Homeಕರ್ನಾಟಕಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

- Advertisement -
- Advertisement -

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ ಮತ್ತು ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ ಎಂದು ಹಿರಿಯ ಚಿಂತಕ ಶಿವಸುಂದರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಭಾರತೀಯ ವಿದ್ಯಾಭವನ ಕೆ.ಆರ್.ವಿ.ಸಭಾಂಗಣದಲ್ಲಿ ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಸುಂದರ್ ಅವರು, ಚುನಾವಣೆಗಾಗಿ ಇಡೀ ವಿಶ್ವದಲ್ಲಿಯೇ ಹೆಚ್ಚು ಹಣ ಖರ್ಚು ಮಾಡಿರುವ ಪಕ್ಷ ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ. ಇತರೆ ಪಕ್ಷಗಳು ಬೆಳೆಯಬಾರದು ಎಂದು ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪವನ್ನು ಬಿಜೆಪಿ ಮುಂದಿಟ್ಟಿದೆ ಎಂದು ಹೇಳಿದ್ದಾರೆ.

ಒಂದು ದೇಶ-ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ. ಬಿಜೆಪಿ ನೂರು ವರ್ಷಗಳ ಅಜೆಂಡಾ ಮುಂದಿಟ್ಟು ಮಾತನಾಡುತ್ತಿದೆ. ಈ ಕಲ್ಪನೆಯ ಹಿಂದೆ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್ ಮಾತನಾಡಿ, ಒಂದು ದೇಶ-ಒಂದು ಚುನಾವಣೆ ಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಪ್ರಾದೇಶಿಕ ಆಶಯಗಳನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ವಕ್ತಾರ ಸಿ.ಎಂ.ಫೈಜ್ ಮಾತನಾಡಿ, ಒಂದು ದೇಶ ಒಂದು ಚುನಾವಣೆ, ಆಧುನಿಕ ಹಿಟ್ಲರ್ ಪಡೆಗಳು ತಂದಿರುವ ಒಂದು ಪ್ರಸ್ತಾಪವಾಗಿದೆ. ಸಂವಿಧಾನದ ಹಲವು ವಿಧಿಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಖರ್ಚು ಉಳಿತಾಯ ಎಂಬುವುದು ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.ಪದೇ ಪದೇ ಚುನಾವಣೆ ನಡೆದರೆ ಸಮಯ ಹಾಳಾಗುತ್ತದೆ ಎಂದು ಹೇಳುವವರು ಮುಂದಿನ ದಿನಗಳಲ್ಲಿ 15 ವರ್ಷಗಳಿಗೊಮ್ಮೆ ಚುನಾವಣೆ ನಡೆಸಲು  ಸಮಿತಿ ರಚಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.

ಎಎಪಿಯ ಪೃಥ್ವಿ ರೆಡ್ಡಿ ಮಾತನಾಡಿ, ಬಿಜೆಪಿಯ ಅಜೆಂಡಾ ಇರುವುದೇ ಒಂದು ನಾಯಕ, ಒಂದು ಪಕ್ಷ ಎಂಬುದಾಗಿದೆ. ರಾಷ್ಟ್ರೀಯ, ರಾಜ್ಯ, ಮುನ್ಸಿಪಲ್, ಹಾಗೂ ಪಂಚಾಯತ್ ಚುನಾವಣೆಗಳ ವಿಷಯಗಳೇ ಬೇರೆ ಬೇರೆಯಾಗಿದೆ. ಆದರೆ ಬಿಜೆಪಿಗೆ ಯಾವುದೇ ವಿಷಯ ಮತ್ತು ನಾಯಕನಿಲ್ಲದ ಕಾರಣ ಈ ರೀತಿಯಾಗಿ ಗೊಂದಲ ಸೃಷ್ಠಿಸಲು ಮುಂದಾಗಿದೆ ಎಂದರು.

ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಸಾರಿಯೊ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ಕಲ್ಪನೆಗೆ ತಮಗೆ ಬೇಕಾದಂತಹ ವರದಿ ಬರೆದುಕೊಡಲು ಹೊಸ ಸಮಿತಿ ರಚನೆ ಮಾಡಿದ್ದಾರೆ. ಸಂಪೂರ್ಣವಾಗಿ ಸಂವಿಧಾನದ ಆಶಯಗಳನ್ನು ಬದಿಗಿಟ್ಟು ಸರ್ಜರಿ ಮಾಡಲಾಗುತ್ತಿದೆ. ಸಂವಿಧಾನ ಒಪ್ಪದ ಆರೆಸ್ಸೆಸ್ ನಾಯಕ ಗೋಲ್ವಾಲ್ಕರ್ ಅವರ ಆಶಯದಂತೆ ರಾಜಕೀಯ ಯಜಮಾನಿಕೆಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಚಿಂತಕ ಎ.ನಾರಾಯಣ, ರಂಗಭೂಮಿ ಕಲಾವಿದೆ ಸುಷ್ಮಾ ವೀರ್, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಚೇತನ್ ಜೀರಾಳ್ ಭಾಗವಹಿಸಿದ್ದರು.

ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...