Homeಮುಖಪುಟ"ಒಂದು ದೇಶ ಒಂದು ಚುನಾವಣೆ": ಇದು ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳ ಮೊತ್ತವೋ?

“ಒಂದು ದೇಶ ಒಂದು ಚುನಾವಣೆ”: ಇದು ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳ ಮೊತ್ತವೋ?

- Advertisement -
- Advertisement -

ಭಾರತವು ಕಣ್ಕಟ್ಟುಗಳ ದೇಶವಾಗಿದೆ. ಈ ಸತ್ಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗಿಂತ ಚೆನ್ನಾಗಿ ಇನ್ಯಾರೂ ಅರಿತಿಲ್ಲ. ದೇಶದಲ್ಲಿ ಬೆಲೆಏರಿಕೆ ಇರಲಿ, ಅದಾನಿಯ ಹಗರಣವಿರಲಿ ಅಥವಾ ನಮ್ಮ ಭೂಮಿಯ ಮೇಲೆ ಚೀನಾದ ಆಕ್ರಮಣವಿರಲಿ- ಇವುಗಳ ಬಗ್ಗೆ ನೀವು ಚಿಂತಿಸಬೇಡಿ; ಒಂದು ಹೊಸ ಕಣ್ಕಟ್ಟನ್ನು ತೇಲಿಬಿಡಿ: “ಒಂದು ದೇಶ ಒಂದು ಚುನಾವಣೆ”. ಟಿವಿ ಚಾನೆಲ್‌ಗಳಿಗೆ ಸೂಚನೆ ನೀಡಿಬಿಡಿ. ಜನರು ತಮ್ಮ ಕಷ್ಟಗಳನ್ನು ಮರೆತು ಹೊಸ ನಾಟಕ ನೋಡಲು ಶುರುಮಾಡುತ್ತಾರೆ. ಅಲ್ಲಿಗೆ ಆಟವೂ ಮುಗೀತು, ವೋಟು ಕಬ್ಜಾ ಆಯಿತು.

ಮುಂಬರುವ ಲೋಕಸಭೆ ಚುನಾವಣೆಗೆ ಎಂಟು ತಿಂಗಳ ಮುನ್ನ “ಒಂದು ದೇಶ ಒಂದು ಚುನಾವಣೆ” ಎಂಬ ಹೆಸರಿನಲ್ಲಿ ಲಾಂಚ್ ಮಾಡಲಾದ ಕಣ್ಕಟ್ಟಿನ ಅಸಲಿಯತ್ತನ್ನು ಅರಿಯಲು, ಈ ಬಣ್ಣಬಣ್ಣ ಲಕೋಟೆಯನ್ನು ತೆರೆದು ಅದರಲ್ಲಿರುವ ಎಂಟು ಭ್ರಾಂತಿಗಳನ್ನು ಗುರುತಿಸಿ, ಅದರ ಹಿಂದಿರುವ ಸಂಪೂರ್ಣ ಸತ್ಯವನ್ನು ಅರಿಯುವ ಅವಶ್ಯಕತೆ ಇದೆ.

ಮೊದಲ ಭ್ರಾಂತಿ: “ಒಂದು ದೇಶ ಒಂದು ಚುನಾವಣೆ” ಎಂಬುದು ಒಂದು ಸಾಧಾರಣವಾದ ಆಡಳಿತಾತ್ಮಕ ಸುಧಾರಣೆಯಾಗಿದ್ದು, ಅದು ದೇಶದ ಚುನಾವಣಾ ಕ್ಯಾಲೆಂಡರ್‌ನಲ್ಲಿರುವ ಕೊರತೆಗಳನ್ನು ನೀಗಿಸುತ್ತದೆ.

ವಾಸ್ತವ: ಇಲ್ಲ ಸ್ವಾಮಿ, ಇದು ಯಾವುದೇ ಸಣ್ಣಪುಟ್ಟ ಆಡಳಿತಾತ್ಮಕ ಸುಧಾರಣೆ ಅಲ್ಲ. ಸದಾಕಾಲ ಲೋಕಸಭೆಯೊಂದಿಗೆ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕಾದರೆ ನಮ್ಮ ಸಂವಿಧಾನದ ಅಡಿಪಾಯದ ಮೂಲರೂಪವನ್ನೇ ಬದಲಿಸಬೇಕಾಗುತ್ತದೆ. ಇದು ಸಂವಿಧಾನದ ಬಹು ದೊಡ್ಡ ತಿದ್ದುಪಡಿಯಾಗುತ್ತದೆ.

