Homeಕರ್ನಾಟಕಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

- Advertisement -
- Advertisement -

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ ಮತ್ತು ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ ಎಂದು ಹಿರಿಯ ಚಿಂತಕ ಶಿವಸುಂದರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಭಾರತೀಯ ವಿದ್ಯಾಭವನ ಕೆ.ಆರ್.ವಿ.ಸಭಾಂಗಣದಲ್ಲಿ ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಸುಂದರ್ ಅವರು, ಚುನಾವಣೆಗಾಗಿ ಇಡೀ ವಿಶ್ವದಲ್ಲಿಯೇ ಹೆಚ್ಚು ಹಣ ಖರ್ಚು ಮಾಡಿರುವ ಪಕ್ಷ ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ. ಇತರೆ ಪಕ್ಷಗಳು ಬೆಳೆಯಬಾರದು ಎಂದು ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪವನ್ನು ಬಿಜೆಪಿ ಮುಂದಿಟ್ಟಿದೆ ಎಂದು ಹೇಳಿದ್ದಾರೆ.

ಒಂದು ದೇಶ-ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ. ಬಿಜೆಪಿ ನೂರು ವರ್ಷಗಳ ಅಜೆಂಡಾ ಮುಂದಿಟ್ಟು ಮಾತನಾಡುತ್ತಿದೆ. ಈ ಕಲ್ಪನೆಯ ಹಿಂದೆ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್ ಮಾತನಾಡಿ, ಒಂದು ದೇಶ-ಒಂದು ಚುನಾವಣೆ ಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಪ್ರಾದೇಶಿಕ ಆಶಯಗಳನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ವಕ್ತಾರ ಸಿ.ಎಂ.ಫೈಜ್ ಮಾತನಾಡಿ, ಒಂದು ದೇಶ ಒಂದು ಚುನಾವಣೆ, ಆಧುನಿಕ ಹಿಟ್ಲರ್ ಪಡೆಗಳು ತಂದಿರುವ ಒಂದು ಪ್ರಸ್ತಾಪವಾಗಿದೆ. ಸಂವಿಧಾನದ ಹಲವು ವಿಧಿಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಖರ್ಚು ಉಳಿತಾಯ ಎಂಬುವುದು ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.ಪದೇ ಪದೇ ಚುನಾವಣೆ ನಡೆದರೆ ಸಮಯ ಹಾಳಾಗುತ್ತದೆ ಎಂದು ಹೇಳುವವರು ಮುಂದಿನ ದಿನಗಳಲ್ಲಿ 15 ವರ್ಷಗಳಿಗೊಮ್ಮೆ ಚುನಾವಣೆ ನಡೆಸಲು  ಸಮಿತಿ ರಚಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.

ಎಎಪಿಯ ಪೃಥ್ವಿ ರೆಡ್ಡಿ ಮಾತನಾಡಿ, ಬಿಜೆಪಿಯ ಅಜೆಂಡಾ ಇರುವುದೇ ಒಂದು ನಾಯಕ, ಒಂದು ಪಕ್ಷ ಎಂಬುದಾಗಿದೆ. ರಾಷ್ಟ್ರೀಯ, ರಾಜ್ಯ, ಮುನ್ಸಿಪಲ್, ಹಾಗೂ ಪಂಚಾಯತ್ ಚುನಾವಣೆಗಳ ವಿಷಯಗಳೇ ಬೇರೆ ಬೇರೆಯಾಗಿದೆ. ಆದರೆ ಬಿಜೆಪಿಗೆ ಯಾವುದೇ ವಿಷಯ ಮತ್ತು ನಾಯಕನಿಲ್ಲದ ಕಾರಣ ಈ ರೀತಿಯಾಗಿ ಗೊಂದಲ ಸೃಷ್ಠಿಸಲು ಮುಂದಾಗಿದೆ ಎಂದರು.

ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಸಾರಿಯೊ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ಕಲ್ಪನೆಗೆ ತಮಗೆ ಬೇಕಾದಂತಹ ವರದಿ ಬರೆದುಕೊಡಲು ಹೊಸ ಸಮಿತಿ ರಚನೆ ಮಾಡಿದ್ದಾರೆ. ಸಂಪೂರ್ಣವಾಗಿ ಸಂವಿಧಾನದ ಆಶಯಗಳನ್ನು ಬದಿಗಿಟ್ಟು ಸರ್ಜರಿ ಮಾಡಲಾಗುತ್ತಿದೆ. ಸಂವಿಧಾನ ಒಪ್ಪದ ಆರೆಸ್ಸೆಸ್ ನಾಯಕ ಗೋಲ್ವಾಲ್ಕರ್ ಅವರ ಆಶಯದಂತೆ ರಾಜಕೀಯ ಯಜಮಾನಿಕೆಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಚಿಂತಕ ಎ.ನಾರಾಯಣ, ರಂಗಭೂಮಿ ಕಲಾವಿದೆ ಸುಷ್ಮಾ ವೀರ್, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಚೇತನ್ ಜೀರಾಳ್ ಭಾಗವಹಿಸಿದ್ದರು.

ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...