Homeಕರ್ನಾಟಕಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

ಈ ದೇಶದಲ್ಲಿ ಆ್ಯಬುಲೆನ್ಸ್‌ಗೂ ಜಾಗವಿಲ್ಲವೇ? : ಒಂದು ಪತ್ರ

- Advertisement -
- Advertisement -

‘ಈ ದೇಶದಲ್ಲಿ ಆ್ಯಂಬುಲೆನ್ಸ್‌ಗೂ ಜಾಗವಿಲ್ಲ’ ಎಂಬ ಮಾತು ಎಂತಹ ಗಟ್ಟಿ ಮನಸ್ಸಿನವರನ್ನೂ ಒಮ್ಮೆ ಕಾಡಿಸದೆ ಬಿಡದು. ಇದು ಕವಲುದಾರಿ ಸಿನಿಮಾದ ಒಂದು ದೃಶ್ಯ. ಅನಂತನಾಗ್‌ಗೆ ಗುಂಡೇಟು ಬಿದ್ದು, ಅವರನ್ನು ಉಳಿಸಬೇಕೆಂದು ಟ್ರಾಫಿಕ್ ಪೊಲೀಸ್‌ ಆದ ಹೀರೋ ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಾನೆ. ಆದರೆ ರಸ್ತೆಯುದ್ದಕ್ಕೂ ಟ್ರಾಫಿಕ್. ಸೈರನ್ ಹಾಕಿದ್ದರೂ ಜಾಗಬಿಡುವವರಿಲ್ಲ. ಅನಂತ್‌ನಾಗ್ ರಸ್ತೆ ಮಧ್ಯದಲ್ಲೇ ಕೊನೆಯುಸಿರೆಳೆಯುತ್ತಾರೆ.
ಈ ದೃಶ್ಯವನ್ನು ನೋಡಿದ ಮೇಲೆ ಎಲ್ಲೇ ಆ್ಯಬುಂಲೆನ್ಸ್ ಶಬ್ದ ಕೇಳಿದರೂ ತಕ್ಷಣವೇ ಗಮನ ರಸ್ತೆಯೆಡೆಗೆ ಕೇಂದ್ರೀಕರಿಸುವಂತಾಗಿದೆ. ಇಂದು ಬೆಳಗ್ಗೆ ನಾನು ಕೆ.ಆರ್.ಮಾರ್ಕೆಟ್ ಬಳಿ ಬಸ್ಸಿನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಆ್ಯಂಬುಲೆನ್ಸ್ ಶಬ್ದ ಬಂತು. ತಕ್ಷವೇ ತಿರುಗಿ ನೋಡಿದೆ. ನಾಕುಳಿತಿದ್ದ ಬಸ್ಸಿನಿಂದ ಸ್ವಲ್ಪವೇ ದೂರದಲ್ಲಿತ್ತು. ಅದರ ಮುಂದೆ ಒಂದೆರಡು ಕಾರುಗಳು ಬೈಕುಗಳು ಬರುತ್ತಿದ್ದವು. ಅವರಾರೂ ಆ್ಯಂಬುಲೆನ್ಸ್‌ಗೆ ಸೈಡ್ ಕೊಡಲಿಲ್ಲ. ಬದಲಾಗಿ ಮತ್ತೊಂದೆರಡು ಬೈಕುಗಳು ಆ್ಯಬುಲೆನ್ಸ್‌ಗೆ ಸೈಡ್‌ ಹೊಡೆದು ಮುಂದೆಬರುತ್ತಿದ್ದವು. ದುರದೃಷ್ಟವೆಂದರೆ ನಾನು ಕುಳಿತಿದ್ದ ಬಸ್ಸು ಕೂಡ ಜಾಗಬಿಡಲಿಲ್ಲ, ಹಾಗೇ ಮುಂದೆ ಬಂತು. ಅಲ್ಲಿದ್ದ ಟ್ರಾಫಿಕ್ ಪೋಲಿಸ್ ಕೂಡ ಒಂದು ಹೆಜ್ಜೆ ಅಲುಗಾಡದೆ ನಿಂತಲ್ಲೇ ನಿಂತು, ಅಲ್ಲಿಯ ಸನ್ನಿವೇಶವನ್ನು ನೋಡುತ್ತಿದ್ದರು ಬಿಟ್ಟರೆ, ಆ್ಯಂಬುಲೆನ್ಸ್‌ಗೆ ಜಾಗ ಬಿಡಿಸುವ ಕೆಲಸ ಮಾಡಲೇ ಇಲ್ಲ.

