Homeಮುಖಪುಟ"ಒಂದು ದೇಶ ಒಂದು ಚುನಾವಣೆ": ಇದು ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳ ಮೊತ್ತವೋ?

“ಒಂದು ದೇಶ ಒಂದು ಚುನಾವಣೆ”: ಇದು ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳ ಮೊತ್ತವೋ?

- Advertisement -
- Advertisement -

ಭಾರತವು ಕಣ್ಕಟ್ಟುಗಳ ದೇಶವಾಗಿದೆ. ಈ ಸತ್ಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗಿಂತ ಚೆನ್ನಾಗಿ ಇನ್ಯಾರೂ ಅರಿತಿಲ್ಲ. ದೇಶದಲ್ಲಿ ಬೆಲೆಏರಿಕೆ ಇರಲಿ, ಅದಾನಿಯ ಹಗರಣವಿರಲಿ ಅಥವಾ ನಮ್ಮ ಭೂಮಿಯ ಮೇಲೆ ಚೀನಾದ ಆಕ್ರಮಣವಿರಲಿ- ಇವುಗಳ ಬಗ್ಗೆ ನೀವು ಚಿಂತಿಸಬೇಡಿ; ಒಂದು ಹೊಸ ಕಣ್ಕಟ್ಟನ್ನು ತೇಲಿಬಿಡಿ: “ಒಂದು ದೇಶ ಒಂದು ಚುನಾವಣೆ”. ಟಿವಿ ಚಾನೆಲ್‌ಗಳಿಗೆ ಸೂಚನೆ ನೀಡಿಬಿಡಿ. ಜನರು ತಮ್ಮ ಕಷ್ಟಗಳನ್ನು ಮರೆತು ಹೊಸ ನಾಟಕ ನೋಡಲು ಶುರುಮಾಡುತ್ತಾರೆ. ಅಲ್ಲಿಗೆ ಆಟವೂ ಮುಗೀತು, ವೋಟು ಕಬ್ಜಾ ಆಯಿತು.

ಮುಂಬರುವ ಲೋಕಸಭೆ ಚುನಾವಣೆಗೆ ಎಂಟು ತಿಂಗಳ ಮುನ್ನ “ಒಂದು ದೇಶ ಒಂದು ಚುನಾವಣೆ” ಎಂಬ ಹೆಸರಿನಲ್ಲಿ ಲಾಂಚ್ ಮಾಡಲಾದ ಕಣ್ಕಟ್ಟಿನ ಅಸಲಿಯತ್ತನ್ನು ಅರಿಯಲು, ಈ ಬಣ್ಣಬಣ್ಣ ಲಕೋಟೆಯನ್ನು ತೆರೆದು ಅದರಲ್ಲಿರುವ ಎಂಟು ಭ್ರಾಂತಿಗಳನ್ನು ಗುರುತಿಸಿ, ಅದರ ಹಿಂದಿರುವ ಸಂಪೂರ್ಣ ಸತ್ಯವನ್ನು ಅರಿಯುವ ಅವಶ್ಯಕತೆ ಇದೆ.

ಮೊದಲ ಭ್ರಾಂತಿ: “ಒಂದು ದೇಶ ಒಂದು ಚುನಾವಣೆ” ಎಂಬುದು ಒಂದು ಸಾಧಾರಣವಾದ ಆಡಳಿತಾತ್ಮಕ ಸುಧಾರಣೆಯಾಗಿದ್ದು, ಅದು ದೇಶದ ಚುನಾವಣಾ ಕ್ಯಾಲೆಂಡರ್‌ನಲ್ಲಿರುವ ಕೊರತೆಗಳನ್ನು ನೀಗಿಸುತ್ತದೆ.

ವಾಸ್ತವ: ಇಲ್ಲ ಸ್ವಾಮಿ, ಇದು ಯಾವುದೇ ಸಣ್ಣಪುಟ್ಟ ಆಡಳಿತಾತ್ಮಕ ಸುಧಾರಣೆ ಅಲ್ಲ. ಸದಾಕಾಲ ಲೋಕಸಭೆಯೊಂದಿಗೆ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕಾದರೆ ನಮ್ಮ ಸಂವಿಧಾನದ ಅಡಿಪಾಯದ ಮೂಲರೂಪವನ್ನೇ ಬದಲಿಸಬೇಕಾಗುತ್ತದೆ. ಇದು ಸಂವಿಧಾನದ ಬಹು ದೊಡ್ಡ ತಿದ್ದುಪಡಿಯಾಗುತ್ತದೆ.

