Homeಮುಖಪುಟಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

’ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳ ಅಧಿಕಾರವನ್ನು -ಬಲವನ್ನು ಕುಂದಿಸುವ ಕೆಲಸ’ ಎಂದು ಚಿಂತಕರು ಆರೋಪಿಸಿದ್ದಾರೆ.

- Advertisement -
- Advertisement -

ದೇಶದಾದ್ಯಂತ ಪ್ರತಿ ತಿಂಗಳು ಚುನಾವಣೆಗಳು ನಡೆಯುತ್ತಿರುವುದರಿಂದ ಸಮಯ, ಹಣ ಎರಡು ವ್ಯರ್ಥವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿವೆ. ಹಾಗಾಗಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಭಾರತದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 80ನೇ ಅಖಿಲ ಭಾರತ ಅಧ್ಯಕ್ಷರ ಸಮ್ಮೇಳನ ಉದ್ದೇಶಿಸಿ ಮಾತನಾಡುವ ವೇಳೆ, 26/11 ಮುಂಬೈ ದಾಳಿಯ ಸಂತ್ರಸ್ತರಿಗೆ ಗೌರವ ಸಲ್ಲಿಸಿದರು. ಜೊತೆಗೆ ಹೊಸ ನೀತಿ ಮತ್ತು ಹೊಸ ಪ್ರಕ್ರಿಯೆಯೊಂದಿಗೆ ಭಾರತ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರಧಾನಿ, “ಪ್ರತಿ ಕೆಲವು ತಿಂಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತವೆ, ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಆದ್ದರಿಂದ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವುದು ಅತ್ಯಗತ್ಯ”ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ ಒಂದು ಚುನಾವಣೆ’ ಎನ್ನುವ ಅಪಾಯಕಾರಿ ರಣತಂತ್ರ

ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಮಾಡುವುದು ಉತ್ತಮ, ಪ್ರತ್ಯೇಕ ಮತದಾರರ ಪಟ್ಟಿಗಳಿಂದ ಸಂಪನ್ಮೂಲಗಳ ವ್ಯರ್ಥ ಎಂದು ಪ್ರಧಾನಿ ಸೂಚಿಸಿದ್ದಾರೆ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಚಿಂತನೆ ಬಗ್ಗೆ ತಿಳಿಸಿದ್ದರು.

ಪ್ರಧಾನ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) “ಒಂದು ರಾಷ್ಟ್ರ, ಒಂದು ಚುನಾವಣೆ” ಬಗ್ಗೆ ಮಾತನಾಡುತ್ತಿವೆ. ಅದು ಒಂದೇ ರೀತಿಯ ಸಂಪನ್ಮೂಲಗಳನ್ನು ಎಲ್ಲರಿಗೂ ನೀಡುವುದು ಮತ್ತು ಯಾವಾಗಲೂ ಚುನಾವಣಾ ವಿಚಾರಗಳಲ್ಲಿ ಸರ್ಕಾರಗಳು ತೊಡಗಿಕೊಳ್ಳುವ ಬದಲು ಆಡಳಿತಕ್ಕೆ ಹೆಚ್ಚಿನ ಸಮಯ ನೀಡುಲಾಗುತ್ತದೆ ಎಂದು ವಾದಿಸಿವೆ.

ಪ್ರತಿಪಕ್ಷಗಳು ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿವೆ, ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕ, ಇದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನದ ವಿರುದ್ಧ ಮತ್ತು ಅಪ್ರಾಯೋಗಿಕ ಎಂದು ವಾದಿಸಿದ್ದವು. ’ಈ ಯೋಜನೆ ಮೂಲಕ ಸಂಸತ್ತಿನ ಪ್ರಜಾಪ್ರಭುತ್ವವನ್ನು ಬದಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಪಿಎಂ ಆರೋಪಿಸಿತ್ತು.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ!

ನಮ್ಮ ಸಂವಿಧಾನ ಭಾರತ ಎಂಬ ಗಣರಾಜ್ಯಕ್ಕೆ ಕೊಡುವ ಸಾರ್ವಭೌಮತೆಯನ್ನು ಪ್ರತಿ ರಾಜ್ಯಕ್ಕೂ ನೀಡಿದೆ. ಆದುದರಿಂದ ಪ್ರತಿ ರಾಜ್ಯವು ವಿಶಿಷ್ಟ. ಪ್ರತಿ ರಾಜ್ಯದ ಅನನ್ಯತೆಯಂತೆ ಪ್ರತಿ ರಾಜ್ಯದ ಸಮಸ್ಯೆಗಳು ಬೇರೆ ಬೇರೆ. ಆ ಅನನ್ಯತೆ ಕಾಯ್ದುಕೊಳ್ಳುವುದು ಮತ್ತು ನಮಗೆ ಹತ್ತಿರವಾದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಬೇಕು, ಅಂತಾದಕ್ಕೆ ಒತ್ತುನೀಡುವ ಜನಪ್ರತಿನಿಧಿಗಳನ್ನು, ಅಂತಹ ಪಕ್ಷಗಳನ್ನು ಆಯ್ಕೆ ಮಾಡುವ ಮತ್ತು ಬೇಕಿದ್ದಲ್ಲಿ ಬದಲಿಸುವ ಅವಕಾಶ ರಾಜ್ಯಕ್ಕೆ ರಾಜ್ಯದ ಜನತೆಗೆ ಇರಬೇಕು, ಮತ್ತು ಆ ಕೆಲಸಕ್ಕೆ ಅಗತ್ಯವಾದ ಸಮಯ ಮತ್ತು ಕಾಲವೂ ಅಗತ್ಯ. ಇದನ್ನು ಕಸಿಯುವ ಹುನ್ನಾರವೇ ಒಂದು ದೇಶ – ಒಂದು ಚುನಾವಣೆಯ ರಣತಂತ್ರ. –  ಗುರುಪ್ರಸಾದ್ ಡಿ.ಎನ್ 

ಈಗ ಮತ್ತೆ ಪ್ರಧಾನ ಮಂತ್ರಿ ಮೋದಿ ’ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ತಮ್ಮ ಹಳೆಯ ಯೋಜನೆಯನ್ನು ಮುಂಡಿಟ್ಟುಕೊಂಡು ಬಂದಿದ್ದಾರೆ. ದೇಶದ ಸಂಪತ್ತು, ಸಮಯ ಉಳಿಸಲು ಈ ಯೋಜನೆ ಮುಖ್ಯ ಎನ್ನುತ್ತಿದ್ದಾರೆ. ಆದರೆ, ಇದು ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳ ಅಧಿಕಾರವನ್ನು -ಬಲವನ್ನು ಕುಂದಿಸುವ ಕೆಲಸ ಎಂದು ಚಿಂತಕರು ಆರೋಪಿಸಿದ್ದಾರೆ.

ಅಧ್ಯಕ್ಷೀಯ ಮಾದರಿಯ ಎರಡು ನಾಯಕರ ನಡುವಿನ ಮಹಾಸಮರ ಎಂಬಂತೆ ಬಿಂಬಿಸುವಂತಹ ಚುನಾವಣಾ ಮಾದರಿಯನ್ನು ರಾಜ್ಯ ಸರ್ಕಾರಗಳ ಚುನಾವಣೆಯ ಜೊತೆಗೆ ತಳುಕು ಹಾಕುವ ಈ ರಣತಂತ್ರ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ:  ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....