Homeಮುಖಪುಟ"ಒಂದು ದೇಶ ಒಂದು ಚುನಾವಣೆ": ಇದು ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳ ಮೊತ್ತವೋ?

“ಒಂದು ದೇಶ ಒಂದು ಚುನಾವಣೆ”: ಇದು ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳ ಮೊತ್ತವೋ?

- Advertisement -
- Advertisement -

ಭಾರತವು ಕಣ್ಕಟ್ಟುಗಳ ದೇಶವಾಗಿದೆ. ಈ ಸತ್ಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗಿಂತ ಚೆನ್ನಾಗಿ ಇನ್ಯಾರೂ ಅರಿತಿಲ್ಲ. ದೇಶದಲ್ಲಿ ಬೆಲೆಏರಿಕೆ ಇರಲಿ, ಅದಾನಿಯ ಹಗರಣವಿರಲಿ ಅಥವಾ ನಮ್ಮ ಭೂಮಿಯ ಮೇಲೆ ಚೀನಾದ ಆಕ್ರಮಣವಿರಲಿ- ಇವುಗಳ ಬಗ್ಗೆ ನೀವು ಚಿಂತಿಸಬೇಡಿ; ಒಂದು ಹೊಸ ಕಣ್ಕಟ್ಟನ್ನು ತೇಲಿಬಿಡಿ: “ಒಂದು ದೇಶ ಒಂದು ಚುನಾವಣೆ”. ಟಿವಿ ಚಾನೆಲ್‌ಗಳಿಗೆ ಸೂಚನೆ ನೀಡಿಬಿಡಿ. ಜನರು ತಮ್ಮ ಕಷ್ಟಗಳನ್ನು ಮರೆತು ಹೊಸ ನಾಟಕ ನೋಡಲು ಶುರುಮಾಡುತ್ತಾರೆ. ಅಲ್ಲಿಗೆ ಆಟವೂ ಮುಗೀತು, ವೋಟು ಕಬ್ಜಾ ಆಯಿತು.

ಮುಂಬರುವ ಲೋಕಸಭೆ ಚುನಾವಣೆಗೆ ಎಂಟು ತಿಂಗಳ ಮುನ್ನ “ಒಂದು ದೇಶ ಒಂದು ಚುನಾವಣೆ” ಎಂಬ ಹೆಸರಿನಲ್ಲಿ ಲಾಂಚ್ ಮಾಡಲಾದ ಕಣ್ಕಟ್ಟಿನ ಅಸಲಿಯತ್ತನ್ನು ಅರಿಯಲು, ಈ ಬಣ್ಣಬಣ್ಣ ಲಕೋಟೆಯನ್ನು ತೆರೆದು ಅದರಲ್ಲಿರುವ ಎಂಟು ಭ್ರಾಂತಿಗಳನ್ನು ಗುರುತಿಸಿ, ಅದರ ಹಿಂದಿರುವ ಸಂಪೂರ್ಣ ಸತ್ಯವನ್ನು ಅರಿಯುವ ಅವಶ್ಯಕತೆ ಇದೆ.

ಮೊದಲ ಭ್ರಾಂತಿ: “ಒಂದು ದೇಶ ಒಂದು ಚುನಾವಣೆ” ಎಂಬುದು ಒಂದು ಸಾಧಾರಣವಾದ ಆಡಳಿತಾತ್ಮಕ ಸುಧಾರಣೆಯಾಗಿದ್ದು, ಅದು ದೇಶದ ಚುನಾವಣಾ ಕ್ಯಾಲೆಂಡರ್‌ನಲ್ಲಿರುವ ಕೊರತೆಗಳನ್ನು ನೀಗಿಸುತ್ತದೆ.

ವಾಸ್ತವ: ಇಲ್ಲ ಸ್ವಾಮಿ, ಇದು ಯಾವುದೇ ಸಣ್ಣಪುಟ್ಟ ಆಡಳಿತಾತ್ಮಕ ಸುಧಾರಣೆ ಅಲ್ಲ. ಸದಾಕಾಲ ಲೋಕಸಭೆಯೊಂದಿಗೆ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕಾದರೆ ನಮ್ಮ ಸಂವಿಧಾನದ ಅಡಿಪಾಯದ ಮೂಲರೂಪವನ್ನೇ ಬದಲಿಸಬೇಕಾಗುತ್ತದೆ. ಇದು ಸಂವಿಧಾನದ ಬಹು ದೊಡ್ಡ ತಿದ್ದುಪಡಿಯಾಗುತ್ತದೆ.

