Homeಮುಖಪುಟಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಮತ್ತೊಮ್ಮೆ’ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪಿಸಿದ ಪ್ರಧಾನಿ ಮೋದಿ

’ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳ ಅಧಿಕಾರವನ್ನು -ಬಲವನ್ನು ಕುಂದಿಸುವ ಕೆಲಸ’ ಎಂದು ಚಿಂತಕರು ಆರೋಪಿಸಿದ್ದಾರೆ.

- Advertisement -
- Advertisement -

ದೇಶದಾದ್ಯಂತ ಪ್ರತಿ ತಿಂಗಳು ಚುನಾವಣೆಗಳು ನಡೆಯುತ್ತಿರುವುದರಿಂದ ಸಮಯ, ಹಣ ಎರಡು ವ್ಯರ್ಥವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿವೆ. ಹಾಗಾಗಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಭಾರತದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 80ನೇ ಅಖಿಲ ಭಾರತ ಅಧ್ಯಕ್ಷರ ಸಮ್ಮೇಳನ ಉದ್ದೇಶಿಸಿ ಮಾತನಾಡುವ ವೇಳೆ, 26/11 ಮುಂಬೈ ದಾಳಿಯ ಸಂತ್ರಸ್ತರಿಗೆ ಗೌರವ ಸಲ್ಲಿಸಿದರು. ಜೊತೆಗೆ ಹೊಸ ನೀತಿ ಮತ್ತು ಹೊಸ ಪ್ರಕ್ರಿಯೆಯೊಂದಿಗೆ ಭಾರತ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರಧಾನಿ, “ಪ್ರತಿ ಕೆಲವು ತಿಂಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತವೆ, ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಆದ್ದರಿಂದ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವುದು ಅತ್ಯಗತ್ಯ”ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ ಒಂದು ಚುನಾವಣೆ’ ಎನ್ನುವ ಅಪಾಯಕಾರಿ ರಣತಂತ್ರ

ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಮಾಡುವುದು ಉತ್ತಮ, ಪ್ರತ್ಯೇಕ ಮತದಾರರ ಪಟ್ಟಿಗಳಿಂದ ಸಂಪನ್ಮೂಲಗಳ ವ್ಯರ್ಥ ಎಂದು ಪ್ರಧಾನಿ ಸೂಚಿಸಿದ್ದಾರೆ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಚಿಂತನೆ ಬಗ್ಗೆ ತಿಳಿಸಿದ್ದರು.

ಪ್ರಧಾನ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) “ಒಂದು ರಾಷ್ಟ್ರ, ಒಂದು ಚುನಾವಣೆ” ಬಗ್ಗೆ ಮಾತನಾಡುತ್ತಿವೆ. ಅದು ಒಂದೇ ರೀತಿಯ ಸಂಪನ್ಮೂಲಗಳನ್ನು ಎಲ್ಲರಿಗೂ ನೀಡುವುದು ಮತ್ತು ಯಾವಾಗಲೂ ಚುನಾವಣಾ ವಿಚಾರಗಳಲ್ಲಿ ಸರ್ಕಾರಗಳು ತೊಡಗಿಕೊಳ್ಳುವ ಬದಲು ಆಡಳಿತಕ್ಕೆ ಹೆಚ್ಚಿನ ಸಮಯ ನೀಡುಲಾಗುತ್ತದೆ ಎಂದು ವಾದಿಸಿವೆ.

ಪ್ರತಿಪಕ್ಷಗಳು ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿವೆ, ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕ, ಇದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನದ ವಿರುದ್ಧ ಮತ್ತು ಅಪ್ರಾಯೋಗಿಕ ಎಂದು ವಾದಿಸಿದ್ದವು. ’ಈ ಯೋಜನೆ ಮೂಲಕ ಸಂಸತ್ತಿನ ಪ್ರಜಾಪ್ರಭುತ್ವವನ್ನು ಬದಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಪಿಎಂ ಆರೋಪಿಸಿತ್ತು.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ!

ನಮ್ಮ ಸಂವಿಧಾನ ಭಾರತ ಎಂಬ ಗಣರಾಜ್ಯಕ್ಕೆ ಕೊಡುವ ಸಾರ್ವಭೌಮತೆಯನ್ನು ಪ್ರತಿ ರಾಜ್ಯಕ್ಕೂ ನೀಡಿದೆ. ಆದುದರಿಂದ ಪ್ರತಿ ರಾಜ್ಯವು ವಿಶಿಷ್ಟ. ಪ್ರತಿ ರಾಜ್ಯದ ಅನನ್ಯತೆಯಂತೆ ಪ್ರತಿ ರಾಜ್ಯದ ಸಮಸ್ಯೆಗಳು ಬೇರೆ ಬೇರೆ. ಆ ಅನನ್ಯತೆ ಕಾಯ್ದುಕೊಳ್ಳುವುದು ಮತ್ತು ನಮಗೆ ಹತ್ತಿರವಾದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಬೇಕು, ಅಂತಾದಕ್ಕೆ ಒತ್ತುನೀಡುವ ಜನಪ್ರತಿನಿಧಿಗಳನ್ನು, ಅಂತಹ ಪಕ್ಷಗಳನ್ನು ಆಯ್ಕೆ ಮಾಡುವ ಮತ್ತು ಬೇಕಿದ್ದಲ್ಲಿ ಬದಲಿಸುವ ಅವಕಾಶ ರಾಜ್ಯಕ್ಕೆ ರಾಜ್ಯದ ಜನತೆಗೆ ಇರಬೇಕು, ಮತ್ತು ಆ ಕೆಲಸಕ್ಕೆ ಅಗತ್ಯವಾದ ಸಮಯ ಮತ್ತು ಕಾಲವೂ ಅಗತ್ಯ. ಇದನ್ನು ಕಸಿಯುವ ಹುನ್ನಾರವೇ ಒಂದು ದೇಶ – ಒಂದು ಚುನಾವಣೆಯ ರಣತಂತ್ರ. –  ಗುರುಪ್ರಸಾದ್ ಡಿ.ಎನ್ 

ಈಗ ಮತ್ತೆ ಪ್ರಧಾನ ಮಂತ್ರಿ ಮೋದಿ ’ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ತಮ್ಮ ಹಳೆಯ ಯೋಜನೆಯನ್ನು ಮುಂಡಿಟ್ಟುಕೊಂಡು ಬಂದಿದ್ದಾರೆ. ದೇಶದ ಸಂಪತ್ತು, ಸಮಯ ಉಳಿಸಲು ಈ ಯೋಜನೆ ಮುಖ್ಯ ಎನ್ನುತ್ತಿದ್ದಾರೆ. ಆದರೆ, ಇದು ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳ ಅಧಿಕಾರವನ್ನು -ಬಲವನ್ನು ಕುಂದಿಸುವ ಕೆಲಸ ಎಂದು ಚಿಂತಕರು ಆರೋಪಿಸಿದ್ದಾರೆ.

ಅಧ್ಯಕ್ಷೀಯ ಮಾದರಿಯ ಎರಡು ನಾಯಕರ ನಡುವಿನ ಮಹಾಸಮರ ಎಂಬಂತೆ ಬಿಂಬಿಸುವಂತಹ ಚುನಾವಣಾ ಮಾದರಿಯನ್ನು ರಾಜ್ಯ ಸರ್ಕಾರಗಳ ಚುನಾವಣೆಯ ಜೊತೆಗೆ ತಳುಕು ಹಾಕುವ ಈ ರಣತಂತ್ರ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ:  ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...