Homeಕರ್ನಾಟಕಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

- Advertisement -
- Advertisement -

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ ಮತ್ತು ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ ಎಂದು ಹಿರಿಯ ಚಿಂತಕ ಶಿವಸುಂದರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಭಾರತೀಯ ವಿದ್ಯಾಭವನ ಕೆ.ಆರ್.ವಿ.ಸಭಾಂಗಣದಲ್ಲಿ ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಸುಂದರ್ ಅವರು, ಚುನಾವಣೆಗಾಗಿ ಇಡೀ ವಿಶ್ವದಲ್ಲಿಯೇ ಹೆಚ್ಚು ಹಣ ಖರ್ಚು ಮಾಡಿರುವ ಪಕ್ಷ ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ. ಇತರೆ ಪಕ್ಷಗಳು ಬೆಳೆಯಬಾರದು ಎಂದು ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪವನ್ನು ಬಿಜೆಪಿ ಮುಂದಿಟ್ಟಿದೆ ಎಂದು ಹೇಳಿದ್ದಾರೆ.

ಒಂದು ದೇಶ-ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ. ಬಿಜೆಪಿ ನೂರು ವರ್ಷಗಳ ಅಜೆಂಡಾ ಮುಂದಿಟ್ಟು ಮಾತನಾಡುತ್ತಿದೆ. ಈ ಕಲ್ಪನೆಯ ಹಿಂದೆ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್ ಮಾತನಾಡಿ, ಒಂದು ದೇಶ-ಒಂದು ಚುನಾವಣೆ ಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಪ್ರಾದೇಶಿಕ ಆಶಯಗಳನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ವಕ್ತಾರ ಸಿ.ಎಂ.ಫೈಜ್ ಮಾತನಾಡಿ, ಒಂದು ದೇಶ ಒಂದು ಚುನಾವಣೆ, ಆಧುನಿಕ ಹಿಟ್ಲರ್ ಪಡೆಗಳು ತಂದಿರುವ ಒಂದು ಪ್ರಸ್ತಾಪವಾಗಿದೆ. ಸಂವಿಧಾನದ ಹಲವು ವಿಧಿಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಖರ್ಚು ಉಳಿತಾಯ ಎಂಬುವುದು ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.ಪದೇ ಪದೇ ಚುನಾವಣೆ ನಡೆದರೆ ಸಮಯ ಹಾಳಾಗುತ್ತದೆ ಎಂದು ಹೇಳುವವರು ಮುಂದಿನ ದಿನಗಳಲ್ಲಿ 15 ವರ್ಷಗಳಿಗೊಮ್ಮೆ ಚುನಾವಣೆ ನಡೆಸಲು  ಸಮಿತಿ ರಚಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.

ಎಎಪಿಯ ಪೃಥ್ವಿ ರೆಡ್ಡಿ ಮಾತನಾಡಿ, ಬಿಜೆಪಿಯ ಅಜೆಂಡಾ ಇರುವುದೇ ಒಂದು ನಾಯಕ, ಒಂದು ಪಕ್ಷ ಎಂಬುದಾಗಿದೆ. ರಾಷ್ಟ್ರೀಯ, ರಾಜ್ಯ, ಮುನ್ಸಿಪಲ್, ಹಾಗೂ ಪಂಚಾಯತ್ ಚುನಾವಣೆಗಳ ವಿಷಯಗಳೇ ಬೇರೆ ಬೇರೆಯಾಗಿದೆ. ಆದರೆ ಬಿಜೆಪಿಗೆ ಯಾವುದೇ ವಿಷಯ ಮತ್ತು ನಾಯಕನಿಲ್ಲದ ಕಾರಣ ಈ ರೀತಿಯಾಗಿ ಗೊಂದಲ ಸೃಷ್ಠಿಸಲು ಮುಂದಾಗಿದೆ ಎಂದರು.

ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಸಾರಿಯೊ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ಕಲ್ಪನೆಗೆ ತಮಗೆ ಬೇಕಾದಂತಹ ವರದಿ ಬರೆದುಕೊಡಲು ಹೊಸ ಸಮಿತಿ ರಚನೆ ಮಾಡಿದ್ದಾರೆ. ಸಂಪೂರ್ಣವಾಗಿ ಸಂವಿಧಾನದ ಆಶಯಗಳನ್ನು ಬದಿಗಿಟ್ಟು ಸರ್ಜರಿ ಮಾಡಲಾಗುತ್ತಿದೆ. ಸಂವಿಧಾನ ಒಪ್ಪದ ಆರೆಸ್ಸೆಸ್ ನಾಯಕ ಗೋಲ್ವಾಲ್ಕರ್ ಅವರ ಆಶಯದಂತೆ ರಾಜಕೀಯ ಯಜಮಾನಿಕೆಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಚಿಂತಕ ಎ.ನಾರಾಯಣ, ರಂಗಭೂಮಿ ಕಲಾವಿದೆ ಸುಷ್ಮಾ ವೀರ್, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಚೇತನ್ ಜೀರಾಳ್ ಭಾಗವಹಿಸಿದ್ದರು.

ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಪಿ: ತಂದೆ ಮತ್ತು ಮಾನಸಿಕ ಅಸ್ವಸ್ಥ ಮಗಳನ್ನು ಐದು ವರ್ಷ ಕೋಣೆಯಲ್ಲಿ ಕೂಡಿ ಹಾಕಿದ ಸೇವಕ ದಂಪತಿ: ತಂದೆ ಸಾವು, ಅಸ್ಥಿಪಂಜರದಂತೆ ಪತ್ತೆಯಾದ ಮಗಳು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಮಾನಸಿಕ ಅಸ್ವಸ್ಥ ಮಗಳನ್ನು ಅವರ ಆರೈಕೆದಾರರು ಐದು ವರ್ಷಗಳ ಕಾಲ ಬಂಧಿಯಾಗಿಟ್ಟು ಚಿತ್ರಹಿಂಸೆ ನೀಡಿ, ಆ ವ್ಯಕ್ತಿಯ ಸಾವಿಗೆ ಕಾರಣವಾದ...

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ...

ಬೀದಿ ನಾಯಿ ಎಣಿಕೆ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿಲ್ಲ: ದೆಹಲಿ ಸರ್ಕಾರದ ಸ್ಪಷ್ಟನೆ

ನಗರದಲ್ಲಿ ಬೀದಿ ನಾಯಿಗಳ ಎಣಿಕೆಗೆ ಯಾವುದೇ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಶಿಕ್ಷಕರಿಗೆ ಜನಗಣತಿ ಸಂಬಂಧಿತ ಕರ್ತವ್ಯಗಳಿಗೆ ಮಾತ್ರ ನಿಯೋಜಿಸಲಾಗಿದೆ. ಬೀದಿ ನಾಯಿ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳಿಗೆ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ ರೇವಣ್ಣ ಖುಲಾಸೆ

ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು...

ಅಧಿಕಾರಕ್ಕೆ ಬಂದರೆ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುತ್ತೇವೆ: ಅಮಿತ್ ಶಾ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸುವುದು ಬಿಜೆಪಿಯ ಮೊದಲ ಕೆಲಸ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ...

ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ: ತ್ರಿಪುರಾದಲ್ಲಿ ತೀವ್ರಗೊಂಡ ಪ್ರತಿಭಟನೆ; ಮೇಣದಬತ್ತಿ ಮೆರವಣಿಗೆ

ಅಂಜೆಲ್ ಚಕ್ಮಾ ಜನಾಂಗೀಯ ಹತ್ಯೆ ಖಂಡಿಸಿ ತ್ರಿಪುರಾದಲ್ಲಿ ಪ್ರತಿಭಟನೆಗಳು, ಮೇಣದಬತ್ತಿ ಜಾಗೃತಿ ಮುಂದುವರೆದಿದೆ. ಹತ್ಯೆ ಸಂಬಂಧ ಪೊಲೀಸರು ಆರಂಭದಲ್ಲಿ ಎಫ್‌ಐಆರ್ ದಾಖಲಿಸುವಲ್ಲಿ ವಿಫಲರಾಗುವ ಮೂಲಕ ಅಪರಾಧದ ಸಾಕ್ಷಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಅಖಿಲ...

ತಮಿಳುನಾಡು: ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ವಾಪಸ್ ಕಳುಹಿಸಿದ ದ್ರೌಪದಿ ಮುರ್ಮು: ಸ್ಟಾಲಿನ್ ಸರ್ಕಾರಕ್ಕೆ ಹಿನ್ನೆಡೆ

ಚೆನ್ನೈ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮಿಳುನಾಡು ವಿಶ್ವವಿದ್ಯಾಲಯದ ಮದ್ರಾಸ್ ತಿದ್ದುಪಡಿ ಮಸೂದೆಯನ್ನು ಹಿಂದಿರುಗಿಸಿದ್ದಾರೆ, ಇದು ರಾಜ್ಯ ಸರ್ಕಾರಕ್ಕೆ ತನ್ನ ಉಪಕುಲಪತಿಯನ್ನು ನೇಮಿಸಲು ಅಧಿಕಾರ ನೀಡುತ್ತದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಏಪ್ರಿಲ್...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ನೊಂದ ಕುಟಂಬವನ್ನು ಭೇಟಿಯಾದ ಮಾವಳ್ಳಿ ಶಂಕರ್

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯಿಂದಲೇ ಭೀಕರವಾಗಿ ಹತ್ಯೆಗೀಡಾದ ಗರ್ಭಿಣಿ ಯುವತಿ ಮಾನ್ಯ ಪಾಟೀಲ್ ಅವರ ಪತಿ ವಿವೇಕಾನಂದ ಮತ್ತು ಹಲ್ಲೆಗೆ ಒಳಗಾದ ಕುಟುಂಬದ ಸದಸ್ಯರನ್ನು ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್...

ತಲವಾರು ವಿತರಣೆ : ಹಿಂದೂ ರಕ್ಷಾ ದಳದ 10 ದುಷ್ಕರ್ಮಿಗಳ ಬಂಧನ

ಉತ್ತರ ಪ್ರದೇಶದ ಗಾಝಿಯಾಬಾದ್‌ನ ಶಾಲಿಮಾರ್ ಗಾರ್ಡನ್ ಕಾಲೋನಿಯಲ್ಲಿ ತಲವಾರು ವಿತರಿಸಿದ ಆರೋಪದ ಮೇಲೆ ಹಿಂದೂ ರಕ್ಷಾ ದಳದ ಹತ್ತು ದುಷ್ಕರ್ಮಿಗಳನ್ನು ಪೊಲೀಸರು ಸೋಮವಾರ (ಡಿ.29) ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಾಲಿಮಾರ್...