Homeಮುಖಪುಟಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

’ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳ ಅಧಿಕಾರವನ್ನು -ಬಲವನ್ನು ಕುಂದಿಸುವ ಕೆಲಸ’ ಎಂದು ಚಿಂತಕರು ಆರೋಪಿಸಿದ್ದಾರೆ.

- Advertisement -
- Advertisement -

ದೇಶದಾದ್ಯಂತ ಪ್ರತಿ ತಿಂಗಳು ಚುನಾವಣೆಗಳು ನಡೆಯುತ್ತಿರುವುದರಿಂದ ಸಮಯ, ಹಣ ಎರಡು ವ್ಯರ್ಥವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿವೆ. ಹಾಗಾಗಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಭಾರತದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 80ನೇ ಅಖಿಲ ಭಾರತ ಅಧ್ಯಕ್ಷರ ಸಮ್ಮೇಳನ ಉದ್ದೇಶಿಸಿ ಮಾತನಾಡುವ ವೇಳೆ, 26/11 ಮುಂಬೈ ದಾಳಿಯ ಸಂತ್ರಸ್ತರಿಗೆ ಗೌರವ ಸಲ್ಲಿಸಿದರು. ಜೊತೆಗೆ ಹೊಸ ನೀತಿ ಮತ್ತು ಹೊಸ ಪ್ರಕ್ರಿಯೆಯೊಂದಿಗೆ ಭಾರತ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರಧಾನಿ, “ಪ್ರತಿ ಕೆಲವು ತಿಂಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತವೆ, ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಆದ್ದರಿಂದ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವುದು ಅತ್ಯಗತ್ಯ”ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ ಒಂದು ಚುನಾವಣೆ’ ಎನ್ನುವ ಅಪಾಯಕಾರಿ ರಣತಂತ್ರ

ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಮಾಡುವುದು ಉತ್ತಮ, ಪ್ರತ್ಯೇಕ ಮತದಾರರ ಪಟ್ಟಿಗಳಿಂದ ಸಂಪನ್ಮೂಲಗಳ ವ್ಯರ್ಥ ಎಂದು ಪ್ರಧಾನಿ ಸೂಚಿಸಿದ್ದಾರೆ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಚಿಂತನೆ ಬಗ್ಗೆ ತಿಳಿಸಿದ್ದರು.

ಪ್ರಧಾನ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) “ಒಂದು ರಾಷ್ಟ್ರ, ಒಂದು ಚುನಾವಣೆ” ಬಗ್ಗೆ ಮಾತನಾಡುತ್ತಿವೆ. ಅದು ಒಂದೇ ರೀತಿಯ ಸಂಪನ್ಮೂಲಗಳನ್ನು ಎಲ್ಲರಿಗೂ ನೀಡುವುದು ಮತ್ತು ಯಾವಾಗಲೂ ಚುನಾವಣಾ ವಿಚಾರಗಳಲ್ಲಿ ಸರ್ಕಾರಗಳು ತೊಡಗಿಕೊಳ್ಳುವ ಬದಲು ಆಡಳಿತಕ್ಕೆ ಹೆಚ್ಚಿನ ಸಮಯ ನೀಡುಲಾಗುತ್ತದೆ ಎಂದು ವಾದಿಸಿವೆ.

ಪ್ರತಿಪಕ್ಷಗಳು ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿವೆ, ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕ, ಇದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನದ ವಿರುದ್ಧ ಮತ್ತು ಅಪ್ರಾಯೋಗಿಕ ಎಂದು ವಾದಿಸಿದ್ದವು. ’ಈ ಯೋಜನೆ ಮೂಲಕ ಸಂಸತ್ತಿನ ಪ್ರಜಾಪ್ರಭುತ್ವವನ್ನು ಬದಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಪಿಎಂ ಆರೋಪಿಸಿತ್ತು.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ!

ನಮ್ಮ ಸಂವಿಧಾನ ಭಾರತ ಎಂಬ ಗಣರಾಜ್ಯಕ್ಕೆ ಕೊಡುವ ಸಾರ್ವಭೌಮತೆಯನ್ನು ಪ್ರತಿ ರಾಜ್ಯಕ್ಕೂ ನೀಡಿದೆ. ಆದುದರಿಂದ ಪ್ರತಿ ರಾಜ್ಯವು ವಿಶಿಷ್ಟ. ಪ್ರತಿ ರಾಜ್ಯದ ಅನನ್ಯತೆಯಂತೆ ಪ್ರತಿ ರಾಜ್ಯದ ಸಮಸ್ಯೆಗಳು ಬೇರೆ ಬೇರೆ. ಆ ಅನನ್ಯತೆ ಕಾಯ್ದುಕೊಳ್ಳುವುದು ಮತ್ತು ನಮಗೆ ಹತ್ತಿರವಾದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಬೇಕು, ಅಂತಾದಕ್ಕೆ ಒತ್ತುನೀಡುವ ಜನಪ್ರತಿನಿಧಿಗಳನ್ನು, ಅಂತಹ ಪಕ್ಷಗಳನ್ನು ಆಯ್ಕೆ ಮಾಡುವ ಮತ್ತು ಬೇಕಿದ್ದಲ್ಲಿ ಬದಲಿಸುವ ಅವಕಾಶ ರಾಜ್ಯಕ್ಕೆ ರಾಜ್ಯದ ಜನತೆಗೆ ಇರಬೇಕು, ಮತ್ತು ಆ ಕೆಲಸಕ್ಕೆ ಅಗತ್ಯವಾದ ಸಮಯ ಮತ್ತು ಕಾಲವೂ ಅಗತ್ಯ. ಇದನ್ನು ಕಸಿಯುವ ಹುನ್ನಾರವೇ ಒಂದು ದೇಶ – ಒಂದು ಚುನಾವಣೆಯ ರಣತಂತ್ರ. –  ಗುರುಪ್ರಸಾದ್ ಡಿ.ಎನ್ 

ಈಗ ಮತ್ತೆ ಪ್ರಧಾನ ಮಂತ್ರಿ ಮೋದಿ ’ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ತಮ್ಮ ಹಳೆಯ ಯೋಜನೆಯನ್ನು ಮುಂಡಿಟ್ಟುಕೊಂಡು ಬಂದಿದ್ದಾರೆ. ದೇಶದ ಸಂಪತ್ತು, ಸಮಯ ಉಳಿಸಲು ಈ ಯೋಜನೆ ಮುಖ್ಯ ಎನ್ನುತ್ತಿದ್ದಾರೆ. ಆದರೆ, ಇದು ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳ ಅಧಿಕಾರವನ್ನು -ಬಲವನ್ನು ಕುಂದಿಸುವ ಕೆಲಸ ಎಂದು ಚಿಂತಕರು ಆರೋಪಿಸಿದ್ದಾರೆ.

ಅಧ್ಯಕ್ಷೀಯ ಮಾದರಿಯ ಎರಡು ನಾಯಕರ ನಡುವಿನ ಮಹಾಸಮರ ಎಂಬಂತೆ ಬಿಂಬಿಸುವಂತಹ ಚುನಾವಣಾ ಮಾದರಿಯನ್ನು ರಾಜ್ಯ ಸರ್ಕಾರಗಳ ಚುನಾವಣೆಯ ಜೊತೆಗೆ ತಳುಕು ಹಾಕುವ ಈ ರಣತಂತ್ರ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ:  ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...