Homeಕರ್ನಾಟಕಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

- Advertisement -
- Advertisement -

ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ ಮತ್ತು ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ ಎಂದು ಹಿರಿಯ ಚಿಂತಕ ಶಿವಸುಂದರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಭಾರತೀಯ ವಿದ್ಯಾಭವನ ಕೆ.ಆರ್.ವಿ.ಸಭಾಂಗಣದಲ್ಲಿ ಚಿಂತನ ಕರ್ನಾಟಕ ವೇದಿಕೆಯ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಸುಂದರ್ ಅವರು, ಚುನಾವಣೆಗಾಗಿ ಇಡೀ ವಿಶ್ವದಲ್ಲಿಯೇ ಹೆಚ್ಚು ಹಣ ಖರ್ಚು ಮಾಡಿರುವ ಪಕ್ಷ ಬಿಜೆಪಿ ಎಂಬುದು ಎಲ್ಲರಿಗೂ ತಿಳಿದಿದೆ. ಇತರೆ ಪಕ್ಷಗಳು ಬೆಳೆಯಬಾರದು ಎಂದು ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾಪವನ್ನು ಬಿಜೆಪಿ ಮುಂದಿಟ್ಟಿದೆ ಎಂದು ಹೇಳಿದ್ದಾರೆ.

ಒಂದು ದೇಶ-ಒಂದು ಚುನಾವಣೆ ನಡೆದರೆ ಹಣ ಉಳಿತಾಯವಾಗುತ್ತದೆ ಎನ್ನುವುದು ಹಾಸ್ಯಾಸ್ಪದ ಸಮರ್ಥನೆ. ಬಿಜೆಪಿ ನೂರು ವರ್ಷಗಳ ಅಜೆಂಡಾ ಮುಂದಿಟ್ಟು ಮಾತನಾಡುತ್ತಿದೆ. ಈ ಕಲ್ಪನೆಯ ಹಿಂದೆ ರಾಜಕೀಯ ಮತ್ತು ಸೈದ್ಧಾಂತಿಕ ಉದ್ದೇಶವಿದೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್ ಮಾತನಾಡಿ, ಒಂದು ದೇಶ-ಒಂದು ಚುನಾವಣೆ ಕಲ್ಪನೆ ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇದು ಪ್ರಾದೇಶಿಕ ಆಶಯಗಳನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಜೆಡಿಎಸ್ ವಕ್ತಾರ ಸಿ.ಎಂ.ಫೈಜ್ ಮಾತನಾಡಿ, ಒಂದು ದೇಶ ಒಂದು ಚುನಾವಣೆ, ಆಧುನಿಕ ಹಿಟ್ಲರ್ ಪಡೆಗಳು ತಂದಿರುವ ಒಂದು ಪ್ರಸ್ತಾಪವಾಗಿದೆ. ಸಂವಿಧಾನದ ಹಲವು ವಿಧಿಗಳನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಖರ್ಚು ಉಳಿತಾಯ ಎಂಬುವುದು ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.ಪದೇ ಪದೇ ಚುನಾವಣೆ ನಡೆದರೆ ಸಮಯ ಹಾಳಾಗುತ್ತದೆ ಎಂದು ಹೇಳುವವರು ಮುಂದಿನ ದಿನಗಳಲ್ಲಿ 15 ವರ್ಷಗಳಿಗೊಮ್ಮೆ ಚುನಾವಣೆ ನಡೆಸಲು  ಸಮಿತಿ ರಚಿಸಲು ಮುಂದಾಗುತ್ತಾರೆ ಎಂದು ಹೇಳಿದ್ದಾರೆ.

ಎಎಪಿಯ ಪೃಥ್ವಿ ರೆಡ್ಡಿ ಮಾತನಾಡಿ, ಬಿಜೆಪಿಯ ಅಜೆಂಡಾ ಇರುವುದೇ ಒಂದು ನಾಯಕ, ಒಂದು ಪಕ್ಷ ಎಂಬುದಾಗಿದೆ. ರಾಷ್ಟ್ರೀಯ, ರಾಜ್ಯ, ಮುನ್ಸಿಪಲ್, ಹಾಗೂ ಪಂಚಾಯತ್ ಚುನಾವಣೆಗಳ ವಿಷಯಗಳೇ ಬೇರೆ ಬೇರೆಯಾಗಿದೆ. ಆದರೆ ಬಿಜೆಪಿಗೆ ಯಾವುದೇ ವಿಷಯ ಮತ್ತು ನಾಯಕನಿಲ್ಲದ ಕಾರಣ ಈ ರೀತಿಯಾಗಿ ಗೊಂದಲ ಸೃಷ್ಠಿಸಲು ಮುಂದಾಗಿದೆ ಎಂದರು.

ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ.ರೊಸಾರಿಯೊ ಮಾತನಾಡಿ, ಒಂದು ದೇಶ, ಒಂದು ಚುನಾವಣೆ ಕಲ್ಪನೆಗೆ ತಮಗೆ ಬೇಕಾದಂತಹ ವರದಿ ಬರೆದುಕೊಡಲು ಹೊಸ ಸಮಿತಿ ರಚನೆ ಮಾಡಿದ್ದಾರೆ. ಸಂಪೂರ್ಣವಾಗಿ ಸಂವಿಧಾನದ ಆಶಯಗಳನ್ನು ಬದಿಗಿಟ್ಟು ಸರ್ಜರಿ ಮಾಡಲಾಗುತ್ತಿದೆ. ಸಂವಿಧಾನ ಒಪ್ಪದ ಆರೆಸ್ಸೆಸ್ ನಾಯಕ ಗೋಲ್ವಾಲ್ಕರ್ ಅವರ ಆಶಯದಂತೆ ರಾಜಕೀಯ ಯಜಮಾನಿಕೆಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂವಾದದಲ್ಲಿ ಚಿಂತಕ ಎ.ನಾರಾಯಣ, ರಂಗಭೂಮಿ ಕಲಾವಿದೆ ಸುಷ್ಮಾ ವೀರ್, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಚೇತನ್ ಜೀರಾಳ್ ಭಾಗವಹಿಸಿದ್ದರು.

ಇದನ್ನು ಓದಿ: ಹಿಂಸಾಚಾರ, ಅಸಮಾನತೆ, ರೈತರ-ಕಾರ್ಮಿಕರ ಸ್ಥಿತಿಗತಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...