Homeಮುಖಪುಟಪ್ರಸ್ತುತ ಸಂವಿಧಾನದ ಅಡಿಯಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಸಾಧ್ಯವಿಲ್ಲ: ಪಿ. ಚಿದಂಬರಂ

ಪ್ರಸ್ತುತ ಸಂವಿಧಾನದ ಅಡಿಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಧ್ಯವಿಲ್ಲ: ಪಿ. ಚಿದಂಬರಂ

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿಷಯದ ಕುರಿತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಪಿ ಚಿದಂಬರಂ ವಾಗ್ದಾಳಿ ನಡೆಸಿದ್ದು, “ಪ್ರಸ್ತುತ ಸಂವಿಧಾನದ ಅಡಿಯಲ್ಲಿ ಇದು ಸಾಧ್ಯವಿಲ್ಲ, ಕನಿಷ್ಠ ಐದು ಸಾಂವಿಧಾನಿಕ ತಿದ್ದುಪಡಿಗಳ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ ಪ್ರಸ್ತುತ ಅಧಿಕಾರಾವಧಿಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ಜಾರಿಗೆ ತರಲಿದೆ ಎಂಬ ವರದಿಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಾಂವಿಧಾನಿಕ ತಿದ್ದುಪಡಿಗಳನ್ನು ಲೋಕಸಭೆ ಅಥವಾ ರಾಜ್ಯಗಳಲ್ಲಿ ಮಂಡಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಂಖ್ಯೆ (ಬಹುಮತ) ಇಲ್ಲ ಎಂದು ಹೇಳಿದರು.

ಕಳೆದ ತಿಂಗಳು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಾತನಾಡಿದ್ದ ಪ್ರಧಾನಿಯವರು, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಾತನಾಡಿದ್ದರು. ಆಗಾಗ್ಗೆ ಚುನಾವಣೆಗಳು ದೇಶದ ಪ್ರಗತಿಯಲ್ಲಿ ಅಡಚಣೆಗಳನ್ನು ಸೃಷ್ಟಿಸುತ್ತಿವೆ ಎಂದು ಅವರು ಪ್ರತಿಪಾದಿಸಿದ್ದರು.

ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಚಿದಂಬರಂ, “‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತುತ ಸಂವಿಧಾನದ ಅಡಿಯಲ್ಲಿ ಸಾಧ್ಯವಿಲ್ಲ. ಇದಕ್ಕೆ ಕನಿಷ್ಠ ಐದು ಸಾಂವಿಧಾನಿಕ ತಿದ್ದುಪಡಿಗಳ ಅಗತ್ಯವಿದೆ. ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ಸಾಂವಿಧಾನಿಕ ತಿದ್ದುಪಡಿಗಳನ್ನು ಹಾಕಲು ಮೋದಿಗೆ ಬಹುಮತವಿಲ್ಲ” ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಹೆಚ್ಚಿನ ಸಾಂವಿಧಾನಿಕ ಅಡೆತಡೆಗಳಿವೆ ಎಂದು ಅವರು ಪ್ರತಿಪಾದಿಸಿದರು. “ಅದು ಸಾಧ್ಯವಿಲ್ಲ; ಇಂಡಿಯಾ ಬಣವು ‘ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತದೆ” ಎಂದರು.

‘ಮೀಸಲಾತಿಯನ್ನು ಕೊನೆಗೊಳಿಸಲು ಕಾಂಗ್ರೆಸ್ ಬಯಸುತ್ತಿದೆ’ ಎಂದು ಇತ್ತೀಚೆಗೆ ಪ್ರಧಾನಿ ಮೋದಿ ಆರೋಪವನ್ನು ಚಿದಂಬರಂ ತಿರಸ್ಕರಿಸಿದರು. “ನಾವು ಮೀಸಲಾತಿಯನ್ನು ಏಕೆ ರದ್ದುಗೊಳಿಸಬೇಕು” ಎಂದು ಅವರು ಪ್ರಶ್ನಿಸಿದರು.

ಶೇ.50 ರಷ್ಟು ಮೀಸಲಾತಿ ಮಿತಿಯನ್ನು ತೆಗೆದುಹಾಕಬೇಕು ಎಂದು ಹೇಳುತ್ತಿರುವವರು ನಾವು, ಜಾತಿ ಗಣತಿ ಕೇಳುವವರು ನಾವು, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ನಾವು ಹೇಳುತ್ತೇವೆ, ಎಲ್ಲವನ್ನೂ ನಂಬಬೇಡಿ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಸೆಪ್ಟೆಂಬರ್ 15 ರಂದು ಕುರುಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ, ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು, “ಕಾಂಗ್ರೆಸ್‌ನ ರಾಜಮನೆತನ ದಲಿತರಿಗೆ ಮೀಸಲಾತಿಯನ್ನು ಕೊನೆಗೊಳಿಸುವ ಉದ್ದೇಶವನ್ನು ಹೊಂದಿದೆ, ನಾನು ಇರುವವರೆಗೂ ಮೀಸಲಾತಿಯ ಒಂದು ಭಾಗವನ್ನು ಸಹ ಬಿಡುವುದಿಲ್ಲ” ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ; ರಾಹುಲ್ ಗಾಂಧಿ ನಾಲಿಗೆ ಕಡಿಯುವವರಿಗೆ ₹11 ಲಕ್ಷ ನೀಡುತ್ತೇನೆ ಎಂದ ಶಿವಸೇನೆ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...