Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇದು ಸಂವಿಧಾನದ ಮೂಲ ರಚನೆಯನ್ನು ಬುಡಮೇಲು ಮಾಡುವ ವಿನ್ಯಾಸವಾಗಿದೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ಪ್ರಜಾಪ್ರಭುತ್ವದಲ್ಲಿ ನಿರಂಕುಶ ಪ್ರಭುತ್ವವನ್ನು ಅನುಮತಿಸುವ ವ್ಯವಸ್ಥೆಯನ್ನು ರಚಿಸಿದ್ದಾರೆ. ಆದರೆ, ನಾನು ನಿರಂಕುಶಾಧಿಕಾರದ ವಿರುದ್ಧವಿದ್ದೇನೆ. ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತೀವ್ರವಾಗಿ ಟೀಸಿದ ಮಮತಾ ಬ್ಯಾನರ್ಜಿ, ‘ಅವರು ದೇಶದ ಒಕ್ಕೂಟ ರಚನೆಯನ್ನು ಬುಡಮೇಲು ಮಾಡಿದ್ದಾರೆ. ನೀವು ಕೆಲವು ರೀತಿಯ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುವಂತೆ ತೋರುತ್ತಿದೆ. ಕೇಂದ್ರ ಸರ್ಕಾರವು ಈಗಾಗಲೇ ತೆಗೆದುಕೊಂಡಿರುವ ‘ನಿರ್ಧಾರ’ವು ನಿಜವಾದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ಮನೋಭಾವಕ್ಕೆ ವಿರುದ್ಧವಾದ ರಚನೆಯನ್ನು ಹೇರುತ್ತದೆ’ ಎಂದು ಆರೋಪಿಸಿದ್ದಾರೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಕಾರ್ಯದರ್ಶಿ ಡಾ. ನಿತೇನ್ ಚಂದ್ರ ಅವರಿಗೆ ಬರೆದ ವಿವರವಾದ ಪತ್ರದಲ್ಲಿ ‘ಕೇಂದ್ರ ಸರ್ಕಾರದ ಒಂದು ರಾಷ್ಟ್ರ, ಒಂದು ಚುನಾವಣೆ ತತ್ವದಲ್ಲಿರುವ ಮೂಲಭೂತ ಪರಿಕಲ್ಪನಾ ತೊಂದರೆಗಳ’ ಬಗ್ಗೆ ಪ್ರಶ್ನಿಸಿದ್ದಾರೆ.

‘ಒಂದು ರಾಷ್ಟ್ರ’ ಎಂಬ ಪದದ ಸಾಂವಿಧಾನಿಕ ಮತ್ತು ರಚನಾತ್ಮಕ ಪರಿಣಾಮಗಳ ಬಗ್ಗೆ ಹಾಗೂ ಅಸ್ತಿತ್ವದಲ್ಲಿರುವ ಸಂಸತ್ ಮತ್ತು ವಿಧಾನಸಭೆ ಚುನಾವಣೆಗಳ ಸಮಯದಲ್ಲಿ ಕುರಿತಾದ ಗೊಂದಲಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.

‘1952 ರಲ್ಲಿ, ಮೊದಲ ಸಾರ್ವತ್ರಿಕ ಚುನಾವಣೆಯನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಏಕಕಾಲದಲ್ಲಿ ನಡೆಸಲಾಯಿತು. ಕೆಲವು ವರ್ಷಗಳಿಂದ ಅಂತಹ ಏಕಕಾಲಿಕತೆ ಇತ್ತು. ಆದರೆ ನಂತರ ಈ ವ್ಯವಸ್ಥೆ ಛಿದ್ರಗೊಂಡಿದೆ. ವಿವಿಧ ರಾಜ್ಯಗಳು ಈಗ ವಿಭಿನ್ನ ಚುನಾವಣಾ ಕ್ಯಾಲೆಂಡರ್‌ಗಳನ್ನು ಹೊಂದಿವೆ. ಅವು ರಾಜಕೀಯ ಬೆಳವಣಿಗೆಗಳಿಂದಾಗಿ ಬದಲಾವಣೆಗಳಿಗೆ ಒಳಗಾಗುತ್ತವೆ. ಚುನಾವಣೆಗಳನ್ನು ನಿರೀಕ್ಷಿಸದ ರಾಜ್ಯಗಳು ಸಹಬಾಳ್ವೆಯ ಪರಿಚಯಕ್ಕಾಗಿ (ಅವುಗಳನ್ನು) ನಡೆಸುವಂತೆ ಒತ್ತಾಯಿಸಬಾರದು’ ಎಂದು ಅವರು ಒತ್ತಿ ಹೇಳಿದರು.