ಎರಡನೆಯ ಭ್ರಾಂತಿ: ದೇಶದ ಏಕತೆ ಮತ್ತು ಚುನಾವಣೆಗಳಲ್ಲಿ ಏಕರೂಪತೆ ತರಲು ಇದೊಂದು ಸ್ವಾಭಾವಿಕ ಹೆಜ್ಜೆಯಾಗಿದೆ.

ವಾಸ್ತವ: ಇಲ್ಲಿ ’ಒಂದು ಚುನಾವಣೆ’ಯ ಅರ್ಥ ಒಂದೇ ಸಮಯಕ್ಕೆ ಚುನಾವಣೆ ಎಂದು. ಇದಕ್ಕೂ ಏಕತೆಗೂ ಅಥವಾ ಏಕರೂಪತೆಗೂ ಯಾವ ಸಂಬಂಧವೂ ಇಲ್ಲ. ಪಂಚಾಯತಿ ಮತ್ತು ನಗರ ಪಾಲಿಕೆಗಳ ಚುನಾವಣೆಗಳಲ್ಲಿ ಬಳಕೆಯಾಗುವ ಮತದಾರರ ಪಟ್ಟಿ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಳಕೆಯಾಗುವ ಪಟ್ಟಿ ಬೇರೆಯಾಗಿದ್ದು, ಅದನ್ನು ಒಂದೇ ಆಗಿಸಬೇಕಿದೆ. ವಾಸ್ತವದಲ್ಲಿ ದೇಶದಲ್ಲಿ ಚುನಾವಣಾ ಏಕರೂಪತೆಗೆ ಅವಶ್ಯಕತೆ ಇರುವುದು ಇಲ್ಲಿ. ಆದರೆ ಈ ಪ್ರಸ್ತಾಪದಲ್ಲಿ ಈ ಅವಶ್ಯಕ ಏಕರೂಪತೆಗಾಗಿ ಯಾವ ಸ್ಥಾನವೂ ಕಂಡುಬಂದಿಲ್ಲ.

ಮೂರನೆಯ ಭ್ರಾಂತಿ: ಇದೊಂದು ಸಾರ್ವತ್ರಿಕ ಪ್ರಸ್ತಾಪವಾಗಿದ್ದು, ಇದರ ಬಗ್ಗೆ ದೀರ್ಘಕಾಲದಿಂದ ರಾಷ್ಟ್ರೀಯ ಒಮ್ಮತಕ್ಕೆ ಬರಲಾಗಿದೆ.

ವಾಸ್ತವ: ಈ ಪ್ರಸ್ತಾಪವನ್ನು ಕಳೆದ ನಾಲ್ಕು ದಶಕಗಳಲ್ಲಿ ಪದೇಪದೇ ಮುಂದಿಡಲಾಗಿದೆ. ಕಾಲಕಾಲಕ್ಕೆ ಹಲವು ಸರಕಾರಿ ಸಮಿತಿಗಳು ಹಾಗೂ ಚುನಾವಣಾ ಆಯೋಗವು ಇದರ ಸಮರ್ಥನೆ ಮಾಡಿವೆ. ಆದರೆ, ಈ ಬಾರಿಯ ರೀತಿಯಲ್ಲಿಯೇ, ಅನೇಕ ಪಕ್ಷಗಳು ಮತ್ತು ವಿಶೇಷಜ್ಞರು ಇದನ್ನು ವಿರೋಧಿಸಿದ್ದಾರೆ. ಇಷ್ಟು ದೊಡ್ಡ ಸಾಂವಿಧಾನಿಕ ಬದಲಾವಣೆಯನ್ನು ಸರ್ವಪಕ್ಷಗಳ ಒಮ್ಮತವಿಲ್ಲದೇ ಅನುಷ್ಠಾನಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ.

ನಾಲ್ಕನೆಯ ಭ್ರಾಂತಿ: ಸಂವಿಧಾನ ಅನುಷ್ಠಾನಗೊಂಡ ನಂತರ ಆರಂಭದಲ್ಲಿ “ಒಂದು ದೇಶ ಒಂದು ಚುನಾವಣೆ”ಯ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದವು. ನಂತರ ಚುನಾವಣಾ ಚಕ್ರ ಬೇರೆ ಬೇರೆಯಾಗಿದ್ದ ಕಾರಣದಿಂದ ವಿಕೃತಿ ಹುಟ್ಟಿಕೊಂಡಿದೆ.

