Homeಕರ್ನಾಟಕಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಪೆನ್‌ಡ್ರೈವ್‌ ವಿಡಿಯೋ ವೈರಲ್‌ ಬಳಿಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ರೇವಣ್ಣ ಅವರು ಇಂದು ಅಧಿಕಾರಿಗಳ ಮುಂದೆ ಹಾಜರಾಗುತ್ತೆನೆ ಎಂದು ಹೇಳಿದ್ದಾರೆ. ಲುಕ್ ಔಟ್ ನೋಟಿಸ್ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ಅವರು ವಕೀಲರ ಮೂಲಕ 6 ದಿನ ಕಾಲಾವಕಾಶ ಕೇಳಿದ್ದಾರೆ. ನಿನ್ನೆ ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ ಎಂದು ಹೇಳಿದ್ದಾರೆ.

ಇಂತಹ ಸೂಕ್ಷ್ಮ ವಿಚಾರದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವುದು ಕಷ್ಟ, ಮೊದಲು ಸಂತ್ರಸ್ತ ಮಹಿಳೆಯರು ಬಂದು ದೂರು ಕೊಡಬೇಕು, ಪ್ರಜ್ವಲ್ ರೇವಣ್ಣ ಡಿಪ್ಲೊಮೆಟಿಕ್ ಪಾಸ್ ಪೋರ್ಟ್‌ ಮೂಲಕ ವಿದೇಶಕ್ಕೆ ಹೋಗಿದ್ದು ಸತ್ಯ, ಕೇಂದ್ರ ಸರಕಾರ ಡಿಪ್ಲೊಮೆಟಿಕ್ ಪಾಸ್ ಪೋರ್ಟ್‌ ಕೊಟ್ಟಿದೆ. ಹೀಗಾಗಿ ರಾತ್ರೋ ರಾತ್ರಿ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ‌ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಈ ಕುರಿತ ಪ್ರಕರಣದ ತನಿಖೆಯ ಹೊಣೆಯನ್ನು ಎಸ್‌ಐಟಿಗೆ ವಹಿಸಲಾಗಿದೆ.

ಎಸ್‌ಐಟಿ ಅಧಿಕಾರಿಗಳು ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣಗೆ ತನಿಖೆಗೆ ಹಾಜರಾಗುವಂತೆ ನೊಟೀಸ್‌ ಜಾರಿ ಮಾಡಿದ್ದಾರೆ. 24 ಗಂಟೆಗಳ ಒಳಗೆ ಎಸ್‌ಐಟಿ ಮುಂದೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ‌ ಇಲ್ಲದ ಕಾರಣ, ಕಾಲಾವಕಾಶ ಕೋರಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಪ್ರಜ್ವಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿನ್ನೆ ಪೋಸ್ಟ್ ಮಾಡಿದ್ದರು.

ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಈಗ ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್‌ ಪತ್ತೆಯಾಗದಿದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎನ್ನಲಾದ ಸಾವಿರಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದು ಪಕ್ಷ ಮತ್ತು ನಾಯಕತ್ವಕ್ಕೆ ಭಾರೀ ಮುಜುಗರ ಉಂಟು ಮಾಡಿತ್ತು. ಇದರ ಬೆನ್ನಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅಪ್ಪ-ಮಗನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.

ಇದನ್ನು ಓದಿ: ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...