ಎರಡನೆಯ ಭ್ರಾಂತಿ: ದೇಶದ ಏಕತೆ ಮತ್ತು ಚುನಾವಣೆಗಳಲ್ಲಿ ಏಕರೂಪತೆ ತರಲು ಇದೊಂದು ಸ್ವಾಭಾವಿಕ ಹೆಜ್ಜೆಯಾಗಿದೆ.

ವಾಸ್ತವ: ಇಲ್ಲಿ ’ಒಂದು ಚುನಾವಣೆ’ಯ ಅರ್ಥ ಒಂದೇ ಸಮಯಕ್ಕೆ ಚುನಾವಣೆ ಎಂದು. ಇದಕ್ಕೂ ಏಕತೆಗೂ ಅಥವಾ ಏಕರೂಪತೆಗೂ ಯಾವ ಸಂಬಂಧವೂ ಇಲ್ಲ. ಪಂಚಾಯತಿ ಮತ್ತು ನಗರ ಪಾಲಿಕೆಗಳ ಚುನಾವಣೆಗಳಲ್ಲಿ ಬಳಕೆಯಾಗುವ ಮತದಾರರ ಪಟ್ಟಿ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಳಕೆಯಾಗುವ ಪಟ್ಟಿ ಬೇರೆಯಾಗಿದ್ದು, ಅದನ್ನು ಒಂದೇ ಆಗಿಸಬೇಕಿದೆ. ವಾಸ್ತವದಲ್ಲಿ ದೇಶದಲ್ಲಿ ಚುನಾವಣಾ ಏಕರೂಪತೆಗೆ ಅವಶ್ಯಕತೆ ಇರುವುದು ಇಲ್ಲಿ. ಆದರೆ ಈ ಪ್ರಸ್ತಾಪದಲ್ಲಿ ಈ ಅವಶ್ಯಕ ಏಕರೂಪತೆಗಾಗಿ ಯಾವ ಸ್ಥಾನವೂ ಕಂಡುಬಂದಿಲ್ಲ.

ಮೂರನೆಯ ಭ್ರಾಂತಿ: ಇದೊಂದು ಸಾರ್ವತ್ರಿಕ ಪ್ರಸ್ತಾಪವಾಗಿದ್ದು, ಇದರ ಬಗ್ಗೆ ದೀರ್ಘಕಾಲದಿಂದ ರಾಷ್ಟ್ರೀಯ ಒಮ್ಮತಕ್ಕೆ ಬರಲಾಗಿದೆ.

ವಾಸ್ತವ: ಈ ಪ್ರಸ್ತಾಪವನ್ನು ಕಳೆದ ನಾಲ್ಕು ದಶಕಗಳಲ್ಲಿ ಪದೇಪದೇ ಮುಂದಿಡಲಾಗಿದೆ. ಕಾಲಕಾಲಕ್ಕೆ ಹಲವು ಸರಕಾರಿ ಸಮಿತಿಗಳು ಹಾಗೂ ಚುನಾವಣಾ ಆಯೋಗವು ಇದರ ಸಮರ್ಥನೆ ಮಾಡಿವೆ. ಆದರೆ, ಈ ಬಾರಿಯ ರೀತಿಯಲ್ಲಿಯೇ, ಅನೇಕ ಪಕ್ಷಗಳು ಮತ್ತು ವಿಶೇಷಜ್ಞರು ಇದನ್ನು ವಿರೋಧಿಸಿದ್ದಾರೆ. ಇಷ್ಟು ದೊಡ್ಡ ಸಾಂವಿಧಾನಿಕ ಬದಲಾವಣೆಯನ್ನು ಸರ್ವಪಕ್ಷಗಳ ಒಮ್ಮತವಿಲ್ಲದೇ ಅನುಷ್ಠಾನಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ.

ನಾಲ್ಕನೆಯ ಭ್ರಾಂತಿ: ಸಂವಿಧಾನ ಅನುಷ್ಠಾನಗೊಂಡ ನಂತರ ಆರಂಭದಲ್ಲಿ “ಒಂದು ದೇಶ ಒಂದು ಚುನಾವಣೆ”ಯ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದವು. ನಂತರ ಚುನಾವಣಾ ಚಕ್ರ ಬೇರೆ ಬೇರೆಯಾಗಿದ್ದ ಕಾರಣದಿಂದ ವಿಕೃತಿ ಹುಟ್ಟಿಕೊಂಡಿದೆ.