ಪೂರ್ಣ ಸತ್ಯ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಬೇರೆ ಬೇರೆ ಕಾಲದಲ್ಲಿ ಚುನಾವಣೆ ಆಗುವುದು ಯಾವ ವಿಕೃತಿಯೂ ಅಲ್ಲ. ಅದರ ಬದಲಿಗೆ ನಮ್ಮ ಸಾಂವಿಧಾನಿಕ ಅಡಿಪಾಯದ ಎರಡು ಮೂಲಭೂತ ತತ್ವಗಳ (ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ) ಸ್ವಾಭಾವಿಕ ಪರಿಣಾಮವಾಗಿದೆ. ಆರಂಭದಲ್ಲಿ ಎರಡೂ ಚುನಾವಣೆಗಳು ಒಂದೇಕಾಲಕ್ಕೆ ಆಗಲೇಬೇಕಿತ್ತು ಏಕೆಂದರೆ, ಆರಂಭದಲ್ಲಿ ಏಕಕಾಲಕ್ಕೆ ಆಗುವುದು ಸ್ವಾಭಾವಿಕವಾಗಿತ್ತು. ಸಂವಿಧಾನದ ರಚನಾಕಾರರು ಇದನ್ನು ಅರಿತಿದ್ದರು. ಚಿಕಿತ್ಸೆ ನೀಡಬೇಕಾದಂತಹ ಯಾವ ವಿಕೃತಿಯೂ ಇದರಲ್ಲಿ ಇಲ್ಲ.

ಇದನ್ನೂ ಓದಿ: ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಐದನೆಯ ಭ್ರಾಂತಿ: ಏಕಕಾಲಕ್ಕೆ ಚುನಾವಣೆ ನಡೆಸುವುದರಿಂದ ಸರಕಾರದ ಚುನಾವಣಾ ವೆಚ್ಚ ತುಂಬಾ ಕಡಿಮೆಯಾಗಲಿದೆ.

ವಾಸ್ತವ: ಸ್ವಾಭಾವಿಕವಾಗಿಯೇ ಬೇರೆಬೇರೆ ಚುನಾವಣೆ ನಡೆಸುವುದರ ಬದಲಿಗೆ ಒಂದೇ ಬಾರಿ ಚುನಾವಣೆ ನಡೆಸುವುದರಿಂದ ಸರಕಾರಿ ವೆಚ್ಚದಲ್ಲಿ ಉಳಿತಾಯವಾಗುವುದು, ಆದರೆ ಪ್ರಶ್ನೆ ಇರುವುದು, ಎಷ್ಟು? ಈ ರೀತಿಯಲ್ಲಿ ಚುನಾವಣೆ ನಡೆಸುವುದರಿಂದ ಹೆಚ್ಚೆಂದರೆ ಐದು ವರ್ಷಗಳಲ್ಲಿ 5,000 ಕೋಟಿ ಉಳಿತಾಯ ಆಗಬಲ್ಲದು. ಈ ಮೊತ್ತ ಮುಂದಿನ ಐದು ವರ್ಷಗಳ ಕೇಂದ್ರೀಯ ಬಜೆಟ್‌ನ 0.02%ಆಗಲಿದೆ ಅಂದರೆ 100 ರೂಪಾಯಿಗಳಲ್ಲಿ ಐದು ಪೈಸೆ ಬಳಸಿದಂತೆ. ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣೆಗಳಲ್ಲಿ ಎಷ್ಟು ಖರ್ಚು ಮಾಡುತ್ತಾರೋ, ಅದನ್ನು ನೋಡಿದರೆ. ಈ ಸರಕಾರಿ ವೆಚ್ಚವು ಏನೇನೂ ಅಲ್ಲ.

ಆರನೆಯ ಭ್ರಾಂತಿ: ಪದೇಪದೇ ಚುನಾವಣೆ ನಡೆಸುವಾಗ ನೀತಿಸಂಹಿತೆ ಜಾರಿಯಾಗುವುದರಿಂದ ಸರಕಾರಿ ಕೆಲಸಗಳು ನಿಂತುಕೊಳ್ಳುತ್ತವೆ, ಸರಕಾರಗಳ ಮೇಲೆ ಸದಾಕಾಲ ಚುನಾವಣೆಗಳ ಒತ್ತಡ ಇರುತ್ತದೆ. ಈ ಸಮಸ್ಯೆಗೆ ಇದೊಂದೇ ಪರಿಹಾರ.

