Homeಕರ್ನಾಟಕಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

- Advertisement -
- Advertisement -

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ ಮತ್ತು ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ ಎಂದು ಹಿರಿಯ ಚಿಂತಕ ಶಿವಸುಂದರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಭಾರತೀಯ ವಿದ್ಯಾಭವನ ಕೆ.ಆರ್.ವಿ.ಸಭಾಂಗಣದಲ್ಲಿ ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಸುಂದರ್ ಅವರು, ಚುನಾವಣೆಗಾಗಿ ಇಡೀ ವಿಶ್ವದಲ್ಲಿಯೇ ಹೆಚ್ಚು ಹಣ ಖರ್ಚು ಮಾಡಿರುವ ಪಕ್ಷ ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ. ಇತರೆ ಪಕ್ಷಗಳು ಬೆಳೆಯಬಾರದು ಎಂದು ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪವನ್ನು ಬಿಜೆಪಿ ಮುಂದಿಟ್ಟಿದೆ ಎಂದು ಹೇಳಿದ್ದಾರೆ.

ಒಂದು ದೇಶ-ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ. ಬಿಜೆಪಿ ನೂರು ವರ್ಷಗಳ ಅಜೆಂಡಾ ಮುಂದಿಟ್ಟು ಮಾತನಾಡುತ್ತಿದೆ. ಈ ಕಲ್ಪನೆಯ ಹಿಂದೆ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್ ಮಾತನಾಡಿ, ಒಂದು ದೇಶ-ಒಂದು ಚುನಾವಣೆ ಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಪ್ರಾದೇಶಿಕ ಆಶಯಗಳನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ವಕ್ತಾರ ಸಿ.ಎಂ.ಫೈಜ್ ಮಾತನಾಡಿ, ಒಂದು ದೇಶ ಒಂದು ಚುನಾವಣೆ, ಆಧುನಿಕ ಹಿಟ್ಲರ್ ಪಡೆಗಳು ತಂದಿರುವ ಒಂದು ಪ್ರಸ್ತಾಪವಾಗಿದೆ. ಸಂವಿಧಾನದ ಹಲವು ವಿಧಿಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಖರ್ಚು ಉಳಿತಾಯ ಎಂಬುವುದು ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.ಪದೇ ಪದೇ ಚುನಾವಣೆ ನಡೆದರೆ ಸಮಯ ಹಾಳಾಗುತ್ತದೆ ಎಂದು ಹೇಳುವವರು ಮುಂದಿನ ದಿನಗಳಲ್ಲಿ 15 ವರ್ಷಗಳಿಗೊಮ್ಮೆ ಚುನಾವಣೆ ನಡೆಸಲು  ಸಮಿತಿ ರಚಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.

ಎಎಪಿಯ ಪೃಥ್ವಿ ರೆಡ್ಡಿ ಮಾತನಾಡಿ, ಬಿಜೆಪಿಯ ಅಜೆಂಡಾ ಇರುವುದೇ ಒಂದು ನಾಯಕ, ಒಂದು ಪಕ್ಷ ಎಂಬುದಾಗಿದೆ. ರಾಷ್ಟ್ರೀಯ, ರಾಜ್ಯ, ಮುನ್ಸಿಪಲ್, ಹಾಗೂ ಪಂಚಾಯತ್ ಚುನಾವಣೆಗಳ ವಿಷಯಗಳೇ ಬೇರೆ ಬೇರೆಯಾಗಿದೆ. ಆದರೆ ಬಿಜೆಪಿಗೆ ಯಾವುದೇ ವಿಷಯ ಮತ್ತು ನಾಯಕನಿಲ್ಲದ ಕಾರಣ ಈ ರೀತಿಯಾಗಿ ಗೊಂದಲ ಸೃಷ್ಠಿಸಲು ಮುಂದಾಗಿದೆ ಎಂದರು.

ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಸಾರಿಯೊ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ಕಲ್ಪನೆಗೆ ತಮಗೆ ಬೇಕಾದಂತಹ ವರದಿ ಬರೆದುಕೊಡಲು ಹೊಸ ಸಮಿತಿ ರಚನೆ ಮಾಡಿದ್ದಾರೆ. ಸಂಪೂರ್ಣವಾಗಿ ಸಂವಿಧಾನದ ಆಶಯಗಳನ್ನು ಬದಿಗಿಟ್ಟು ಸರ್ಜರಿ ಮಾಡಲಾಗುತ್ತಿದೆ. ಸಂವಿಧಾನ ಒಪ್ಪದ ಆರೆಸ್ಸೆಸ್ ನಾಯಕ ಗೋಲ್ವಾಲ್ಕರ್ ಅವರ ಆಶಯದಂತೆ ರಾಜಕೀಯ ಯಜಮಾನಿಕೆಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಚಿಂತಕ ಎ.ನಾರಾಯಣ, ರಂಗಭೂಮಿ ಕಲಾವಿದೆ ಸುಷ್ಮಾ ವೀರ್, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಚೇತನ್ ಜೀರಾಳ್ ಭಾಗವಹಿಸಿದ್ದರು.

ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

168 ಮಕ್ಕಳನ್ನು ಕೊಂದವರ ನೆನಪಿಡಿ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....