Homeಕರ್ನಾಟಕಉಡುಪಿ: ಚೈತ್ರಾ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು

ಉಡುಪಿ: ಚೈತ್ರಾ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು

- Advertisement -
- Advertisement -

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ 5ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಧ್ಯ ಸಿಸಿಬಿ ಬಂಧನದಲ್ಲಿರುವ ಚೈತ್ರಾ ಕುಂದಾಪುರ ವಿರುದ್ಧ ಕೋಟಾ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.

ಬಿಜೆಪಿ ಕಾರ್ಯಕರ್ತ ಸುದೀನ ಎಂಬವರು ಉಡುಪಿಯ ಕೋಟಾ ಪೊಲೀಸ್‌ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ 5 ಲಕ್ಷ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ವೃತ್ತಿಯಲ್ಲಿ ಮೀನುಗಾರನಾಗಿರುವ ಬ್ರಹ್ಮಾವರ ನಿವಾಸಿ ಸುದೀನ ಅವರಿಗೆ ಬಟ್ಟೆ ಅಂಗಡಿ ಹಾಕಿಸಿಕೊಡುತ್ತೇನೆ ಎಂದು ಚೈತ್ರಾ ಕುಂದಾಪುರ ಐದು ಲಕ್ಷ ರೂಪಾಯಿ ಪಡೆದುಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸುದೀನ ಅವರಿಗೆ 2015ರಲ್ಲಿ ಚೈತ್ರಾ ಕುಂದಾಪುರ ಅವರ ಪರಿಚಯವಾಗಿತ್ತು. ಈ ವೇಳೆ ನನಗೆ ಬಿಜೆಪಿ ಪಕ್ಷದ ಸಚಿವರು, ಮಂತ್ರಿಗಳು, ಶಾಸಕರ ನಿಕಟ ಸಂಪರ್ಕವಿದೆ ಎಂದು ಚೈತ್ರಾ ಹೇಳಿದ್ದಾಳೆ. 2018-2023ರ ಅವಧಿಯಲ್ಲಿ ಐದು ಲಕ್ಷ ಹಂತ ಹಂತವಾಗಿ ಸುದೀನ್ ಅವರಿಂದ ಚೈತ್ರಾ ಪಡೆದಿದ್ದಾಳೆ.  ಈ ಪೈಕಿ ಮೂರು ಲಕ್ಷವನ್ನು ಚೈತ್ರಾ ಖಾತೆಗೆ ಸುದೀನ ವರ್ಗಾಯಿಸಿದ್ದರು. ಬಳಿಕ ಎರಡು ಲಕ್ಷ ಹಣವನ್ನು ನಗದು ರೂಪದಲ್ಲಿ ಸುದೀನ ನೀಡಿದ್ದಾರೆ.

ಹಣ ಕೊಟ್ಟ ಬಳಿಕ ಬಟ್ಟೆ ಅಂಗಡಿ  ಬಗ್ಗೆ ಕೇಳಿದಾಗ ಚೈತ್ರಾ ಇನ್ನಷ್ಟು ಹಣದ ಬೇಡಿಕೆ ಇಟ್ಟಿದ್ದಾರೆ. ಅಂಗಡಿ ನಿರ್ಮಣ ವಿಳಂಬವಾಗಿರುವುದಕ್ಕೆ ಸ್ಥಳೀಯ ಮುಖಂಡರಲ್ಲಿ ಮತುಕತೆ ನಡೆಸಿದ್ದೇನೆ, ಅಂತಿಮ ಹಂತದಲ್ಲಿದೆ ಎಂದು ಚೈತ್ರಾ ನಂಬಿಸಿದ್ದಾರೆ. ಇದಲ್ಲದೆ ಚುನಾವಣಾ ಪ್ರಚಾರ, ಭಾಷಣ, ಕಾರ್ಯ ಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ನೆಪ ಹೇಳಿ ಸುದೀನನಿಂದ ಚೈತ್ರಾ ತಪ್ಪಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿದ್ದಾರೆ.

ಚೈತ್ರಾ ನಡೆಯಿಂದ ಅನುಮಾನಗೊಂಡ ಸುದೀನ, ಕೂಡಲೇ ಬಟ್ಟೆ ಅಂಗಡಿ ಮಾಡಿಸಿಕೊಡಿ ಎಂದು ಆಗ್ರಹಿಸಿದ್ದಾರೆ. ಈ ವೇಳೆ ಚೈತ್ರಾ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುತ್ತೇನೆ, ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಈ ಕುರಿತು ಸುದೀನ ನೀಡಿದ ದೂರಿನಂತೆ ಕೋಟಾ ಪೊಲೀಸ್‌ ಠಾಣೆಯಲ್ಲಿ ಚೈತ್ರಾ ವಿರುದ್ದ 506, 417, 420 ಐಪಿಸಿ ಸೆಕ್ಷನ್ ಅಡಿ ಎಫ್ಐಆರ್ ದಾಖಲಾಗಿದೆ.

ಇದನ್ನು ಓದಿ: ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...