Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇದು ಸಂವಿಧಾನದ ಮೂಲ ರಚನೆಯನ್ನು ಬುಡಮೇಲು ಮಾಡುವ ವಿನ್ಯಾಸವಾಗಿದೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ಪ್ರಜಾಪ್ರಭುತ್ವದಲ್ಲಿ ನಿರಂಕುಶ ಪ್ರಭುತ್ವವನ್ನು ಅನುಮತಿಸುವ ವ್ಯವಸ್ಥೆಯನ್ನು ರಚಿಸಿದ್ದಾರೆ. ಆದರೆ, ನಾನು ನಿರಂಕುಶಾಧಿಕಾರದ ವಿರುದ್ಧವಿದ್ದೇನೆ. ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತೀವ್ರವಾಗಿ ಟೀಸಿದ ಮಮತಾ ಬ್ಯಾನರ್ಜಿ, ‘ಅವರು ದೇಶದ ಒಕ್ಕೂಟ ರಚನೆಯನ್ನು ಬುಡಮೇಲು ಮಾಡಿದ್ದಾರೆ. ನೀವು ಕೆಲವು ರೀತಿಯ ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುವಂತೆ ತೋರುತ್ತಿದೆ. ಕೇಂದ್ರ ಸರ್ಕಾರವು ಈಗಾಗಲೇ ತೆಗೆದುಕೊಂಡಿರುವ ‘ನಿರ್ಧಾರ’ವು ನಿಜವಾದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ಮನೋಭಾವಕ್ಕೆ ವಿರುದ್ಧವಾದ ರಚನೆಯನ್ನು ಹೇರುತ್ತದೆ’ ಎಂದು ಆರೋಪಿಸಿದ್ದಾರೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಕಾರ್ಯದರ್ಶಿ ಡಾ. ನಿತೇನ್ ಚಂದ್ರ ಅವರಿಗೆ ಬರೆದ ವಿವರವಾದ ಪತ್ರದಲ್ಲಿ ‘ಕೇಂದ್ರ ಸರ್ಕಾರದ ಒಂದು ರಾಷ್ಟ್ರ, ಒಂದು ಚುನಾವಣೆ ತತ್ವದಲ್ಲಿರುವ ಮೂಲಭೂತ ಪರಿಕಲ್ಪನಾ ತೊಂದರೆಗಳ’ ಬಗ್ಗೆ ಪ್ರಶ್ನಿಸಿದ್ದಾರೆ.

‘ಒಂದು ರಾಷ್ಟ್ರ’ ಎಂಬ ಪದದ ಸಾಂವಿಧಾನಿಕ ಮತ್ತು ರಚನಾತ್ಮಕ ಪರಿಣಾಮಗಳ ಬಗ್ಗೆ ಹಾಗೂ ಅಸ್ತಿತ್ವದಲ್ಲಿರುವ ಸಂಸತ್ ಮತ್ತು ವಿಧಾನಸಭೆ ಚುನಾವಣೆಗಳ ಸಮಯದಲ್ಲಿ ಕುರಿತಾದ ಗೊಂದಲಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.

‘1952 ರಲ್ಲಿ, ಮೊದಲ ಸಾರ್ವತ್ರಿಕ ಚುನಾವಣೆಯನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಏಕಕಾಲದಲ್ಲಿ ನಡೆಸಲಾಯಿತು. ಕೆಲವು ವರ್ಷಗಳಿಂದ ಅಂತಹ ಏಕಕಾಲಿಕತೆ ಇತ್ತು. ಆದರೆ ನಂತರ ಈ ವ್ಯವಸ್ಥೆ ಛಿದ್ರಗೊಂಡಿದೆ. ವಿವಿಧ ರಾಜ್ಯಗಳು ಈಗ ವಿಭಿನ್ನ ಚುನಾವಣಾ ಕ್ಯಾಲೆಂಡರ್‌ಗಳನ್ನು ಹೊಂದಿವೆ. ಅವು ರಾಜಕೀಯ ಬೆಳವಣಿಗೆಗಳಿಂದಾಗಿ ಬದಲಾವಣೆಗಳಿಗೆ ಒಳಗಾಗುತ್ತವೆ. ಚುನಾವಣೆಗಳನ್ನು ನಿರೀಕ್ಷಿಸದ ರಾಜ್ಯಗಳು ಸಹಬಾಳ್ವೆಯ ಪರಿಚಯಕ್ಕಾಗಿ (ಅವುಗಳನ್ನು) ನಡೆಸುವಂತೆ ಒತ್ತಾಯಿಸಬಾರದು’ ಎಂದು ಅವರು ಒತ್ತಿ ಹೇಳಿದರು.

