Homeಕರ್ನಾಟಕಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

- Advertisement -
- Advertisement -

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ ಮತ್ತು ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ ಎಂದು ಹಿರಿಯ ಚಿಂತಕ ಶಿವಸುಂದರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಭಾರತೀಯ ವಿದ್ಯಾಭವನ ಕೆ.ಆರ್.ವಿ.ಸಭಾಂಗಣದಲ್ಲಿ ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಸುಂದರ್ ಅವರು, ಚುನಾವಣೆಗಾಗಿ ಇಡೀ ವಿಶ್ವದಲ್ಲಿಯೇ ಹೆಚ್ಚು ಹಣ ಖರ್ಚು ಮಾಡಿರುವ ಪಕ್ಷ ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ. ಇತರೆ ಪಕ್ಷಗಳು ಬೆಳೆಯಬಾರದು ಎಂದು ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪವನ್ನು ಬಿಜೆಪಿ ಮುಂದಿಟ್ಟಿದೆ ಎಂದು ಹೇಳಿದ್ದಾರೆ.

ಒಂದು ದೇಶ-ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ. ಬಿಜೆಪಿ ನೂರು ವರ್ಷಗಳ ಅಜೆಂಡಾ ಮುಂದಿಟ್ಟು ಮಾತನಾಡುತ್ತಿದೆ. ಈ ಕಲ್ಪನೆಯ ಹಿಂದೆ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್ ಮಾತನಾಡಿ, ಒಂದು ದೇಶ-ಒಂದು ಚುನಾವಣೆ ಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಪ್ರಾದೇಶಿಕ ಆಶಯಗಳನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ವಕ್ತಾರ ಸಿ.ಎಂ.ಫೈಜ್ ಮಾತನಾಡಿ, ಒಂದು ದೇಶ ಒಂದು ಚುನಾವಣೆ, ಆಧುನಿಕ ಹಿಟ್ಲರ್ ಪಡೆಗಳು ತಂದಿರುವ ಒಂದು ಪ್ರಸ್ತಾಪವಾಗಿದೆ. ಸಂವಿಧಾನದ ಹಲವು ವಿಧಿಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಖರ್ಚು ಉಳಿತಾಯ ಎಂಬುವುದು ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.ಪದೇ ಪದೇ ಚುನಾವಣೆ ನಡೆದರೆ ಸಮಯ ಹಾಳಾಗುತ್ತದೆ ಎಂದು ಹೇಳುವವರು ಮುಂದಿನ ದಿನಗಳಲ್ಲಿ 15 ವರ್ಷಗಳಿಗೊಮ್ಮೆ ಚುನಾವಣೆ ನಡೆಸಲು  ಸಮಿತಿ ರಚಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.

ಎಎಪಿಯ ಪೃಥ್ವಿ ರೆಡ್ಡಿ ಮಾತನಾಡಿ, ಬಿಜೆಪಿಯ ಅಜೆಂಡಾ ಇರುವುದೇ ಒಂದು ನಾಯಕ, ಒಂದು ಪಕ್ಷ ಎಂಬುದಾಗಿದೆ. ರಾಷ್ಟ್ರೀಯ, ರಾಜ್ಯ, ಮುನ್ಸಿಪಲ್, ಹಾಗೂ ಪಂಚಾಯತ್ ಚುನಾವಣೆಗಳ ವಿಷಯಗಳೇ ಬೇರೆ ಬೇರೆಯಾಗಿದೆ. ಆದರೆ ಬಿಜೆಪಿಗೆ ಯಾವುದೇ ವಿಷಯ ಮತ್ತು ನಾಯಕನಿಲ್ಲದ ಕಾರಣ ಈ ರೀತಿಯಾಗಿ ಗೊಂದಲ ಸೃಷ್ಠಿಸಲು ಮುಂದಾಗಿದೆ ಎಂದರು.

ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಸಾರಿಯೊ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ಕಲ್ಪನೆಗೆ ತಮಗೆ ಬೇಕಾದಂತಹ ವರದಿ ಬರೆದುಕೊಡಲು ಹೊಸ ಸಮಿತಿ ರಚನೆ ಮಾಡಿದ್ದಾರೆ. ಸಂಪೂರ್ಣವಾಗಿ ಸಂವಿಧಾನದ ಆಶಯಗಳನ್ನು ಬದಿಗಿಟ್ಟು ಸರ್ಜರಿ ಮಾಡಲಾಗುತ್ತಿದೆ. ಸಂವಿಧಾನ ಒಪ್ಪದ ಆರೆಸ್ಸೆಸ್ ನಾಯಕ ಗೋಲ್ವಾಲ್ಕರ್ ಅವರ ಆಶಯದಂತೆ ರಾಜಕೀಯ ಯಜಮಾನಿಕೆಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಚಿಂತಕ ಎ.ನಾರಾಯಣ, ರಂಗಭೂಮಿ ಕಲಾವಿದೆ ಸುಷ್ಮಾ ವೀರ್, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಚೇತನ್ ಜೀರಾಳ್ ಭಾಗವಹಿಸಿದ್ದರು.

ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...