ಪೂರ್ಣ ಸತ್ಯ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಬೇರೆ ಬೇರೆ ಕಾಲದಲ್ಲಿ ಚುನಾವಣೆ ಆಗುವುದು ಯಾವ ವಿಕೃತಿಯೂ ಅಲ್ಲ. ಅದರ ಬದಲಿಗೆ ನಮ್ಮ ಸಾಂವಿಧಾನಿಕ ಅಡಿಪಾಯದ ಎರಡು ಮೂಲಭೂತ ತತ್ವಗಳ (ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ) ಸ್ವಾಭಾವಿಕ ಪರಿಣಾಮವಾಗಿದೆ. ಆರಂಭದಲ್ಲಿ ಎರಡೂ ಚುನಾವಣೆಗಳು ಒಂದೇಕಾಲಕ್ಕೆ ಆಗಲೇಬೇಕಿತ್ತು ಏಕೆಂದರೆ, ಆರಂಭದಲ್ಲಿ ಏಕಕಾಲಕ್ಕೆ ಆಗುವುದು ಸ್ವಾಭಾವಿಕವಾಗಿತ್ತು. ಸಂವಿಧಾನದ ರಚನಾಕಾರರು ಇದನ್ನು ಅರಿತಿದ್ದರು. ಚಿಕಿತ್ಸೆ ನೀಡಬೇಕಾದಂತಹ ಯಾವ ವಿಕೃತಿಯೂ ಇದರಲ್ಲಿ ಇಲ್ಲ.

ಇದನ್ನೂ ಓದಿ: ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಐದನೆಯ ಭ್ರಾಂತಿ: ಏಕಕಾಲಕ್ಕೆ ಚುನಾವಣೆ ನಡೆಸುವುದರಿಂದ ಸರಕಾರದ ಚುನಾವಣಾ ವೆಚ್ಚ ತುಂಬಾ ಕಡಿಮೆಯಾಗಲಿದೆ.

ವಾಸ್ತವ: ಸ್ವಾಭಾವಿಕವಾಗಿಯೇ ಬೇರೆಬೇರೆ ಚುನಾವಣೆ ನಡೆಸುವುದರ ಬದಲಿಗೆ ಒಂದೇ ಬಾರಿ ಚುನಾವಣೆ ನಡೆಸುವುದರಿಂದ ಸರಕಾರಿ ವೆಚ್ಚದಲ್ಲಿ ಉಳಿತಾಯವಾಗುವುದು, ಆದರೆ ಪ್ರಶ್ನೆ ಇರುವುದು, ಎಷ್ಟು? ಈ ರೀತಿಯಲ್ಲಿ ಚುನಾವಣೆ ನಡೆಸುವುದರಿಂದ ಹೆಚ್ಚೆಂದರೆ ಐದು ವರ್ಷಗಳಲ್ಲಿ 5,000 ಕೋಟಿ ಉಳಿತಾಯ ಆಗಬಲ್ಲದು. ಈ ಮೊತ್ತ ಮುಂದಿನ ಐದು ವರ್ಷಗಳ ಕೇಂದ್ರೀಯ ಬಜೆಟ್‌ನ 0.02%ಆಗಲಿದೆ ಅಂದರೆ 100 ರೂಪಾಯಿಗಳಲ್ಲಿ ಐದು ಪೈಸೆ ಬಳಸಿದಂತೆ. ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣೆಗಳಲ್ಲಿ ಎಷ್ಟು ಖರ್ಚು ಮಾಡುತ್ತಾರೋ, ಅದನ್ನು ನೋಡಿದರೆ. ಈ ಸರಕಾರಿ ವೆಚ್ಚವು ಏನೇನೂ ಅಲ್ಲ.

ಆರನೆಯ ಭ್ರಾಂತಿ: ಪದೇಪದೇ ಚುನಾವಣೆ ನಡೆಸುವಾಗ ನೀತಿಸಂಹಿತೆ ಜಾರಿಯಾಗುವುದರಿಂದ ಸರಕಾರಿ ಕೆಲಸಗಳು ನಿಂತುಕೊಳ್ಳುತ್ತವೆ, ಸರಕಾರಗಳ ಮೇಲೆ ಸದಾಕಾಲ ಚುನಾವಣೆಗಳ ಒತ್ತಡ ಇರುತ್ತದೆ. ಈ ಸಮಸ್ಯೆಗೆ ಇದೊಂದೇ ಪರಿಹಾರ.