ವಾಸ್ತವ: ಈ ಮಾತಿನಲ್ಲಿ ಒಂದಿಷ್ಟು ಸತ್ಯಾಂಶವಿದೆ. ಆದರೆ ಈ ಸಮಸ್ಯೆ ಪರಿಹರಿಸಲು ಇನ್ನೂ ಸುಲಭವಾದ ಮಾರ್ಗಗಳಿವೆ. ಸದ್ಯಕ್ಕೆ ಐದು ವರ್ಷಗಳಲ್ಲಿ ಕನಿಷ್ಠ ಎಂಟು ಬಾರಿ ದೊಡ್ಡ ರಾಜ್ಯಗಳ ಚುನಾವಣೆ ನಡೆಯುತ್ತವೆ. ಇದನ್ನು ಕಡಿಮೆ ಮಾಡಲು, ಒಂದು ವರ್ಷದಲ್ಲಿ ಬರುವ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡಬಹುದಾಗಿದೆ. ಆಯಾ ರಾಜ್ಯಗಳಿಗೆ ವಿಶೇಷ ಸಂಬಂಧವಿಲ್ಲದೇ ಇದ್ದರೆ ಕೇಂದ್ರ ಸರಕಾರದ ಎಲ್ಲಾ ತೀರ್ಮಾನಗಳನ್ನು ನಿಲ್ಲಿಸದೇ ಇರುವಂತೆ ನೀತಿ ಸಂಹಿತೆಯಲ್ಲಿ ತಿದ್ದುಪಡಿ ಮಾಡಬೇಕಿದೆ. ರಾಜ್ಯ ಚುನಾವಣೆಗಳನ್ನು ಹಲವಾರು ಸುತ್ತುಗಳಲ್ಲಿ ಮಾಡುವುದರ ಬದಲಿಗೆ ಒಂದು ಅಥವಾ ಎರಡು ಸುತ್ತಿನಲ್ಲಿ ಮಾಡುವುದರಿಂದ ಚುನಾವಣೆಯ ಅವಧಿಯನ್ನು ಕಡಿಮೆ ಮಾಡಬಹುದಾಗಿದೆ.

ಏಳನೆಯ ಭ್ರಾಂತಿ: ಈ ಪ್ರಸ್ತಾಪದಲ್ಲಿ ಹೆಚ್ಚಿನ ಲಾಭ ಇಲ್ಲವೆಂದಿಟ್ಟುಕೊಂಡರೂ, ಯಾವುದೇ ನಷ್ಟವೂ ಇಲ್ಲ.

ವಾಸ್ತವ: ನಷ್ಟ ಇದೆ, ಅದೇನೆಂದರೆ, ಇದರಿಂದ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯ ಕುಸಿದುಬೀಳುತ್ತದೆ. ಒಂದುವೇಳೆ ಯಾವುದೋ ರಾಜ್ಯದಲ್ಲಿ ಸರಕಾರವು ವಿಧಾನಸಭೆಯಲ್ಲಿ ಬಹುಮತ ವಿಶ್ವಾಸ ಕಳೆದುಕೊಳ್ಳುತ್ತದೆ ಹಾಗೂ ಇತರ ಯಾವ ಪಕ್ಷಕ್ಕೂ ಬಹುಮತ ಇಲ್ಲದಿರುವ ಸಂದರ್ಭದಲ್ಲಿ ಏನಾಗುವುದು? ಬಜೆಟ್ ಜಾರಿಗೊಳಿಸಲಾಗದ, ದುಡ್ಡು ಖರ್ಚು ಮಾಡುವ ಅಧಿಕಾರವಿಲ್ಲದ ಆ ಸರಕಾರವು ಐದು ವರ್ಷ ಮುಂದುವರಿಯುವಂತೆ ಮಾಡಲಾಗುವುದೇ? ಅಥವಾ ವಿಧಾನಸಭೆಯನ್ನು ವಿಸರ್ಜಿಸಿ, ಹಲವಾರು ವರ್ಷಗಳ ತನಕ ರಾಜ್ಯಪಾಲರ ಆಳ್ವಕೆ ನಡೆಯುವುದೇ? ಹಾಗೂ ಒಂದುವೇಳೆ ಈ ರೀತಿ ಕೇಂದ್ರದಲ್ಲಿ ಆದರೆ ಏನಾಗುವುದು? ಇದು ಪ್ರಜಾಪ್ರಭುತ್ವದೊಂದಿಗೆ ಆಟವಾಡಿದಂತೆ.