ಎರಡನೆಯ ಭ್ರಾಂತಿ: ದೇಶದ ಏಕತೆ ಮತ್ತು ಚುನಾವಣೆಗಳಲ್ಲಿ ಏಕರೂಪತೆ ತರಲು ಇದೊಂದು ಸ್ವಾಭಾವಿಕ ಹೆಜ್ಜೆಯಾಗಿದೆ.

ವಾಸ್ತವ: ಇಲ್ಲಿ ’ಒಂದು ಚುನಾವಣೆ’ಯ ಅರ್ಥ ಒಂದೇ ಸಮಯಕ್ಕೆ ಚುನಾವಣೆ ಎಂದು. ಇದಕ್ಕೂ ಏಕತೆಗೂ ಅಥವಾ ಏಕರೂಪತೆಗೂ ಯಾವ ಸಂಬಂಧವೂ ಇಲ್ಲ. ಪಂಚಾಯತಿ ಮತ್ತು ನಗರ ಪಾಲಿಕೆಗಳ ಚುನಾವಣೆಗಳಲ್ಲಿ ಬಳಕೆಯಾಗುವ ಮತದಾರರ ಪಟ್ಟಿ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಳಕೆಯಾಗುವ ಪಟ್ಟಿ ಬೇರೆಯಾಗಿದ್ದು, ಅದನ್ನು ಒಂದೇ ಆಗಿಸಬೇಕಿದೆ. ವಾಸ್ತವದಲ್ಲಿ ದೇಶದಲ್ಲಿ ಚುನಾವಣಾ ಏಕರೂಪತೆಗೆ ಅವಶ್ಯಕತೆ ಇರುವುದು ಇಲ್ಲಿ. ಆದರೆ ಈ ಪ್ರಸ್ತಾಪದಲ್ಲಿ ಈ ಅವಶ್ಯಕ ಏಕರೂಪತೆಗಾಗಿ ಯಾವ ಸ್ಥಾನವೂ ಕಂಡುಬಂದಿಲ್ಲ.

ಮೂರನೆಯ ಭ್ರಾಂತಿ: ಇದೊಂದು ಸಾರ್ವತ್ರಿಕ ಪ್ರಸ್ತಾಪವಾಗಿದ್ದು, ಇದರ ಬಗ್ಗೆ ದೀರ್ಘಕಾಲದಿಂದ ರಾಷ್ಟ್ರೀಯ ಒಮ್ಮತಕ್ಕೆ ಬರಲಾಗಿದೆ.

ವಾಸ್ತವ: ಈ ಪ್ರಸ್ತಾಪವನ್ನು ಕಳೆದ ನಾಲ್ಕು ದಶಕಗಳಲ್ಲಿ ಪದೇಪದೇ ಮುಂದಿಡಲಾಗಿದೆ. ಕಾಲಕಾಲಕ್ಕೆ ಹಲವು ಸರಕಾರಿ ಸಮಿತಿಗಳು ಹಾಗೂ ಚುನಾವಣಾ ಆಯೋಗವು ಇದರ ಸಮರ್ಥನೆ ಮಾಡಿವೆ. ಆದರೆ, ಈ ಬಾರಿಯ ರೀತಿಯಲ್ಲಿಯೇ, ಅನೇಕ ಪಕ್ಷಗಳು ಮತ್ತು ವಿಶೇಷಜ್ಞರು ಇದನ್ನು ವಿರೋಧಿಸಿದ್ದಾರೆ. ಇಷ್ಟು ದೊಡ್ಡ ಸಾಂವಿಧಾನಿಕ ಬದಲಾವಣೆಯನ್ನು ಸರ್ವಪಕ್ಷಗಳ ಒಮ್ಮತವಿಲ್ಲದೇ ಅನುಷ್ಠಾನಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ.

ನಾಲ್ಕನೆಯ ಭ್ರಾಂತಿ: ಸಂವಿಧಾನ ಅನುಷ್ಠಾನಗೊಂಡ ನಂತರ ಆರಂಭದಲ್ಲಿ “ಒಂದು ದೇಶ ಒಂದು ಚುನಾವಣೆ”ಯ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದವು. ನಂತರ ಚುನಾವಣಾ ಚಕ್ರ ಬೇರೆ ಬೇರೆಯಾಗಿದ್ದ ಕಾರಣದಿಂದ ವಿಕೃತಿ ಹುಟ್ಟಿಕೊಂಡಿದೆ.