ವಾಸ್ತವ: ಈ ಮಾತಿನಲ್ಲಿ ಒಂದಿಷ್ಟು ಸತ್ಯಾಂಶವಿದೆ. ಆದರೆ ಈ ಸಮಸ್ಯೆ ಪರಿಹರಿಸಲು ಇನ್ನೂ ಸುಲಭವಾದ ಮಾರ್ಗಗಳಿವೆ. ಸದ್ಯಕ್ಕೆ ಐದು ವರ್ಷಗಳಲ್ಲಿ ಕನಿಷ್ಠ ಎಂಟು ಬಾರಿ ದೊಡ್ಡ ರಾಜ್ಯಗಳ ಚುನಾವಣೆ ನಡೆಯುತ್ತವೆ. ಇದನ್ನು ಕಡಿಮೆ ಮಾಡಲು, ಒಂದು ವರ್ಷದಲ್ಲಿ ಬರುವ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡಬಹುದಾಗಿದೆ. ಆಯಾ ರಾಜ್ಯಗಳಿಗೆ ವಿಶೇಷ ಸಂಬಂಧವಿಲ್ಲದೇ ಇದ್ದರೆ ಕೇಂದ್ರ ಸರಕಾರದ ಎಲ್ಲಾ ತೀರ್ಮಾನಗಳನ್ನು ನಿಲ್ಲಿಸದೇ ಇರುವಂತೆ ನೀತಿ ಸಂಹಿತೆಯಲ್ಲಿ ತಿದ್ದುಪಡಿ ಮಾಡಬೇಕಿದೆ. ರಾಜ್ಯ ಚುನಾವಣೆಗಳನ್ನು ಹಲವಾರು ಸುತ್ತುಗಳಲ್ಲಿ ಮಾಡುವುದರ ಬದಲಿಗೆ ಒಂದು ಅಥವಾ ಎರಡು ಸುತ್ತಿನಲ್ಲಿ ಮಾಡುವುದರಿಂದ ಚುನಾವಣೆಯ ಅವಧಿಯನ್ನು ಕಡಿಮೆ ಮಾಡಬಹುದಾಗಿದೆ.

ಏಳನೆಯ ಭ್ರಾಂತಿ: ಈ ಪ್ರಸ್ತಾಪದಲ್ಲಿ ಹೆಚ್ಚಿನ ಲಾಭ ಇಲ್ಲವೆಂದಿಟ್ಟುಕೊಂಡರೂ, ಯಾವುದೇ ನಷ್ಟವೂ ಇಲ್ಲ.

ವಾಸ್ತವ: ನಷ್ಟ ಇದೆ, ಅದೇನೆಂದರೆ, ಇದರಿಂದ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯ ಕುಸಿದುಬೀಳುತ್ತದೆ. ಒಂದುವೇಳೆ ಯಾವುದೋ ರಾಜ್ಯದಲ್ಲಿ ಸರಕಾರವು ವಿಧಾನಸಭೆಯಲ್ಲಿ ಬಹುಮತ ವಿಶ್ವಾಸ ಕಳೆದುಕೊಳ್ಳುತ್ತದೆ ಹಾಗೂ ಇತರ ಯಾವ ಪಕ್ಷಕ್ಕೂ ಬಹುಮತ ಇಲ್ಲದಿರುವ ಸಂದರ್ಭದಲ್ಲಿ ಏನಾಗುವುದು? ಬಜೆಟ್ ಜಾರಿಗೊಳಿಸಲಾಗದ, ದುಡ್ಡು ಖರ್ಚು ಮಾಡುವ ಅಧಿಕಾರವಿಲ್ಲದ ಆ ಸರಕಾರವು ಐದು ವರ್ಷ ಮುಂದುವರಿಯುವಂತೆ ಮಾಡಲಾಗುವುದೇ? ಅಥವಾ ವಿಧಾನಸಭೆಯನ್ನು ವಿಸರ್ಜಿಸಿ, ಹಲವಾರು ವರ್ಷಗಳ ತನಕ ರಾಜ್ಯಪಾಲರ ಆಳ್ವಕೆ ನಡೆಯುವುದೇ? ಹಾಗೂ ಒಂದುವೇಳೆ ಈ ರೀತಿ ಕೇಂದ್ರದಲ್ಲಿ ಆದರೆ ಏನಾಗುವುದು? ಇದು ಪ್ರಜಾಪ್ರಭುತ್ವದೊಂದಿಗೆ ಆಟವಾಡಿದಂತೆ.