ಇದು ಒಂದು ಉದಾಹರಣೆಯಷ್ಟೇ ಇಂತಹವು ಪ್ರತಿದಿನ ನಡೆಯುತ್ತಲೇ ಇರುತ್ತವೆ. ಟ್ರಾಫಿಕ್ ಇಲ್ಲದ ರಸ್ತೆಗಳಲ್ಲೂ ಆ್ಯಬುಲೆನ್ಸ್‌ಗೆ ಸೈಡ್ ಕೊಡದೆ ಮಧ್ಯ ರಸ್ತೆಯಲ್ಲಿ ಹೋಗುವವರೂ ಇದ್ದಾರೆ. ಆ್ಯಬುಲೆನ್ಸ್ ಜೊತೆಗೆ ರೇಸ್‌ಗೆ ಬಿದ್ದವರಂತೆ ಅದರ ಜೊತೆಗೇ ರೇಸ್ ಹೋಗುವವರೂ ಇದ್ದಾರೆ. ಇವರೆಲ್ಲರ ನಡುವೆ ಟ್ರಾಫಿಕ್ ನಿಯಂತ್ರಿಸಿ ಆ್ಯಬುಲೆನ್ಸ್‌ಗೆ ಜಾಗಮಾಡಿಕೊಡುವ ಸಹನೆಯನ್ನೂ ನಮ್ಮ ಟ್ರಾಫಿಕ್ ಪೊಲೀಸರು ಕಳೆದುಕೊಂಡಿದ್ದಾರೆ. ಎಂತಹ ವಿಪರ್ಯಾಸವೆಂದರೆ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯದ್ವಾರದ ಮುಂದೆಯೇ ಬಿಎಂಟಿಸಿ ಬಸ್ಸುಗಳ ಮತ್ತು ಆಟೋ ನಿಲ್ದಾಣಗಳಿದ್ದು ಆ್ಯಬುಲೆನ್ಸ್ ಅಲ್ಲಿ ನಿಲ್ಲುವ ಬಸ್ಸುಗಳನ್ನು ದಾಟಿ ಆಸ್ಪತ್ರೆಯೊಳಗೆ ಹೋಗಬೇಕಾದರೆ ಅದೇ ಒಂದು ದೊಡ್ಡ ಸಾಹಸವಾಗಿರುತ್ತದೆ.

ಇಂತಹ ಎಷ್ಟೋ ಘಟನೆಗಳು ನಮ್ಮ ಸುತ್ತ ನಡೆಯುತ್ತಲೇ ಇರುತ್ತವೆ. ವಾಹನ ಸವಾರರು ಆ್ಯಂಬುಲೆನ್ಸ್‌ಗೆ ಜಾಗ ಕೊಡದೆ ತಡವಾಗುವುದರಿಂದ ಬದುಕುಳಿಯಬಹುದಾದ ಎಷ್ಟೋ ಜೀವಗಳು ದಾರಿ ಮಧ್ಯದಲ್ಲೇ ಅಸುನೀಗುತ್ತವೆ. ಆದರೂ ನಮ್ಮ ಅಂತಃಕರಣ ಕಲಕುವುದೇ ಇಲ್ಲ, ನಾವೆಷ್ಟು ಅಸೂಕ್ಷ್ಮರಾಗಿದ್ದೇವೆ ಎಂದು ಪ್ರತಿಯೊಬ್ಬನೂ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಇವು ಕವಲುದಾರಿ ಸಿನಿಮಾದ ಆ ಮಾತನ್ನು ಮತ್ತೆ ಮತ್ತೆ ನನಪಿಸುತ್ತವೆ.

ಅಲ್ಲದೆ ರಸ್ತೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದವರನ್ನು ರಕ್ಷಿಸದೆ ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಾ ನಿಲ್ಲುವ, ಬಟ್ಟೆ ನೋಡಿ ಕಳ್ಳನೆಂದು ಹೊಡೆದು ಕೊಲ್ಲುವ, ಒಂಬತ್ತು ತಿಂಗಳ ಕಂದಮ್ಮಳನ್ನು ಅತ್ಯಾಚಾರಕ್ಕೆ ಯತ್ನಸುವ ಕ್ರೂರ ಮನಸ್ಸುಗಳ ಮಧ್ಯೆ ಆ್ಯಂಬುಲೆನ್ಸ್‌ ಒಳಗೆ ಸಾವು-ಬದುಕಿನಲ್ಲಿ ಹೋರಾಟ ಮಾಡುವವರ ನೋವು ಹೇಗೆ ತಾನೇ ಅರ್ಥವಾದೀತು ಎಂದು ನಮಗೆ ನಾವೇ ಕೇಳಿಕೊಳ್ಳಬೇಕು, ನಮ್ಮಿಂದಾಗುವ ಮಾನವೀಯ ಕೆಲಸಗಳನ್ನು ಮಾಡಬೇಕು.

ಅಂದರೆ ಎಲ್ಲರೂ ಹೀಗೆ ಇದ್ದಾರೆ ಎಂದರ್ಥವಲ್ಲ. ಆದರೂ ಒಳ್ಳೆಯ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆಯೇ ಎಂಬ ಭಯಕ್ಕೆ ಈ ಪತ್ರ ಬರೆದೆ. ಇದೆಲ್ಲದರ ನಡುವೆ ಮೊನ್ನೆ ಒಬ್ಬ ಟ್ರಾಫಿಕ್ ಪೋಲಿಸ್ ಬಟ್ಟೆರಹಿತನಾಗಿ ಬಿದ್ದಿದ್ದ ಬುದ್ದಮಾಂದ್ಯನಿಗೆ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದರು ಇಂತಹವರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ.

ಸೋಮಶೇಖರ್ ಚಲ್ಯ, ಮಂಡ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...