ಪೂರ್ಣ ಸತ್ಯ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಬೇರೆ ಬೇರೆ ಕಾಲದಲ್ಲಿ ಚುನಾವಣೆ ಆಗುವುದು ಯಾವ ವಿಕೃತಿಯೂ ಅಲ್ಲ. ಅದರ ಬದಲಿಗೆ ನಮ್ಮ ಸಾಂವಿಧಾನಿಕ ಅಡಿಪಾಯದ ಎರಡು ಮೂಲಭೂತ ತತ್ವಗಳ (ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ) ಸ್ವಾಭಾವಿಕ ಪರಿಣಾಮವಾಗಿದೆ. ಆರಂಭದಲ್ಲಿ ಎರಡೂ ಚುನಾವಣೆಗಳು ಒಂದೇಕಾಲಕ್ಕೆ ಆಗಲೇಬೇಕಿತ್ತು ಏಕೆಂದರೆ, ಆರಂಭದಲ್ಲಿ ಏಕಕಾಲಕ್ಕೆ ಆಗುವುದು ಸ್ವಾಭಾವಿಕವಾಗಿತ್ತು. ಸಂವಿಧಾನದ ರಚನಾಕಾರರು ಇದನ್ನು ಅರಿತಿದ್ದರು. ಚಿಕಿತ್ಸೆ ನೀಡಬೇಕಾದಂತಹ ಯಾವ ವಿಕೃತಿಯೂ ಇದರಲ್ಲಿ ಇಲ್ಲ.

ಇದನ್ನೂ ಓದಿ: ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಐದನೆಯ ಭ್ರಾಂತಿ: ಏಕಕಾಲಕ್ಕೆ ಚುನಾವಣೆ ನಡೆಸುವುದರಿಂದ ಸರಕಾರದ ಚುನಾವಣಾ ವೆಚ್ಚ ತುಂಬಾ ಕಡಿಮೆಯಾಗಲಿದೆ.

ವಾಸ್ತವ: ಸ್ವಾಭಾವಿಕವಾಗಿಯೇ ಬೇರೆಬೇರೆ ಚುನಾವಣೆ ನಡೆಸುವುದರ ಬದಲಿಗೆ ಒಂದೇ ಬಾರಿ ಚುನಾವಣೆ ನಡೆಸುವುದರಿಂದ ಸರಕಾರಿ ವೆಚ್ಚದಲ್ಲಿ ಉಳಿತಾಯವಾಗುವುದು, ಆದರೆ ಪ್ರಶ್ನೆ ಇರುವುದು, ಎಷ್ಟು? ಈ ರೀತಿಯಲ್ಲಿ ಚುನಾವಣೆ ನಡೆಸುವುದರಿಂದ ಹೆಚ್ಚೆಂದರೆ ಐದು ವರ್ಷಗಳಲ್ಲಿ 5,000 ಕೋಟಿ ಉಳಿತಾಯ ಆಗಬಲ್ಲದು. ಈ ಮೊತ್ತ ಮುಂದಿನ ಐದು ವರ್ಷಗಳ ಕೇಂದ್ರೀಯ ಬಜೆಟ್‌ನ 0.02%ಆಗಲಿದೆ ಅಂದರೆ 100 ರೂಪಾಯಿಗಳಲ್ಲಿ ಐದು ಪೈಸೆ ಬಳಸಿದಂತೆ. ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣೆಗಳಲ್ಲಿ ಎಷ್ಟು ಖರ್ಚು ಮಾಡುತ್ತಾರೋ, ಅದನ್ನು ನೋಡಿದರೆ. ಈ ಸರಕಾರಿ ವೆಚ್ಚವು ಏನೇನೂ ಅಲ್ಲ.

ಆರನೆಯ ಭ್ರಾಂತಿ: ಪದೇಪದೇ ಚುನಾವಣೆ ನಡೆಸುವಾಗ ನೀತಿಸಂಹಿತೆ ಜಾರಿಯಾಗುವುದರಿಂದ ಸರಕಾರಿ ಕೆಲಸಗಳು ನಿಂತುಕೊಳ್ಳುತ್ತವೆ, ಸರಕಾರಗಳ ಮೇಲೆ ಸದಾಕಾಲ ಚುನಾವಣೆಗಳ ಒತ್ತಡ ಇರುತ್ತದೆ. ಈ ಸಮಸ್ಯೆಗೆ ಇದೊಂದೇ ಪರಿಹಾರ.