ಎಂಟನೆಯ ಭ್ರಾಂತಿ: ಇದು ಚುನಾವಣಾ ಸುಧಾರಣೆಯ ನಿಜವಾದ ಪ್ರಯತ್ನವಾಗಿದೆ. ಇದಕ್ಕೂ ರಾಜಕೀಯಕ್ಕೂ ಯಾವ ಸಂಬಂಧವೂ ಇಲ್ಲ.

ವಾಸ್ತವ: ಒಂದು ವೇಳೆ ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದಲ್ಲಿ, ಕಳೆದ 25 ವರ್ಷಗಳಲ್ಲಿ ಪದೇಪದೇ ಕೇವಲ ಬಿಜೆಪಿ ಮತ್ತು ಅದರ ನಾಯಕರೇ ಈ ಪ್ರಸ್ತಾಪದ ವಕಾಲತ್ತು ಮಾಡುತ್ತಿರುವುದು ಏಕೆ? ಒಂದು ವೇಳೆ ಲೋಕಸಭೆಗೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆದರೆ ರಾಷ್ಟ್ರೀಯ ಚುನಾವಣೆಯ ವಾತಾವರಣ ಸೃಷ್ಟಿಯಾಗಿ, ವಿಧಾನಸಭೆಯ ಚುನಾವಣೆಯಲ್ಲಿಯೂ ದೊಡ್ಡ ರಾಷ್ಟ್ರೀಯ ಪಕ್ಷಕ್ಕೆ ಹೆಚ್ಚಿನ ಮತಗಳು ಸಿಗುತ್ತವೆ ಎಂಬುದು ಸ್ವಾಭಾವಿಕ ಹಾಗೂ ಇಂದಿನ ಸಂದರ್ಭದಲ್ಲಿ ಹೆಚ್ಚಿನ ಲಾಭ ಬಿಜೆಪಿಗೆ ಆಗುತ್ತದೆ ಎಂಬುದು ಸಹಜವಾಗಿದೆ. ಅಲ್ಲದೇ ಯೋಚಿಸಿ, ಒಂದುವೇಳೆ ಈ ಪ್ರಸ್ತಾಪದ ಹಿಂದಿನ ಉದ್ದೇಶ ಶುದ್ಧ ರಾಜಕೀಯ ಸುಧಾರಣೆಯೇ ಆಗಿದ್ದರೆ, 2019ರಲ್ಲಿ ಪ್ರಧಾನಮಂತ್ರಿ ಇದರ ವಕಾಲತ್ತು ವಹಿಸಿದ್ದಾಗ ಈ ಸಮಿತಿಯನ್ನು ಏಕೆ ರಚಿಸಲಿಲ್ಲ? ಲೋಕಸಭೆ ಚುನಾವಣೆಗೆ ಕೇವಲ ಎಂಟು ತಿಂಗಳ ಮುನ್ನ ಹಾಗೂ ಸಂಸತ್ತಿನ ಪ್ರಸ್ತಾಪಿತ ವಿಶೇಷ ಅಧಿವೇಶನಕ್ಕೆ 20 ದಿನಗಳ ಮುನ್ನ ದಿಢೀರನೇ ಒಂದು ಹೈ-ಪವರ್ ಸಮಿತಿ ರಚಿಸಲಾಗಿ, ಅದರಲ್ಲಿ ರಾಜ್ಯಸಭೆಯ ವಿರೋಧಪಕ್ಷಗಳನ್ನು ಹೊರಗಿಟ್ಟು, ಹಳೆಯ ಜಿ-ಹುಜೂರ್‌ಗಳನ್ನು (ಆಜ್ಞೆಯನ್ನು ಪಾಲಿಸುವವರು) ತುಂಬಿಸಲಾಗಿ, ರಾತ್ರೋರಾತ್ರಿ ಸಮಿತಿಯ ಕೆಲಸ ಶುರುಮಾಡಲಾಗಿದೆ. ಇಷ್ಟಾದ ಮೇಲೆ ಇದರ ಹಿಂದೆ ಯಾವುದೇ ರಾಜಕೀಯ ಇಲ್ಲ ಎನ್ನುತ್ತೀರಿ, ನೀವು ಒಳ್ಳೇ ತಮಾಷೆ ಮಾಡ್ತೀರಿ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...