‘ಲೋಕಸಭೆ ಅಥವಾ ವಿಧಾನಸಭೆಯು ಅಕಾಲಿಕ ವಿಸರ್ಜನೆಗೆ ಒಳಪಟ್ಟರೆ ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯಲ್ಲಿ ಮೂಡುವ ಸಂಭಾವ್ಯ ಬಿರುಕುಗಳನ್ನು ಸಹ ಸಹ ಬ್ಯಾನರ್ಜಿ ಗುರುತಿಸಿದ್ದಾರೆ. ‘ಕೇಂದ್ರ ಸರ್ಕಾರದ ಅಸ್ಥಿರತೆಯು ರಾಜ್ಯ ಶಾಸಕಾಂಗಗಳನ್ನು ಅಸ್ಥಿರಗೊಳಿಸಬಾರದು’ ಅವರು ಎಚ್ಚರಿಸಿದರು.

‘ಸಹಬಾಳ್ವೆಯ ಪರಿಚಯದ ಈ ಮೂಲಭೂತ ಸಮಸ್ಯೆಯನ್ನು ನಿಮ್ಮ ಗೌರವಾನ್ವಿತ ಸಮಿತಿಯು ಹೇಗೆ ಪರಿಹರಿಸಲಿದೆ ಎಂಬುದು ಸ್ಪಷ್ಟವಾಗಿಲ್ಲ’ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಸಾಮಾನ್ಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಸೇರಿದಂತೆ ಹಲವಾರು ಸಣ್ಣ ಆಕ್ಷೇಪಣೆಗಳನ್ನು ಸಹ ಅವರು ಗುರುತಿಸಿದ್ದಾರೆ. ಜತೆಗೆ, ಸಮಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳನ್ನು ಸೇರಿಸುವಲ್ಲಿ ಅವರು ವಿಫಲವಾಗಿದ್ದಾರೆ ಎಂದು ಟೀಕಿಸಿದ್ದಾರೆ.

‘ನಿಮ್ಮ ಪತ್ರವ್ಯವಹಾರದ ಅವಧಿ ಮತ್ತು ನೀವು ಅರೆಬೆಂದ ಊಹೆಗಳನ್ನು ಸತ್ಯವೆಂದು ಒಪ್ಪಿಕೊಳ್ಳುವ ವಿಧಾನದಿಂದ, ಪ್ರಕರಣದ ನ್ಯೂನತೆಗಳನ್ನು ವಿಶ್ಲೇಷಿಸಲು ಸಮಿತಿಯು ಗಂಭೀರವಾಗಿ ಆಸಕ್ತಿ ಹೊಂದಿದೆಯೇ ಎಂದು ನಾವು ಅನುಮಾನಿಸಬೇಕಾಗುತ್ತದೆ. ಈ ಸನ್ನಿವೇಶದಲ್ಲಿ, ನೀವು ರೂಪಿಸಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ. ನಿಮ್ಮ ಸೂತ್ರೀಕರಣ ಮತ್ತು ಪ್ರಸ್ತಾಪವನ್ನು ನಾವು ಒಪ್ಪುವುದಿಲ್ಲ’ ಎಂದು ಒತ್ತಿ ಹೇಳಿದ್ದಾರೆ.

‘1967 ರವರೆಗೆ, ಚುನಾವಣೆಗಳು ಏಕಕಾಲದಲ್ಲಿ ನಡೆಯುತ್ತಿದ್ದವು; ಅಂತಹ ನಾಲ್ಕು ಚುನಾವಣೆಗಳು ರೀತಿಯಲ್ಲಿ ನಡೆಯಿತು. 1970ರಲ್ಲಿ ಲೋಕಸಭೆಯಂತೆಯೇ ಕೆಲವು ರಾಜ್ಯಗಳ ಅಸೆಂಬ್ಲಿಗಳು ಅವಧಿಗೆ ಮುನ್ನವೇ ವಿಸರ್ಜನೆಯಾದ ನಂತರ 1968-69ರಲ್ಲಿ ಈ ಪದ್ಧತಿಯನ್ನು ನಿಲ್ಲಿಸಲಾಯಿತು.

ಇದನ್ನೂ ಓದಿ; ರಾಜೌರಿ-ಪೂಂಚ್‌ನಲ್ಲಿ ಭಯೋತ್ಪಾದನೆ ಹೆಚ್ಚಳ; ಕಳವಳ ವ್ಯಕ್ತಪಡಿಸಿದ ಸೇನಾ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...