ವಾಸ್ತವ: ಈ ಮಾತಿನಲ್ಲಿ ಒಂದಿಷ್ಟು ಸತ್ಯಾಂಶವಿದೆ. ಆದರೆ ಈ ಸಮಸ್ಯೆ ಪರಿಹರಿಸಲು ಇನ್ನೂ ಸುಲಭವಾದ ಮಾರ್ಗಗಳಿವೆ. ಸದ್ಯಕ್ಕೆ ಐದು ವರ್ಷಗಳಲ್ಲಿ ಕನಿಷ್ಠ ಎಂಟು ಬಾರಿ ದೊಡ್ಡ ರಾಜ್ಯಗಳ ಚುನಾವಣೆ ನಡೆಯುತ್ತವೆ. ಇದನ್ನು ಕಡಿಮೆ ಮಾಡಲು, ಒಂದು ವರ್ಷದಲ್ಲಿ ಬರುವ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡಬಹುದಾಗಿದೆ. ಆಯಾ ರಾಜ್ಯಗಳಿಗೆ ವಿಶೇಷ ಸಂಬಂಧವಿಲ್ಲದೇ ಇದ್ದರೆ ಕೇಂದ್ರ ಸರಕಾರದ ಎಲ್ಲಾ ತೀರ್ಮಾನಗಳನ್ನು ನಿಲ್ಲಿಸದೇ ಇರುವಂತೆ ನೀತಿ ಸಂಹಿತೆಯಲ್ಲಿ ತಿದ್ದುಪಡಿ ಮಾಡಬೇಕಿದೆ. ರಾಜ್ಯ ಚುನಾವಣೆಗಳನ್ನು ಹಲವಾರು ಸುತ್ತುಗಳಲ್ಲಿ ಮಾಡುವುದರ ಬದಲಿಗೆ ಒಂದು ಅಥವಾ ಎರಡು ಸುತ್ತಿನಲ್ಲಿ ಮಾಡುವುದರಿಂದ ಚುನಾವಣೆಯ ಅವಧಿಯನ್ನು ಕಡಿಮೆ ಮಾಡಬಹುದಾಗಿದೆ.

ಏಳನೆಯ ಭ್ರಾಂತಿ: ಈ ಪ್ರಸ್ತಾಪದಲ್ಲಿ ಹೆಚ್ಚಿನ ಲಾಭ ಇಲ್ಲವೆಂದಿಟ್ಟುಕೊಂಡರೂ, ಯಾವುದೇ ನಷ್ಟವೂ ಇಲ್ಲ.

ವಾಸ್ತವ: ನಷ್ಟ ಇದೆ, ಅದೇನೆಂದರೆ, ಇದರಿಂದ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯ ಕುಸಿದುಬೀಳುತ್ತದೆ. ಒಂದುವೇಳೆ ಯಾವುದೋ ರಾಜ್ಯದಲ್ಲಿ ಸರಕಾರವು ವಿಧಾನಸಭೆಯಲ್ಲಿ ಬಹುಮತ ವಿಶ್ವಾಸ ಕಳೆದುಕೊಳ್ಳುತ್ತದೆ ಹಾಗೂ ಇತರ ಯಾವ ಪಕ್ಷಕ್ಕೂ ಬಹುಮತ ಇಲ್ಲದಿರುವ ಸಂದರ್ಭದಲ್ಲಿ ಏನಾಗುವುದು? ಬಜೆಟ್ ಜಾರಿಗೊಳಿಸಲಾಗದ, ದುಡ್ಡು ಖರ್ಚು ಮಾಡುವ ಅಧಿಕಾರವಿಲ್ಲದ ಆ ಸರಕಾರವು ಐದು ವರ್ಷ ಮುಂದುವರಿಯುವಂತೆ ಮಾಡಲಾಗುವುದೇ? ಅಥವಾ ವಿಧಾನಸಭೆಯನ್ನು ವಿಸರ್ಜಿಸಿ, ಹಲವಾರು ವರ್ಷಗಳ ತನಕ ರಾಜ್ಯಪಾಲರ ಆಳ್ವಕೆ ನಡೆಯುವುದೇ? ಹಾಗೂ ಒಂದುವೇಳೆ ಈ ರೀತಿ ಕೇಂದ್ರದಲ್ಲಿ ಆದರೆ ಏನಾಗುವುದು? ಇದು ಪ್ರಜಾಪ್ರಭುತ್ವದೊಂದಿಗೆ ಆಟವಾಡಿದಂತೆ.