‘ಲೋಕಸಭೆ ಅಥವಾ ವಿಧಾನಸಭೆಯು ಅಕಾಲಿಕ ವಿಸರ್ಜನೆಗೆ ಒಳಪಟ್ಟರೆ ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯಲ್ಲಿ ಮೂಡುವ ಸಂಭಾವ್ಯ ಬಿರುಕುಗಳನ್ನು ಸಹ ಸಹ ಬ್ಯಾನರ್ಜಿ ಗುರುತಿಸಿದ್ದಾರೆ. ‘ಕೇಂದ್ರ ಸರ್ಕಾರದ ಅಸ್ಥಿರತೆಯು ರಾಜ್ಯ ಶಾಸಕಾಂಗಗಳನ್ನು ಅಸ್ಥಿರಗೊಳಿಸಬಾರದು’ ಅವರು ಎಚ್ಚರಿಸಿದರು.

‘ಸಹಬಾಳ್ವೆಯ ಪರಿಚಯದ ಈ ಮೂಲಭೂತ ಸಮಸ್ಯೆಯನ್ನು ನಿಮ್ಮ ಗೌರವಾನ್ವಿತ ಸಮಿತಿಯು ಹೇಗೆ ಪರಿಹರಿಸಲಿದೆ ಎಂಬುದು ಸ್ಪಷ್ಟವಾಗಿಲ್ಲ’ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಸಾಮಾನ್ಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಸೇರಿದಂತೆ ಹಲವಾರು ಸಣ್ಣ ಆಕ್ಷೇಪಣೆಗಳನ್ನು ಸಹ ಅವರು ಗುರುತಿಸಿದ್ದಾರೆ. ಜತೆಗೆ, ಸಮಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳನ್ನು ಸೇರಿಸುವಲ್ಲಿ ಅವರು ವಿಫಲವಾಗಿದ್ದಾರೆ ಎಂದು ಟೀಕಿಸಿದ್ದಾರೆ.

‘ನಿಮ್ಮ ಪತ್ರವ್ಯವಹಾರದ ಅವಧಿ ಮತ್ತು ನೀವು ಅರೆಬೆಂದ ಊಹೆಗಳನ್ನು ಸತ್ಯವೆಂದು ಒಪ್ಪಿಕೊಳ್ಳುವ ವಿಧಾನದಿಂದ, ಪ್ರಕರಣದ ನ್ಯೂನತೆಗಳನ್ನು ವಿಶ್ಲೇಷಿಸಲು ಸಮಿತಿಯು ಗಂಭೀರವಾಗಿ ಆಸಕ್ತಿ ಹೊಂದಿದೆಯೇ ಎಂದು ನಾವು ಅನುಮಾನಿಸಬೇಕಾಗುತ್ತದೆ. ಈ ಸನ್ನಿವೇಶದಲ್ಲಿ, ನೀವು ರೂಪಿಸಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ. ನಿಮ್ಮ ಸೂತ್ರೀಕರಣ ಮತ್ತು ಪ್ರಸ್ತಾಪವನ್ನು ನಾವು ಒಪ್ಪುವುದಿಲ್ಲ’ ಎಂದು ಒತ್ತಿ ಹೇಳಿದ್ದಾರೆ.

‘1967 ರವರೆಗೆ, ಚುನಾವಣೆಗಳು ಏಕಕಾಲದಲ್ಲಿ ನಡೆಯುತ್ತಿದ್ದವು; ಅಂತಹ ನಾಲ್ಕು ಚುನಾವಣೆಗಳು ರೀತಿಯಲ್ಲಿ ನಡೆಯಿತು. 1970ರಲ್ಲಿ ಲೋಕಸಭೆಯಂತೆಯೇ ಕೆಲವು ರಾಜ್ಯಗಳ ಅಸೆಂಬ್ಲಿಗಳು ಅವಧಿಗೆ ಮುನ್ನವೇ ವಿಸರ್ಜನೆಯಾದ ನಂತರ 1968-69ರಲ್ಲಿ ಈ ಪದ್ಧತಿಯನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ; ರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...