Homeಮುಖಪುಟಲೋಕಸಭೆಯಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ

ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ

- Advertisement -
- Advertisement -

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು (ಡಿ.17) ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುವಾಗುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಗೆ ತರಲು ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಮಂಡಿಸಿದರು.

ಬಿಜೆಪಿಯ ಪ್ರಮುಖ ಪ್ರತಿಜ್ಞೆಗಳಲ್ಲಿ ಒಂದಾದ ಈ ಮಸೂದೆಗಳನ್ನು ಅದರ ಮಿತ್ರ ಪಕ್ಷಗಳಾದ ಟಿಡಿಪಿ, ಜನಸೇನಾ ಪಕ್ಷ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬೆಂಬಲಿಸಿದರೆ, ನಿರೀಕ್ಷೆಯಂತೆ ಪ್ರತಿಪಕ್ಷಗಳು ವಿರೋಧಿಸಿದವು.

ಪ್ರತಿಪಕ್ಷಗಳು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದವು “ಮಸೂದೆಯು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನದ ಮೂಲ ರಚನೆಯ ಉಲ್ಲಂಘನೆಯಾಗಿದೆ” ಎಂದು ಆರೋಪಿಸಿದವು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯು ಸಂವಿಧಾನದ ಮೂಲ ರಚನೆಯ ಸಿದ್ಧಾಂತದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಆಕ್ಷೇಪ ವ್ಯಕ್ತಡಿಸಿದರು. ಮಸೂದೆಯ ಮಂಡನೆ ಮತ್ತು ಪರಿಗಣನೆಯು ಸದನದ ಶಾಸಕಾಂಗದ ಸಾಮರ್ಥ್ಯವನ್ನು ಮೀರಿದೆ ಎಂದು ಪ್ರತಿಪಾದಿಸಿದರು. ಮಸೂದೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್ ಕೂಡ ಮಸೂದೆಗಳನ್ನು ವಿರೋಧಿಸಿದರು. ಇದು ದೇಶದಲ್ಲಿ ‘ಸರ್ವಾಧಿಕಾರವನ್ನು ಜಾರಿಗೆ ತರುವ’ ಬಿಜೆಪಿಯ ಪ್ರಯತ್ನ ಎಂದು ಬಣ್ಣಿಸಿದರು.

ತಮ್ಮ ಪಕ್ಷದ ಆಕ್ಷೇಪವನ್ನು ವ್ಯಕ್ತಪಡಿಸಿದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಟುವಾದ ವಾಗ್ದಾಳಿ ನಡೆಸಿದರು. ಈ ಮಸೂದೆಗಳು ಚುನಾವಣಾ ಸುಧಾರಣೆಯಲ್ಲ. ಇದು ಒಬ್ಬ ವ್ಯಕ್ತಿಯ ಆಸೆ ಮತ್ತು ಕನಸಿನ ಈಡೇರಿಕೆ’ ಎಂದು ಹೇಳಿದರು.

ಶಿವಸೇನಾ (ಯುಬಿಟಿ) ನಾಯಕ ಅನಿಲ್ ದೇಸಾಯಿ ಮತ್ತು ಮುಸ್ಲಿಂ ಲೀಗ್‌ನ ಇ.ಟಿ ಮೊಹಮ್ಮದ್ ಬಶೀರ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳ ನಾಯಕರು ಕೂಡ ಮಸೂದೆಗಳ ಮಂಡನೆಯನ್ನು ವಿರೋಧಿಸಿದರು. ಡಿಎಂಕೆ ಸಂಸದ ಟಿಆರ್ ಬಾಲು ಮಸೂದೆಗೆ ವಿರೋಧ ವ್ಯಕ್ತಪಡಿಸಿ, ಅದನ್ನು ಜಂಟಿ ಸಂಸದೀಯ ಸಮಿತಿಗೆ ವರ್ಗಾಯಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಗಮನಾರ್ಹ ಸಂಗತಿಯೆಂದರೆ, ಕೇಂದ್ರ ಸರ್ಕಾರ ಮಂಡಿಸಿರುವ ಎರಡು ಮಸೂದೆಗಳಿಗೆ ಅನುಮೋದನೆ ಪಡೆಯುವುದು ಕೊಂಚ ಸವಾಲಾಗಿದೆ.

ಕೇಂದ್ರಾಡಳಿತ ಪ್ರದೇಶಗಳ ಮಸೂದೆಗೆ ಉಭಯ ಸದನಗಳಲ್ಲಿ ಸರಳ ಬಹುಮತದ ಅಗತ್ಯವಿದ್ದರೂ, ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರವಾಗಲು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ.

ಬಿಜೆಪಿಯ ಮಿತ್ರಪಕ್ಷಗಳಾದ ಟಿಡಿಪಿ, ಜನತಾದಳ (ಯುನೈಟೆಡ್), ಮತ್ತು ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಸೇರಿದಂತೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದಿರುವ ಎಲ್ಲರೂ ಮಸೂದೆಯನ್ನು ಬೆಂಬಲಿಸಿದರೂ, ಎನ್‌ಡಿಎ ಸರ್ಕಾರಕ್ಕೆ ವಿರೋಧ ಪಕ್ಷಗಳ ಸದಸ್ಯರ ಬೆಂಬಲವೂ ಅಗತ್ಯವಿದೆ. ಇದರ ಜೊತೆಗೆ ಬಿಆರ್‌ಎಸ್‌, ಬಿಜೆಡಿ, ವೈಎಸ್‌ಆರ್‌ ಕಾಂಗ್ರೆಸ್ ಸೇರಿದಂತೆ ಇತರ ತಟಸ್ಥ ಪಕ್ಷಗಳ ಬೆಂಬಲ ಬೇಕಾಗಿದೆ.

ಇದನ್ನೂ ಓದಿ : ಮಾ. 2026ರೊಳಗೆ ನಕ್ಸಲೀಯರ ಸಂಪೂರ್ಣ  ತೊಡೆದು ಹಾಕಲು ಜಂಟಿ ಸಿದ್ಧತೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೆ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...