Homeಮುಖಪುಟಲೋಕಸಭೆಯಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ

ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ

- Advertisement -
- Advertisement -

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು (ಡಿ.17) ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುವಾಗುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಗೆ ತರಲು ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಮಂಡಿಸಿದರು.

ಬಿಜೆಪಿಯ ಪ್ರಮುಖ ಪ್ರತಿಜ್ಞೆಗಳಲ್ಲಿ ಒಂದಾದ ಈ ಮಸೂದೆಗಳನ್ನು ಅದರ ಮಿತ್ರ ಪಕ್ಷಗಳಾದ ಟಿಡಿಪಿ, ಜನಸೇನಾ ಪಕ್ಷ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬೆಂಬಲಿಸಿದರೆ, ನಿರೀಕ್ಷೆಯಂತೆ ಪ್ರತಿಪಕ್ಷಗಳು ವಿರೋಧಿಸಿದವು.

ಪ್ರತಿಪಕ್ಷಗಳು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದವು “ಮಸೂದೆಯು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನದ ಮೂಲ ರಚನೆಯ ಉಲ್ಲಂಘನೆಯಾಗಿದೆ” ಎಂದು ಆರೋಪಿಸಿದವು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯು ಸಂವಿಧಾನದ ಮೂಲ ರಚನೆಯ ಸಿದ್ಧಾಂತದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಆಕ್ಷೇಪ ವ್ಯಕ್ತಡಿಸಿದರು. ಮಸೂದೆಯ ಮಂಡನೆ ಮತ್ತು ಪರಿಗಣನೆಯು ಸದನದ ಶಾಸಕಾಂಗದ ಸಾಮರ್ಥ್ಯವನ್ನು ಮೀರಿದೆ ಎಂದು ಪ್ರತಿಪಾದಿಸಿದರು. ಮಸೂದೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್ ಕೂಡ ಮಸೂದೆಗಳನ್ನು ವಿರೋಧಿಸಿದರು. ಇದು ದೇಶದಲ್ಲಿ ‘ಸರ್ವಾಧಿಕಾರವನ್ನು ಜಾರಿಗೆ ತರುವ’ ಬಿಜೆಪಿಯ ಪ್ರಯತ್ನ ಎಂದು ಬಣ್ಣಿಸಿದರು.

ತಮ್ಮ ಪಕ್ಷದ ಆಕ್ಷೇಪವನ್ನು ವ್ಯಕ್ತಪಡಿಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಟುವಾದ ವಾಗ್ದಾಳಿ ನಡೆಸಿದರು. ಈ ಮಸೂದೆಗಳು ಚುನಾವಣಾ ಸುಧಾರಣೆಯಲ್ಲ. ಇದು ಒಬ್ಬ ವ್ಯಕ್ತಿಯ ಆಸೆ ಮತ್ತು ಕನಸಿನ ಈಡೇರಿಕೆ’ ಎಂದು ಹೇಳಿದರು.

ಶಿವಸೇನಾ (ಯುಬಿಟಿ) ನಾಯಕ ಅನಿಲ್ ದೇಸಾಯಿ ಮತ್ತು ಮುಸ್ಲಿಂ ಲೀಗ್‌ನ ಇ.ಟಿ ಮೊಹಮ್ಮದ್ ಬಶೀರ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳ ನಾಯಕರು ಕೂಡ ಮಸೂದೆಗಳ ಮಂಡನೆಯನ್ನು ವಿರೋಧಿಸಿದರು. ಡಿಎಂಕೆ ಸಂಸದ ಟಿಆರ್ ಬಾಲು ಮಸೂದೆಗೆ ವಿರೋಧ ವ್ಯಕ್ತಪಡಿಸಿ, ಅದನ್ನು ಜಂಟಿ ಸಂಸದೀಯ ಸಮಿತಿಗೆ ವರ್ಗಾಯಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಗಮನಾರ್ಹ ಸಂಗತಿಯೆಂದರೆ, ಕೇಂದ್ರ ಸರ್ಕಾರ ಮಂಡಿಸಿರುವ ಎರಡು ಮಸೂದೆಗಳಿಗೆ ಅನುಮೋದನೆ ಪಡೆಯುವುದು ಕೊಂಚ ಸವಾಲಾಗಿದೆ.

ಕೇಂದ್ರಾಡಳಿತ ಪ್ರದೇಶಗಳ ಮಸೂದೆಗೆ ಉಭಯ ಸದನಗಳಲ್ಲಿ ಸರಳ ಬಹುಮತದ ಅಗತ್ಯವಿದ್ದರೂ, ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರವಾಗಲು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ.

ಬಿಜೆಪಿಯ ಮಿತ್ರಪಕ್ಷಗಳಾದ ಟಿಡಿಪಿ, ಜನತಾದಳ (ಯುನೈಟೆಡ್), ಮತ್ತು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಸೇರಿದಂತೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದಿರುವ ಎಲ್ಲರೂ ಮಸೂದೆಯನ್ನು ಬೆಂಬಲಿಸಿದರೂ, ಎನ್‌ಡಿಎ ಸರ್ಕಾರಕ್ಕೆ ವಿರೋಧ ಪಕ್ಷಗಳ ಸದಸ್ಯರ ಬೆಂಬಲವೂ ಅಗತ್ಯವಿದೆ. ಇದರ ಜೊತೆಗೆ ಬಿಆರ್‌ಎಸ್‌, ಬಿಜೆಡಿ, ವೈಎಸ್‌ಆರ್‌ ಕಾಂಗ್ರೆಸ್ ಸೇರಿದಂತೆ ಇತರ ತಟಸ್ಥ ಪಕ್ಷಗಳ ಬೆಂಬಲ ಬೇಕಾಗಿದೆ.

ಇದನ್ನೂ ಓದಿ : ಮಾ. 2026ರೊಳಗೆ ನಕ್ಸಲೀಯರ ಸಂಪೂರ್ಣ  ತೊಡೆದು ಹಾಕಲು ಜಂಟಿ ಸಿದ್ಧತೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...