ಎಂಟನೆಯ ಭ್ರಾಂತಿ: ಇದು ಚುನಾವಣಾ ಸುಧಾರಣೆಯ ನಿಜವಾದ ಪ್ರಯತ್ನವಾಗಿದೆ. ಇದಕ್ಕೂ ರಾಜಕೀಯಕ್ಕೂ ಯಾವ ಸಂಬಂಧವೂ ಇಲ್ಲ.

ವಾಸ್ತವ: ಒಂದು ವೇಳೆ ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದಲ್ಲಿ, ಕಳೆದ 25 ವರ್ಷಗಳಲ್ಲಿ ಪದೇಪದೇ ಕೇವಲ ಬಿಜೆಪಿ ಮತ್ತು ಅದರ ನಾಯಕರೇ ಈ ಪ್ರಸ್ತಾಪದ ವಕಾಲತ್ತು ಮಾಡುತ್ತಿರುವುದು ಏಕೆ? ಒಂದು ವೇಳೆ ಲೋಕಸಭೆಗೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆದರೆ ರಾಷ್ಟ್ರೀಯ ಚುನಾವಣೆಯ ವಾತಾವರಣ ಸೃಷ್ಟಿಯಾಗಿ, ವಿಧಾನಸಭೆಯ ಚುನಾವಣೆಯಲ್ಲಿಯೂ ದೊಡ್ಡ ರಾಷ್ಟ್ರೀಯ ಪಕ್ಷಕ್ಕೆ ಹೆಚ್ಚಿನ ಮತಗಳು ಸಿಗುತ್ತವೆ ಎಂಬುದು ಸ್ವಾಭಾವಿಕ ಹಾಗೂ ಇಂದಿನ ಸಂದರ್ಭದಲ್ಲಿ ಹೆಚ್ಚಿನ ಲಾಭ ಬಿಜೆಪಿಗೆ ಆಗುತ್ತದೆ ಎಂಬುದು ಸಹಜವಾಗಿದೆ. ಅಲ್ಲದೇ ಯೋಚಿಸಿ, ಒಂದುವೇಳೆ ಈ ಪ್ರಸ್ತಾಪದ ಹಿಂದಿನ ಉದ್ದೇಶ ಶುದ್ಧ ರಾಜಕೀಯ ಸುಧಾರಣೆಯೇ ಆಗಿದ್ದರೆ, 2019ರಲ್ಲಿ ಪ್ರಧಾನಮಂತ್ರಿ ಇದರ ವಕಾಲತ್ತು ವಹಿಸಿದ್ದಾಗ ಈ ಸಮಿತಿಯನ್ನು ಏಕೆ ರಚಿಸಲಿಲ್ಲ? ಲೋಕಸಭೆ ಚುನಾವಣೆಗೆ ಕೇವಲ ಎಂಟು ತಿಂಗಳ ಮುನ್ನ ಹಾಗೂ ಸಂಸತ್ತಿನ ಪ್ರಸ್ತಾಪಿತ ವಿಶೇಷ ಅಧಿವೇಶನಕ್ಕೆ 20 ದಿನಗಳ ಮುನ್ನ ದಿಢೀರನೇ ಒಂದು ಹೈ-ಪವರ್ ಸಮಿತಿ ರಚಿಸಲಾಗಿ, ಅದರಲ್ಲಿ ರಾಜ್ಯಸಭೆಯ ವಿರೋಧಪಕ್ಷಗಳನ್ನು ಹೊರಗಿಟ್ಟು, ಹಳೆಯ ಜಿ-ಹುಜೂರ್‌ಗಳನ್ನು (ಆಜ್ಞೆಯನ್ನು ಪಾಲಿಸುವವರು) ತುಂಬಿಸಲಾಗಿ, ರಾತ್ರೋರಾತ್ರಿ ಸಮಿತಿಯ ಕೆಲಸ ಶುರುಮಾಡಲಾಗಿದೆ. ಇಷ್ಟಾದ ಮೇಲೆ ಇದರ ಹಿಂದೆ ಯಾವುದೇ ರಾಜಕೀಯ ಇಲ್ಲ ಎನ್ನುತ್ತೀರಿ, ನೀವು ಒಳ್ಳೇ ತಮಾಷೆ ಮಾಡ್ತೀರಿ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...