Homeಕರ್ನಾಟಕಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

- Advertisement -
- Advertisement -

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ ಮತ್ತು ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ ಎಂದು ಹಿರಿಯ ಚಿಂತಕ ಶಿವಸುಂದರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಭಾರತೀಯ ವಿದ್ಯಾಭವನ ಕೆ.ಆರ್.ವಿ.ಸಭಾಂಗಣದಲ್ಲಿ ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಸುಂದರ್ ಅವರು, ಚುನಾವಣೆಗಾಗಿ ಇಡೀ ವಿಶ್ವದಲ್ಲಿಯೇ ಹೆಚ್ಚು ಹಣ ಖರ್ಚು ಮಾಡಿರುವ ಪಕ್ಷ ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ. ಇತರೆ ಪಕ್ಷಗಳು ಬೆಳೆಯಬಾರದು ಎಂದು ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪವನ್ನು ಬಿಜೆಪಿ ಮುಂದಿಟ್ಟಿದೆ ಎಂದು ಹೇಳಿದ್ದಾರೆ.

ಒಂದು ದೇಶ-ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ. ಬಿಜೆಪಿ ನೂರು ವರ್ಷಗಳ ಅಜೆಂಡಾ ಮುಂದಿಟ್ಟು ಮಾತನಾಡುತ್ತಿದೆ. ಈ ಕಲ್ಪನೆಯ ಹಿಂದೆ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್ ಮಾತನಾಡಿ, ಒಂದು ದೇಶ-ಒಂದು ಚುನಾವಣೆ ಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಪ್ರಾದೇಶಿಕ ಆಶಯಗಳನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ವಕ್ತಾರ ಸಿ.ಎಂ.ಫೈಜ್ ಮಾತನಾಡಿ, ಒಂದು ದೇಶ ಒಂದು ಚುನಾವಣೆ, ಆಧುನಿಕ ಹಿಟ್ಲರ್ ಪಡೆಗಳು ತಂದಿರುವ ಒಂದು ಪ್ರಸ್ತಾಪವಾಗಿದೆ. ಸಂವಿಧಾನದ ಹಲವು ವಿಧಿಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಖರ್ಚು ಉಳಿತಾಯ ಎಂಬುವುದು ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.ಪದೇ ಪದೇ ಚುನಾವಣೆ ನಡೆದರೆ ಸಮಯ ಹಾಳಾಗುತ್ತದೆ ಎಂದು ಹೇಳುವವರು ಮುಂದಿನ ದಿನಗಳಲ್ಲಿ 15 ವರ್ಷಗಳಿಗೊಮ್ಮೆ ಚುನಾವಣೆ ನಡೆಸಲು  ಸಮಿತಿ ರಚಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.

ಎಎಪಿಯ ಪೃಥ್ವಿ ರೆಡ್ಡಿ ಮಾತನಾಡಿ, ಬಿಜೆಪಿಯ ಅಜೆಂಡಾ ಇರುವುದೇ ಒಂದು ನಾಯಕ, ಒಂದು ಪಕ್ಷ ಎಂಬುದಾಗಿದೆ. ರಾಷ್ಟ್ರೀಯ, ರಾಜ್ಯ, ಮುನ್ಸಿಪಲ್, ಹಾಗೂ ಪಂಚಾಯತ್ ಚುನಾವಣೆಗಳ ವಿಷಯಗಳೇ ಬೇರೆ ಬೇರೆಯಾಗಿದೆ. ಆದರೆ ಬಿಜೆಪಿಗೆ ಯಾವುದೇ ವಿಷಯ ಮತ್ತು ನಾಯಕನಿಲ್ಲದ ಕಾರಣ ಈ ರೀತಿಯಾಗಿ ಗೊಂದಲ ಸೃಷ್ಠಿಸಲು ಮುಂದಾಗಿದೆ ಎಂದರು.

ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಸಾರಿಯೊ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ಕಲ್ಪನೆಗೆ ತಮಗೆ ಬೇಕಾದಂತಹ ವರದಿ ಬರೆದುಕೊಡಲು ಹೊಸ ಸಮಿತಿ ರಚನೆ ಮಾಡಿದ್ದಾರೆ. ಸಂಪೂರ್ಣವಾಗಿ ಸಂವಿಧಾನದ ಆಶಯಗಳನ್ನು ಬದಿಗಿಟ್ಟು ಸರ್ಜರಿ ಮಾಡಲಾಗುತ್ತಿದೆ. ಸಂವಿಧಾನ ಒಪ್ಪದ ಆರೆಸ್ಸೆಸ್ ನಾಯಕ ಗೋಲ್ವಾಲ್ಕರ್ ಅವರ ಆಶಯದಂತೆ ರಾಜಕೀಯ ಯಜಮಾನಿಕೆಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಚಿಂತಕ ಎ.ನಾರಾಯಣ, ರಂಗಭೂಮಿ ಕಲಾವಿದೆ ಸುಷ್ಮಾ ವೀರ್, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಚೇತನ್ ಜೀರಾಳ್ ಭಾಗವಹಿಸಿದ್ದರು.

ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...