ಎಂಟನೆಯ ಭ್ರಾಂತಿ: ಇದು ಚುನಾವಣಾ ಸುಧಾರಣೆಯ ನಿಜವಾದ ಪ್ರಯತ್ನವಾಗಿದೆ. ಇದಕ್ಕೂ ರಾಜಕೀಯಕ್ಕೂ ಯಾವ ಸಂಬಂಧವೂ ಇಲ್ಲ.

ವಾಸ್ತವ: ಒಂದು ವೇಳೆ ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದಲ್ಲಿ, ಕಳೆದ 25 ವರ್ಷಗಳಲ್ಲಿ ಪದೇಪದೇ ಕೇವಲ ಬಿಜೆಪಿ ಮತ್ತು ಅದರ ನಾಯಕರೇ ಈ ಪ್ರಸ್ತಾಪದ ವಕಾಲತ್ತು ಮಾಡುತ್ತಿರುವುದು ಏಕೆ? ಒಂದು ವೇಳೆ ಲೋಕಸಭೆಗೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆದರೆ ರಾಷ್ಟ್ರೀಯ ಚುನಾವಣೆಯ ವಾತಾವರಣ ಸೃಷ್ಟಿಯಾಗಿ, ವಿಧಾನಸಭೆಯ ಚುನಾವಣೆಯಲ್ಲಿಯೂ ದೊಡ್ಡ ರಾಷ್ಟ್ರೀಯ ಪಕ್ಷಕ್ಕೆ ಹೆಚ್ಚಿನ ಮತಗಳು ಸಿಗುತ್ತವೆ ಎಂಬುದು ಸ್ವಾಭಾವಿಕ ಹಾಗೂ ಇಂದಿನ ಸಂದರ್ಭದಲ್ಲಿ ಹೆಚ್ಚಿನ ಲಾಭ ಬಿಜೆಪಿಗೆ ಆಗುತ್ತದೆ ಎಂಬುದು ಸಹಜವಾಗಿದೆ. ಅಲ್ಲದೇ ಯೋಚಿಸಿ, ಒಂದುವೇಳೆ ಈ ಪ್ರಸ್ತಾಪದ ಹಿಂದಿನ ಉದ್ದೇಶ ಶುದ್ಧ ರಾಜಕೀಯ ಸುಧಾರಣೆಯೇ ಆಗಿದ್ದರೆ, 2019ರಲ್ಲಿ ಪ್ರಧಾನಮಂತ್ರಿ ಇದರ ವಕಾಲತ್ತು ವಹಿಸಿದ್ದಾಗ ಈ ಸಮಿತಿಯನ್ನು ಏಕೆ ರಚಿಸಲಿಲ್ಲ? ಲೋಕಸಭೆ ಚುನಾವಣೆಗೆ ಕೇವಲ ಎಂಟು ತಿಂಗಳ ಮುನ್ನ ಹಾಗೂ ಸಂಸತ್ತಿನ ಪ್ರಸ್ತಾಪಿತ ವಿಶೇಷ ಅಧಿವೇಶನಕ್ಕೆ 20 ದಿನಗಳ ಮುನ್ನ ದಿಢೀರನೇ ಒಂದು ಹೈ-ಪವರ್ ಸಮಿತಿ ರಚಿಸಲಾಗಿ, ಅದರಲ್ಲಿ ರಾಜ್ಯಸಭೆಯ ವಿರೋಧಪಕ್ಷಗಳನ್ನು ಹೊರಗಿಟ್ಟು, ಹಳೆಯ ಜಿ-ಹುಜೂರ್‌ಗಳನ್ನು (ಆಜ್ಞೆಯನ್ನು ಪಾಲಿಸುವವರು) ತುಂಬಿಸಲಾಗಿ, ರಾತ್ರೋರಾತ್ರಿ ಸಮಿತಿಯ ಕೆಲಸ ಶುರುಮಾಡಲಾಗಿದೆ. ಇಷ್ಟಾದ ಮೇಲೆ ಇದರ ಹಿಂದೆ ಯಾವುದೇ ರಾಜಕೀಯ ಇಲ್ಲ ಎನ್ನುತ್ತೀರಿ, ನೀವು ಒಳ್ಳೇ ತಮಾಷೆ ಮಾಡ್ತೀರಿ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...