Homeಕರ್ನಾಟಕಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

- Advertisement -
- Advertisement -

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ ಮತ್ತು ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ ಎಂದು ಹಿರಿಯ ಚಿಂತಕ ಶಿವಸುಂದರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಭಾರತೀಯ ವಿದ್ಯಾಭವನ ಕೆ.ಆರ್.ವಿ.ಸಭಾಂಗಣದಲ್ಲಿ ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಸುಂದರ್ ಅವರು, ಚುನಾವಣೆಗಾಗಿ ಇಡೀ ವಿಶ್ವದಲ್ಲಿಯೇ ಹೆಚ್ಚು ಹಣ ಖರ್ಚು ಮಾಡಿರುವ ಪಕ್ಷ ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ. ಇತರೆ ಪಕ್ಷಗಳು ಬೆಳೆಯಬಾರದು ಎಂದು ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪವನ್ನು ಬಿಜೆಪಿ ಮುಂದಿಟ್ಟಿದೆ ಎಂದು ಹೇಳಿದ್ದಾರೆ.

ಒಂದು ದೇಶ-ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ. ಬಿಜೆಪಿ ನೂರು ವರ್ಷಗಳ ಅಜೆಂಡಾ ಮುಂದಿಟ್ಟು ಮಾತನಾಡುತ್ತಿದೆ. ಈ ಕಲ್ಪನೆಯ ಹಿಂದೆ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್ ಮಾತನಾಡಿ, ಒಂದು ದೇಶ-ಒಂದು ಚುನಾವಣೆ ಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಪ್ರಾದೇಶಿಕ ಆಶಯಗಳನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ವಕ್ತಾರ ಸಿ.ಎಂ.ಫೈಜ್ ಮಾತನಾಡಿ, ಒಂದು ದೇಶ ಒಂದು ಚುನಾವಣೆ, ಆಧುನಿಕ ಹಿಟ್ಲರ್ ಪಡೆಗಳು ತಂದಿರುವ ಒಂದು ಪ್ರಸ್ತಾಪವಾಗಿದೆ. ಸಂವಿಧಾನದ ಹಲವು ವಿಧಿಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಖರ್ಚು ಉಳಿತಾಯ ಎಂಬುವುದು ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.ಪದೇ ಪದೇ ಚುನಾವಣೆ ನಡೆದರೆ ಸಮಯ ಹಾಳಾಗುತ್ತದೆ ಎಂದು ಹೇಳುವವರು ಮುಂದಿನ ದಿನಗಳಲ್ಲಿ 15 ವರ್ಷಗಳಿಗೊಮ್ಮೆ ಚುನಾವಣೆ ನಡೆಸಲು  ಸಮಿತಿ ರಚಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.

ಎಎಪಿಯ ಪೃಥ್ವಿ ರೆಡ್ಡಿ ಮಾತನಾಡಿ, ಬಿಜೆಪಿಯ ಅಜೆಂಡಾ ಇರುವುದೇ ಒಂದು ನಾಯಕ, ಒಂದು ಪಕ್ಷ ಎಂಬುದಾಗಿದೆ. ರಾಷ್ಟ್ರೀಯ, ರಾಜ್ಯ, ಮುನ್ಸಿಪಲ್, ಹಾಗೂ ಪಂಚಾಯತ್ ಚುನಾವಣೆಗಳ ವಿಷಯಗಳೇ ಬೇರೆ ಬೇರೆಯಾಗಿದೆ. ಆದರೆ ಬಿಜೆಪಿಗೆ ಯಾವುದೇ ವಿಷಯ ಮತ್ತು ನಾಯಕನಿಲ್ಲದ ಕಾರಣ ಈ ರೀತಿಯಾಗಿ ಗೊಂದಲ ಸೃಷ್ಠಿಸಲು ಮುಂದಾಗಿದೆ ಎಂದರು.

ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಸಾರಿಯೊ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ಕಲ್ಪನೆಗೆ ತಮಗೆ ಬೇಕಾದಂತಹ ವರದಿ ಬರೆದುಕೊಡಲು ಹೊಸ ಸಮಿತಿ ರಚನೆ ಮಾಡಿದ್ದಾರೆ. ಸಂಪೂರ್ಣವಾಗಿ ಸಂವಿಧಾನದ ಆಶಯಗಳನ್ನು ಬದಿಗಿಟ್ಟು ಸರ್ಜರಿ ಮಾಡಲಾಗುತ್ತಿದೆ. ಸಂವಿಧಾನ ಒಪ್ಪದ ಆರೆಸ್ಸೆಸ್ ನಾಯಕ ಗೋಲ್ವಾಲ್ಕರ್ ಅವರ ಆಶಯದಂತೆ ರಾಜಕೀಯ ಯಜಮಾನಿಕೆಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಚಿಂತಕ ಎ.ನಾರಾಯಣ, ರಂಗಭೂಮಿ ಕಲಾವಿದೆ ಸುಷ್ಮಾ ವೀರ್, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಚೇತನ್ ಜೀರಾಳ್ ಭಾಗವಹಿಸಿದ್ದರು.

ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...