರೆದೆ. ಇದೆಲ್ಲದರ ನಡುವೆ ಮೊನ್ನೆ ಒಬ್ಬ ಟ್ರಾಫಿಕ್ ಪೋಲಿಸ್ ಬಟ್ಟೆರಹಿತನಾಗಿ ಬಿದ್ದಿದ್ದ ಬುದ್ದಮಾಂದ್ಯನಿಗೆ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದರು ಇಂತಹವರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ.

ಸೋಮಶೇಖರ್ ಚಲ್ಯ, ಮಂಡ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...